<p><strong>ಬೆಂಗಳೂರು:</strong> ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಿರ್ಮಾಣ ಚಟುವಟಿಕೆ ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ಬೈಲಾ ಕಡ್ಡಾಯಗೊಳಿಸುವ ಸಮಯ ಬಂದಿದೆ ಎಂದು ಹೈಕೋರ್ಟ್ ಹೇಳಿದೆ.</p>.<p>ಕರ್ನಾಟಕ ಪಂಚಾಯತ್ ರಾಜ್ (ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಕಟ್ಟಡಗಳ ನಿರ್ಮಾಣ ನಿಯಂತ್ರಣ) ಮಾದರಿ ಬೈಲಾ–2015 ರಚನೆಯಾಗಿ ಏಳು ವರ್ಷಗಳು ಕಳೆದರೂ ಜಾರಿಗೆ ತಂದಿಲ್ಲ ಎಂಬುದನ್ನು ಗಮನಿಸಿದ ಪೀಠ, ಈ ಅಭಿಪ್ರಾಯಪಟ್ಟಿದೆ.</p>.<p>ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಬಿದಿರುಕೋಟೆ ಗ್ರಾಮದಲ್ಲಿ ನಡೆದ ವಿವಾದಕ್ಕೆ ಸಂಬಂಧಿಸಿದ ಪ್ರಕರಣ ವಿಚಾರಣೆ ವೇಳೆ ರಾಜ್ಯದ ಬಹುತೇಕ ಪಂಚಾಯಿತಿಗಳು ಈ ಬೈಲಾ ಅಳವಡಿಸಿಕೊಂಡಿಲ್ಲ ಎಂಬುದನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಗಮನಿಸಿತು.</p>.<p>‘ಪಂಚಾಯತ್ ರಾಜ್ ಕಾಯ್ದೆಯ ಸೆಕ್ಷನ್ 316ರ ಪ್ರಕಾರ, ಬೈಲಾ ಅಳವಡಿಕೆ ಮಾಡಿಕೊಳ್ಳಬೇಕು. ಆ ರೀತಿ ಮಾಡದಿದ್ದರೆ ಸರ್ಕಾರವೇ ಅಧಿಸೂಚನೆ ಹೊರಡಿಸುವ ಮೂಲಕ ಬೈಲಾ ಜಾರಿಗೊಳಿಸಬೇಕು’ ಎಂದು ಪೀಠ ತಿಳಿಸಿತು.</p>.<p>‘ರಾಜ್ಯದಲ್ಲಿ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳು ಜೋರಾಗಿ ನಡೆಯುತ್ತಿವೆ. ನಿಯಮಗಳ ಉಲ್ಲಂಘನೆ ಪಾಲಿಕೆ ವ್ಯಾಪ್ತಿಗಷ್ಟೇ ಸೀಮಿತವಾಗಿಲ್ಲ. ಪಂಚಾಯಿತಿ ವ್ಯಾಪ್ತಿಯಲ್ಲಿನ ನಿರ್ಮಾಣಗಳನ್ನು ನಿಯಂತ್ರಿಸಲು ಸರ್ಕಾರಕ್ಕೆ ಈಗ ಕಾಲ ಕೂಡಿ ಬಂದಿದೆ’ ಎಂದು ಹೇಳಿತು.</p>.<p>‘ಬೈಲಾ ರೂಪಿಸಿ 7 ವರ್ಷಗಳೇ ಕಳೆದರೂ ಪಂಚಾಯಿತಿಗಳು ಅಳವಡಿಕೆ ಮಾಡಿಕೊಳ್ಳಲು ಮುಂದಾಗಿಲ್ಲ. ಆದ್ದರಿಂದ ಅಳವಡಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರವೇ ಈಗ ಅಧಿಸೂಚನೆ ಹೊರಡಿಸಬೇಕು’ ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಿರ್ಮಾಣ ಚಟುವಟಿಕೆ ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ಬೈಲಾ ಕಡ್ಡಾಯಗೊಳಿಸುವ ಸಮಯ ಬಂದಿದೆ ಎಂದು ಹೈಕೋರ್ಟ್ ಹೇಳಿದೆ.</p>.<p>ಕರ್ನಾಟಕ ಪಂಚಾಯತ್ ರಾಜ್ (ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಕಟ್ಟಡಗಳ ನಿರ್ಮಾಣ ನಿಯಂತ್ರಣ) ಮಾದರಿ ಬೈಲಾ–2015 ರಚನೆಯಾಗಿ ಏಳು ವರ್ಷಗಳು ಕಳೆದರೂ ಜಾರಿಗೆ ತಂದಿಲ್ಲ ಎಂಬುದನ್ನು ಗಮನಿಸಿದ ಪೀಠ, ಈ ಅಭಿಪ್ರಾಯಪಟ್ಟಿದೆ.</p>.<p>ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಬಿದಿರುಕೋಟೆ ಗ್ರಾಮದಲ್ಲಿ ನಡೆದ ವಿವಾದಕ್ಕೆ ಸಂಬಂಧಿಸಿದ ಪ್ರಕರಣ ವಿಚಾರಣೆ ವೇಳೆ ರಾಜ್ಯದ ಬಹುತೇಕ ಪಂಚಾಯಿತಿಗಳು ಈ ಬೈಲಾ ಅಳವಡಿಸಿಕೊಂಡಿಲ್ಲ ಎಂಬುದನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಗಮನಿಸಿತು.</p>.<p>‘ಪಂಚಾಯತ್ ರಾಜ್ ಕಾಯ್ದೆಯ ಸೆಕ್ಷನ್ 316ರ ಪ್ರಕಾರ, ಬೈಲಾ ಅಳವಡಿಕೆ ಮಾಡಿಕೊಳ್ಳಬೇಕು. ಆ ರೀತಿ ಮಾಡದಿದ್ದರೆ ಸರ್ಕಾರವೇ ಅಧಿಸೂಚನೆ ಹೊರಡಿಸುವ ಮೂಲಕ ಬೈಲಾ ಜಾರಿಗೊಳಿಸಬೇಕು’ ಎಂದು ಪೀಠ ತಿಳಿಸಿತು.</p>.<p>‘ರಾಜ್ಯದಲ್ಲಿ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳು ಜೋರಾಗಿ ನಡೆಯುತ್ತಿವೆ. ನಿಯಮಗಳ ಉಲ್ಲಂಘನೆ ಪಾಲಿಕೆ ವ್ಯಾಪ್ತಿಗಷ್ಟೇ ಸೀಮಿತವಾಗಿಲ್ಲ. ಪಂಚಾಯಿತಿ ವ್ಯಾಪ್ತಿಯಲ್ಲಿನ ನಿರ್ಮಾಣಗಳನ್ನು ನಿಯಂತ್ರಿಸಲು ಸರ್ಕಾರಕ್ಕೆ ಈಗ ಕಾಲ ಕೂಡಿ ಬಂದಿದೆ’ ಎಂದು ಹೇಳಿತು.</p>.<p>‘ಬೈಲಾ ರೂಪಿಸಿ 7 ವರ್ಷಗಳೇ ಕಳೆದರೂ ಪಂಚಾಯಿತಿಗಳು ಅಳವಡಿಕೆ ಮಾಡಿಕೊಳ್ಳಲು ಮುಂದಾಗಿಲ್ಲ. ಆದ್ದರಿಂದ ಅಳವಡಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರವೇ ಈಗ ಅಧಿಸೂಚನೆ ಹೊರಡಿಸಬೇಕು’ ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>