<p><strong>ಬೆಂಗಳೂರು</strong>: ಎಸ್ಎಸ್ಎಲ್ಸಿ ವಾರ್ಷಿಕ ಹಿಂದಿ ಪರೀಕ್ಷೆಯಲ್ಲಿ ಅಂಕಗಳ ಬದಲು ಗ್ರೇಡ್ ನೀಡುವ ಶಿಕ್ಷಣ ಸಚಿವರ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿ ಮುಖಭಂಗ ಅನುಭವಿಸಿದವರ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು ಕಿಡಿಕಾರಿದ್ದಾರೆ.</p><p>ಈ ಕುರಿತು ಟ್ವೀಟ್ ಮಾಡಿರುವ ಅವರು, ಇದು ಹಿಂದಿ ಹೇರಿಕೆ ಪರವಾಗಿ ವಾದ ಮಾಡುತ್ತಿದ್ದವರಿಗೆ ನೇರವಾಗಿ ಮಾಡಿದ ಕಪಾಳಮೋಕ್ಷ. ಹಿಂದಿಯನ್ನೂ ಸಂಪೂರ್ಣವಾಗಿ ಕೈಬಿಡಲಾಗಿದೆ ಎಂಬ ಅರ್ಥದ ಹೇಳಿಕೆಯು ಮಾಧ್ಯಮಗಳಲ್ಲಿ ಪ್ರಕಟವಾಗಿಲ್ಲ. ಹೀಗಿದ್ದರೂ ಪೂರ್ವಾಗ್ರಹ ಪೀಡಿತವಾಗಿ ಅರ್ಜಿ ಸಲ್ಲಿಸಲಾಗಿದೆ ಎಂದು ಮುಖ್ಯನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠ ಕಿಡಿ ಕಾರಿದೆ. ಕೇವಲ ಪತ್ರಿಕಾ ಹೇಳಿಕೆ ಓದಿ ನೀವು ಪಿಐಎಲ್ ಸಲ್ಲಿಸಿದ್ದೀರಾ ಎಂದು ನ್ಯಾಯಪೀಠ ಅರ್ಜಿದಾರರನ್ನು ಪ್ರಶ್ನಿಸಿತ್ತು. ತೃತೀಯ ಭಾಷೆ ಗ್ರೇಡಿಂಗ್ ವ್ಯವಸ್ಥೆಯನ್ನು ಹಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಮನಸಿಗೆ ಬಂದಂತೆ ವ್ಯಾಖ್ಯಾನಿಸಿ ಗೊಂದಲ ಉಂಟುಮಾಡಿದ್ದರು. ಹಿಂದಿಯೂ ಸೇರಿದಂತೆ ಮೂರನೇ ಭಾಷೆಯ ಕಲಿಕೆಯನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದಿರಲಿಲ್ಲ. ಆದರೆ ಇದನ್ನು ತಪ್ಪುತಪ್ಪಾಗಿ ಬಿಂಬಿಸಲಾಯಿತು ಮಾತ್ರವಲ್ಲ, ಹೈಕೋರ್ಟ್ ವರೆಗೆ ತೆಗೆದುಕೊಂಡುಹೋಗಲಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>ಈಗ ಅಲ್ಲಿ ಅವರಿಗೆ ಮುಖಭಂಗವಾಗಿದೆ. ಮೊದಲು ಐವತ್ತು ಸಾವಿರ ದಂಡ ವಿಧಿಸಿದ್ದ ನ್ಯಾಯಾಲಯ ನಂತರ ₹1 ಲಕ್ಷ ದಂಡಕ್ಕೆ ಏರಿಸಿರುವುದು ಇದಕ್ಕೆ ಸಾಕ್ಷಿ ಎಂದಿದ್ದಾರೆ.</p><p>ರಾಜ್ಯ ಸರ್ಕಾರ ತನ್ನ ನೀತಿಯ ಕುರಿತು ಇನ್ನೂ ನಿಯಮಾವಳಿಗಳನ್ನು ರೂಪಿಸುವ, ಆದೇಶ ಹೊರಡಿಸುವ ಮುನ್ನವೇ ನ್ಯಾಯಾಲಯಕ್ಕೆ ಹೋದವರು ಬಹಳ ಆತುರವಾಗಿ ಏನನ್ನೋ ಸಾಧಿಸುವ ಉದ್ದೇಶ ಹೊಂದಿದ್ದರು. ಒಂದು ವೇಳೆ ಅರ್ಜಿ ಸ್ವೀಕೃತವಾಗಿದ್ದರೆ ಕರ್ನಾಟಕ ರಕ್ಷಣಾ ವೇದಿಕೆಯೂ ಸಹ ವಿದ್ಯಾರ್ಥಿಗಳ ಪರ ಕಾನೂನು ಹೋರಾಟ ನಡೆಸಲು ಸಜ್ಜಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.</p><p>ಆದರೆ, ಅರ್ಜಿ ವಜಾಗೊಳಿಸಿ, ಅರ್ಜಿದಾರರಿಗೆ ದಂಡ ವಿಧಿಸಲಾಗಿರುವುದರಿಂದ ಪಟ್ಟಭದ್ರ ಶಕ್ತಿಗಳ ಹುನ್ನಾರ ವಿಫಲವಾಗಿದೆ. ರಾಜ್ಯ ಸರ್ಕಾರ ಕೂಡಲೇ ನಿಯಮಾವಳಿಗಳನ್ನು ರೂಪಿಸಿ, ಗ್ರೇಡಿಂಗ್ ವ್ಯವಸ್ಥೆ ಜಾರಿಗೊಳಿಸಬೇಕು. ಹಿಂದಿ ಸಾಮ್ರಾಜ್ಯಶಾಹಿಗಳ ಹುನ್ನಾರಗಳಿಗೆ ಮಣೆ ಹಾಕಬಾರದು. ಕನ್ನಡದ ಮಕ್ಕಳ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದಿದ್ದಾರೆ.</p>.<p><strong>ಕೋರ್ಟ್ ಹೇಳಿದ್ದೇನು?</strong></p><p>ಕ್ರಮವನ್ನು ಪ್ರಶ್ನಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಜಾಗೊಳಿಸಿರುವ ಹೈಕೋರ್ಟ್, ಅರ್ಜಿದಾರರಿಗೆ ₹1 ಲಕ್ಷ ದಂಡ ವಿಧಿಸಿದೆ. ಬೆಂಗಳೂರಿನ ಎಚ್.ಎನ್.ಚಂದನಾ ಮತ್ತು ಎಸ್.ವೆಂಕಟೇಶ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.</p><p>‘ಇದೊಂದು ಪ್ರಚಾರದ ಹಿತಾಸಕ್ತಿ ಹೊಂದಿರುವ ಅರ್ಜಿಯಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ‘ಅರ್ಜಿದಾರರಿಗೆ ₹50 ಸಾವಿರ ದಂಡ ವಿಧಿಸಿ ವಜಾಗೊಳಿಸಲಾಗಿದೆ. ದಂಡದ ಮೊತ್ತವನ್ನು ಎರಡು ವಾರಗಳಲ್ಲಿ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಬೇಕು. ಇಲ್ಲವೇ, ಮೊತ್ತವನ್ನು ಭೂ ಕಂದಾಯ ಬಾಕಿಯಾಗಿ ವಸೂಲಿ ಮಾಡಲು ಜಿಲ್ಲಾಧಿಕಾರಿಗೆ ಸೂಚಿಸಿ’ ಎಂದು ಸರ್ಕಾರಕ್ಕೆ ನಿರ್ದೇಶಿಸಿತು.</p><p>ಇದಕ್ಕೆ ಅರ್ಜಿದಾರರ ಪರ ವಕೀಲರು, ‘ಹಿಂದಿಯನ್ನು ಸಂಪೂರ್ಣವಾಗಿ ಕೈಬಿಡಲಾಗುತ್ತದೆ ಎಂಬ ಸಚಿವರ ಹೇಳಿಕೆ ಸರಿಯಾದ ದೃಷ್ಟಿಕೋನವಲ್ಲ’ ಎಂದು ಆಕ್ಷೇಪಿಸಿ ಅರ್ಜಿಯ ಜೊತೆಗಿನ ಪತ್ರಿಕಾ ವರದಿಗಳ ಅಡಕವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಅಡಕಗಳನ್ನು ಪರಿಶೀಲಿಸಿದ ನ್ಯಾಯಪೀಠ, ‘ಪತ್ರಿಕಾ ವರದಿಯಲ್ಲಿ ಹಿಂದಿಯನ್ನು ಕೈಬಿಡುವ ಹೇಳಿಕೆಯೇ ಇಲ್ಲ. ಹಾಗಾಗಿ, ದಂಡದ ಮೊತ್ತವನ್ನು ₹1 ಲಕ್ಷಕ್ಕೆ ಏರಿಕೆ ಮಾಡಲಾಗುತ್ತಿದೆ’ ಎಂದು ಹೇಳಿತು. ಅಂತೆಯೇ, ಆದೇಶದಲ್ಲಿ ಮಾರ್ಪಾಡು ಮಾಡಿ ದಂಡದ ಮೊತ್ತವನ್ನು ₹1 ಲಕ್ಷಕ್ಕೆ ಏರಿಕೆ ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಸ್ಎಸ್ಎಲ್ಸಿ ವಾರ್ಷಿಕ ಹಿಂದಿ ಪರೀಕ್ಷೆಯಲ್ಲಿ ಅಂಕಗಳ ಬದಲು ಗ್ರೇಡ್ ನೀಡುವ ಶಿಕ್ಷಣ ಸಚಿವರ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿ ಮುಖಭಂಗ ಅನುಭವಿಸಿದವರ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು ಕಿಡಿಕಾರಿದ್ದಾರೆ.</p><p>ಈ ಕುರಿತು ಟ್ವೀಟ್ ಮಾಡಿರುವ ಅವರು, ಇದು ಹಿಂದಿ ಹೇರಿಕೆ ಪರವಾಗಿ ವಾದ ಮಾಡುತ್ತಿದ್ದವರಿಗೆ ನೇರವಾಗಿ ಮಾಡಿದ ಕಪಾಳಮೋಕ್ಷ. ಹಿಂದಿಯನ್ನೂ ಸಂಪೂರ್ಣವಾಗಿ ಕೈಬಿಡಲಾಗಿದೆ ಎಂಬ ಅರ್ಥದ ಹೇಳಿಕೆಯು ಮಾಧ್ಯಮಗಳಲ್ಲಿ ಪ್ರಕಟವಾಗಿಲ್ಲ. ಹೀಗಿದ್ದರೂ ಪೂರ್ವಾಗ್ರಹ ಪೀಡಿತವಾಗಿ ಅರ್ಜಿ ಸಲ್ಲಿಸಲಾಗಿದೆ ಎಂದು ಮುಖ್ಯನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠ ಕಿಡಿ ಕಾರಿದೆ. ಕೇವಲ ಪತ್ರಿಕಾ ಹೇಳಿಕೆ ಓದಿ ನೀವು ಪಿಐಎಲ್ ಸಲ್ಲಿಸಿದ್ದೀರಾ ಎಂದು ನ್ಯಾಯಪೀಠ ಅರ್ಜಿದಾರರನ್ನು ಪ್ರಶ್ನಿಸಿತ್ತು. ತೃತೀಯ ಭಾಷೆ ಗ್ರೇಡಿಂಗ್ ವ್ಯವಸ್ಥೆಯನ್ನು ಹಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಮನಸಿಗೆ ಬಂದಂತೆ ವ್ಯಾಖ್ಯಾನಿಸಿ ಗೊಂದಲ ಉಂಟುಮಾಡಿದ್ದರು. ಹಿಂದಿಯೂ ಸೇರಿದಂತೆ ಮೂರನೇ ಭಾಷೆಯ ಕಲಿಕೆಯನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದಿರಲಿಲ್ಲ. ಆದರೆ ಇದನ್ನು ತಪ್ಪುತಪ್ಪಾಗಿ ಬಿಂಬಿಸಲಾಯಿತು ಮಾತ್ರವಲ್ಲ, ಹೈಕೋರ್ಟ್ ವರೆಗೆ ತೆಗೆದುಕೊಂಡುಹೋಗಲಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>ಈಗ ಅಲ್ಲಿ ಅವರಿಗೆ ಮುಖಭಂಗವಾಗಿದೆ. ಮೊದಲು ಐವತ್ತು ಸಾವಿರ ದಂಡ ವಿಧಿಸಿದ್ದ ನ್ಯಾಯಾಲಯ ನಂತರ ₹1 ಲಕ್ಷ ದಂಡಕ್ಕೆ ಏರಿಸಿರುವುದು ಇದಕ್ಕೆ ಸಾಕ್ಷಿ ಎಂದಿದ್ದಾರೆ.</p><p>ರಾಜ್ಯ ಸರ್ಕಾರ ತನ್ನ ನೀತಿಯ ಕುರಿತು ಇನ್ನೂ ನಿಯಮಾವಳಿಗಳನ್ನು ರೂಪಿಸುವ, ಆದೇಶ ಹೊರಡಿಸುವ ಮುನ್ನವೇ ನ್ಯಾಯಾಲಯಕ್ಕೆ ಹೋದವರು ಬಹಳ ಆತುರವಾಗಿ ಏನನ್ನೋ ಸಾಧಿಸುವ ಉದ್ದೇಶ ಹೊಂದಿದ್ದರು. ಒಂದು ವೇಳೆ ಅರ್ಜಿ ಸ್ವೀಕೃತವಾಗಿದ್ದರೆ ಕರ್ನಾಟಕ ರಕ್ಷಣಾ ವೇದಿಕೆಯೂ ಸಹ ವಿದ್ಯಾರ್ಥಿಗಳ ಪರ ಕಾನೂನು ಹೋರಾಟ ನಡೆಸಲು ಸಜ್ಜಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.