ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಮಿನಲ್ ಪ್ರಕರಣ ರದ್ದು ಕೋರಿದ್ದ ಜೀವರಾಜ್ ಅರ್ಜಿ ವಜಾ

Last Updated 14 ಆಗಸ್ಟ್ 2021, 17:21 IST
ಅಕ್ಷರ ಗಾತ್ರ

ಬೆಂಗಳೂರು: ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಮಾಜಿ ಸಚಿವ ಡಿ.ಎನ್‌. ಜೀವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಭೂ ಮಂಜೂರಾತಿ ಸಮಿತಿ ಅಧ್ಯಕ್ಷರಾಗಿದ್ದಾಗ ನಿಯಮ ಉಲ್ಲಂಘಿಸಿ ಸಂಬಂಧಿಕರಿಗೆ ಭೂ ಮಂಜೂರಾತಿ ನೀಡಿದ್ದ ಆರೋಪದಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ವಾಸುದೇವ ಕೋಟ್ಯಾನ್ ಎಂಬುವರು ಸಲ್ಲಿಸಿದ್ದ ಖಾಸಗಿ ದೂರು ಆಧಾರಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ತನಿಖೆಗೆ ಆದೇಶಿಸಿತ್ತು. ಲೋಕಾಯುಕ್ತ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇಡೀ ಪ್ರಕ್ರಿಯೆಯನ್ನು ಜೀವರಾಜ್ ಪ್ರಶ್ನಿಸಿದ್ದರು.

‘ನಿಯಮ ಉಲ್ಲಂಘನೆ ಆಗಿದೆಯೋ ಇಲ್ಲವೋ ಎಂಬುದನ್ನು ನ್ಯಾಯಾಲಯ ವಿಚಾರಣೆ ಬಳಿಕ ತೀರ್ಮಾನಿಸಲಿದೆ’ ಎಂದು ತಿಳಿಸಿದ ನ್ಯಾಯಮೂರ್ತಿ ಸುನೀಲ್‌ ದತ್ತ ಯಾದವ್ ಅವರಿದ್ದ ಪೀಠ ಅರ್ಜಿ ವಜಾಗೊಳಿಸಿತು.‌

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT