‘ಅರ್ಜಿದಾರರ ವಿರುದ್ಧ 2010ರಲ್ಲಿ ದೂರು ದಾಖಲಿಸಿದ್ದ ಅಂದಿನ ಸಿಸಿಬಿ ಇನ್ಸ್ಪೆಕ್ಟರ್ ಎಚ್.ಕೆ.ಮರಿಸ್ವಾಮಿ ಗೌಡ ಮತ್ತು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದ ಅಂದಿನ ಯಶವಂತಪುರ ಠಾಣಾ ಇನ್ಸ್ಪೆಕ್ಟರ್ ಸೇರಿದಂತೆ ತಪ್ಪಿತಸ್ಥರ ವಿರುದ್ಧ ಮೂರು ತಿಂಗಳಲ್ಲಿ ಶಿಸ್ತು ಕ್ರಮ ಜರುಗಿಸಿ ವರದಿ ಸಲ್ಲಿಸಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಆದೇಶಿಸಲಾಗಿದೆ.