ಇದಕ್ಕೆ ಸಿಬಿಐ ಪರ ಹಾಜರಿದ್ದ ವಕೀಲ ಪಿ.ಪ್ರಸನ್ನ ಕುಮಾರ್, ’ನನಗೆ ಈ ವಿಷಯ ಈಗಲೇ ತಿಳಿದದ್ದು. ಹಾಗಾಗಿ, ಗಂಗಾಧರ ಶೆಟ್ಟಿ ಅವರನ್ನು ವಿಶೇಷ ಪ್ರಾಸಿಕ್ಯೂಟರ್ ಆಗಿ ನೇಮಕ ಮಾಡಿರುವ ಬಗ್ಗೆ ಸ್ಪಷ್ಟನೆ ಪಡೆಯಲು ಮತ್ತು ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು‘ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗದಂತೆ ಸಿಬಿಐಗೆ ಈ ಮೊದಲು ನೀಡಿದ್ದ ನಿರ್ದೇಶನವನ್ನು ವಿಸ್ತರಿಸಿ ವಿಚಾರಣೆ ಮುಂದೂಡಿತು.