ಅಖಾಡಕ್ಕಿಳಿದ ರೇವಣ್ಣ: ಹೈಕೋರ್ಟ್ ತೀರ್ಪು ಪ್ರಕಟವಾದ ಬೆನ್ನಲ್ಲೇ ಕುಟುಂಬವನ್ನು ಕಾನೂನು ಕ್ರಮದ ಸಂಕಷ್ಟದಿಂದ ಪಾರುಮಾಡಲು ರೇವಣ್ಣ ಅಖಾಡಕ್ಕಿಳಿದಿದ್ದಾರೆ. ಹಿರಿಯ ವಕೀಲರು ಮತ್ತು ಪಕ್ಷದ ಕೆಲವು ಪ್ರಮುಖರ ಜತೆ ಚರ್ಚಿಸಿದ್ದಾರೆ. ಪಕ್ಷದ ವರಿಷ್ಠರೂ ಆಗಿರುವ ತಮ್ಮ ತಂದೆ ಎಚ್.ಡಿ. ದೇವೇಗೌಡ ಅವರೊಂದಿಗೆ ಚರ್ಚಿಸಿ, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸುವ ನಿರ್ಧಾರವನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.