ವಿಚಾರಣೆ ವೇಳೆ ಸಿದ್ದರಾಮಯ್ಯ ಪರ ವಕೀಲರು ವಾದ ಮಂಡನೆಗೆ ಮತ್ತಷ್ಟು ಕಾಲಾವಕಾಶ ಕೋರಿದರು. ಇದಕ್ಕೆ ಅರ್ಜಿದಾರರ ಪರ ವಕೀಲರು, ‘ಪದೇ ಪದೇ ಕಾಲಾವಕಾಶ ಕೇಳಲಾಗುತ್ತಿದೆ. ಪ್ರಕರಣವನ್ನು ಸುಮ್ಮನೇ ವಿಳಂಬಿಸಲಾಗುತ್ತಿದೆ‘ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ನ್ಯಾಯಪೀಠ, ಸಿದ್ದರಾಮಯ್ಯ ಪರ ವಕೀಲರನ್ನು ಸೂಕ್ಷ್ಮವಾಗಿ ಎಚ್ಚರಿಸಿ ವಿಚಾರಣೆಯನ್ನು ಇದೇ 28ಕ್ಕೆ ಮುಂದೂಡಿತು.