ಸಂಪನ್ಮೂಲ ವ್ಯಕ್ತಿಗಳಾಗಿ ಎಚ್. ಶಶಿಧರ್ ಶೆಟ್ಟಿ, ವಿಜ್ಞೇಶ್ ಕುಮಾರ್ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರು, ಹೈಕೋರ್ಟ್ ವಕೀಲರಾದ ಶ್ರೀಧರ್ ಪ್ರಭು ಅವರು; ಕಾನೂನು ಸೇವಾ ಪ್ರಾಧಿಕಾರ ಕಾಯ್ದೆ ಹಾಗೂ ಅದರ ಗುರಿ–ಉದ್ದೇಶಗಳು, ಕಾನೂನು ಕಾಲೇಜುಗಳಲ್ಲಿ ಕಾನೂನು ಸೇವಾ ಕೇಂದ್ರಗಳ ಸ್ಥಾಪನೆ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾನೂನು ಶಿಬಿರಗಳ ಆಯೋಜನೆ ಕುರಿತಂತೆ ಉಪನ್ಯಾಸ ನೀಡಿದರು. ಸುರೇಶ್ ವಿ. ನಾಡಗೌಡರ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕಾನೂನು ಕಾಲೇಜುಗಳ ಮುನ್ನೂರಕ್ಕೂ ಹೆಚ್ಚು ಉಪನ್ಯಾಸಕರು, ಕಾನೂನು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.