ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಬಿ. ಗಂಗಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ನಿವೃತ್ತ ಮುಖ್ಯ ಕಾರ್ಯದರ್ಶಿ ಸರ್ಕಾರದ 66 ಎಕರೆ ಕಬಳಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. 2016ರಲ್ಲೇ ದೂರು ದಾಖಲಾಗಿದ್ದರೂ ಕಠಿಣ ಕ್ರಮ ಕೈಗೊಂಡಿಲ್ಲ.ಇದು ಸರ್ಕಾರದ ಜಡತ್ವಕ್ಕೆ ಸಾಕ್ಷಿ’ ಎಂದು ಕಿಡಿ ಕಾರಿದೆ.