</p><p>ಆದರೆ, ಅರ್ಜಿ ವಜಾಗೊಳಿಸಿ, ಅರ್ಜಿದಾರರಿಗೆ ದಂಡ ವಿಧಿಸಲಾಗಿರುವುದರಿಂದ ಪಟ್ಟಭದ್ರ ಶಕ್ತಿಗಳ ಹುನ್ನಾರ ವಿಫಲವಾಗಿದೆ. ರಾಜ್ಯ ಸರ್ಕಾರ ಕೂಡಲೇ ನಿಯಮಾವಳಿಗಳನ್ನು ರೂಪಿಸಿ, ಗ್ರೇಡಿಂಗ್ ವ್ಯವಸ್ಥೆ ಜಾರಿಗೊಳಿಸಬೇಕು. ಹಿಂದಿ ಸಾಮ್ರಾಜ್ಯಶಾಹಿಗಳ ಹುನ್ನಾರಗಳಿಗೆ ಮಣೆ ಹಾಕಬಾರದು. ಕನ್ನಡದ ಮಕ್ಕಳ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದಿದ್ದಾರೆ.</p>.<p><strong>ಕೋರ್ಟ್ ಹೇಳಿದ್ದೇನು?</strong></p><p>ಕ್ರಮವನ್ನು ಪ್ರಶ್ನಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಜಾಗೊಳಿಸಿರುವ ಹೈಕೋರ್ಟ್, ಅರ್ಜಿದಾರರಿಗೆ ₹1 ಲಕ್ಷ ದಂಡ ವಿಧಿಸಿದೆ. ಬೆಂಗಳೂರಿನ ಎಚ್.ಎನ್.ಚಂದನಾ ಮತ್ತು ಎಸ್.ವೆಂಕಟೇಶ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.</p><p>‘ಇದೊಂದು ಪ್ರಚಾರದ ಹಿತಾಸಕ್ತಿ ಹೊಂದಿರುವ ಅರ್ಜಿಯಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ‘ಅರ್ಜಿದಾರರಿಗೆ ₹50 ಸಾವಿರ ದಂಡ ವಿಧಿಸಿ ವಜಾಗೊಳಿಸಲಾಗಿದೆ. ದಂಡದ ಮೊತ್ತವನ್ನು ಎರಡು ವಾರಗಳಲ್ಲಿ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಬೇಕು. ಇಲ್ಲವೇ, ಮೊತ್ತವನ್ನು ಭೂ ಕಂದಾಯ ಬಾಕಿಯಾಗಿ ವಸೂಲಿ ಮಾಡಲು ಜಿಲ್ಲಾಧಿಕಾರಿಗೆ ಸೂಚಿಸಿ’ ಎಂದು ಸರ್ಕಾರಕ್ಕೆ ನಿರ್ದೇಶಿಸಿತು.</p><p>ಇದಕ್ಕೆ ಅರ್ಜಿದಾರರ ಪರ ವಕೀಲರು, ‘ಹಿಂದಿಯನ್ನು ಸಂಪೂರ್ಣವಾಗಿ ಕೈಬಿಡಲಾಗುತ್ತದೆ ಎಂಬ ಸಚಿವರ ಹೇಳಿಕೆ ಸರಿಯಾದ ದೃಷ್ಟಿಕೋನವಲ್ಲ’ ಎಂದು ಆಕ್ಷೇಪಿಸಿ ಅರ್ಜಿಯ ಜೊತೆಗಿನ ಪತ್ರಿಕಾ ವರದಿಗಳ ಅಡಕವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಅಡಕಗಳನ್ನು ಪರಿಶೀಲಿಸಿದ ನ್ಯಾಯಪೀಠ, ‘ಪತ್ರಿಕಾ ವರದಿಯಲ್ಲಿ ಹಿಂದಿಯನ್ನು ಕೈಬಿಡುವ ಹೇಳಿಕೆಯೇ ಇಲ್ಲ. ಹಾಗಾಗಿ, ದಂಡದ ಮೊತ್ತವನ್ನು ₹1 ಲಕ್ಷಕ್ಕೆ ಏರಿಕೆ ಮಾಡಲಾಗುತ್ತಿದೆ’ ಎಂದು ಹೇಳಿತು. ಅಂತೆಯೇ, ಆದೇಶದಲ್ಲಿ ಮಾರ್ಪಾಡು ಮಾಡಿ ದಂಡದ ಮೊತ್ತವನ್ನು ₹1 ಲಕ್ಷಕ್ಕೆ ಏರಿಕೆ ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>