<p><strong>ಬೆಂಗಳೂರು</strong>: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ; ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ಆರೋಪಗಳ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಸಾಕ್ಷಿಯಾಗಿರುವ ಎಸ್.ಕೆ.ಬಸವರಾಜನ್ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.</p>.<p>ಶರಣರ ವಿರುದ್ಧದ ಪ್ರಕರಣದ ವಿಚಾರಣೆ ಅಂತಿಮ ಹಂತದಲ್ಲಿದ್ದ ಸಮಯದಲ್ಲಿ ಎಸ್.ಕೆ.ಬಸವರಾಜನ್ ತಮ್ಮ ಎರಡು ಸಾಕ್ಷ್ಯಗಳನ್ನು ಪರಿಗಣಿಸುವಂತೆ ಸೆಷನ್ಸ್ ನ್ಯಾಯಾಲಯಕ್ಕೆ ಕೋರಿದ್ದರು. ಈ ಕೋರಿಕೆಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು. </p>.<p>ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತಾದ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಬಸವರಾಜನ್ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿತು.</p>.<p>‘ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಸಲ್ಲಿಸಿದ್ದ ದೂರನ್ನು ಆಧರಿಸಿ, ಶಿವಮೂರ್ತಿ ಶರಣರನ್ನು 2022ರ ಸೆಪ್ಟೆಂಬರ್ 1ರಂದು ಬಂಧಿಸಿ ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಸದ್ಯ ಈ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಪ್ರಕರಣವನ್ನು ಚಿತ್ರದುರ್ಗ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ, ಸುಪ್ರೀಂ ಕೋರ್ಟ್ ನಿರ್ದೇಶನದ ಅನುಸಾರ ನಿಗದಿಪಡಿಸಿದ ಸಮಯದ ಚೌಕಟ್ಟಿನಲ್ಲಿ ವಿಚಾರಣೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ; ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ಆರೋಪಗಳ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಸಾಕ್ಷಿಯಾಗಿರುವ ಎಸ್.ಕೆ.ಬಸವರಾಜನ್ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.</p>.<p>ಶರಣರ ವಿರುದ್ಧದ ಪ್ರಕರಣದ ವಿಚಾರಣೆ ಅಂತಿಮ ಹಂತದಲ್ಲಿದ್ದ ಸಮಯದಲ್ಲಿ ಎಸ್.ಕೆ.ಬಸವರಾಜನ್ ತಮ್ಮ ಎರಡು ಸಾಕ್ಷ್ಯಗಳನ್ನು ಪರಿಗಣಿಸುವಂತೆ ಸೆಷನ್ಸ್ ನ್ಯಾಯಾಲಯಕ್ಕೆ ಕೋರಿದ್ದರು. ಈ ಕೋರಿಕೆಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು. </p>.<p>ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತಾದ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಬಸವರಾಜನ್ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿತು.</p>.<p>‘ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಸಲ್ಲಿಸಿದ್ದ ದೂರನ್ನು ಆಧರಿಸಿ, ಶಿವಮೂರ್ತಿ ಶರಣರನ್ನು 2022ರ ಸೆಪ್ಟೆಂಬರ್ 1ರಂದು ಬಂಧಿಸಿ ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಸದ್ಯ ಈ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಪ್ರಕರಣವನ್ನು ಚಿತ್ರದುರ್ಗ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ, ಸುಪ್ರೀಂ ಕೋರ್ಟ್ ನಿರ್ದೇಶನದ ಅನುಸಾರ ನಿಗದಿಪಡಿಸಿದ ಸಮಯದ ಚೌಕಟ್ಟಿನಲ್ಲಿ ವಿಚಾರಣೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>