<p><strong>ಬೆಂಗಳೂರು:</strong> ಮಡಿಕೇರಿಯಲ್ಲಿಅವೈಜ್ಞಾನಿಕವಾಗಿ ತ್ಯಾಜ್ಯ ಸುರಿಯುತ್ತಿರುವ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ(ಕೆಎಸ್ಪಿಸಿಬಿ) ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಪರಿಸರ ಸಂರಕ್ಷಣಾ ಕಾಯ್ದೆ ಮತ್ತು ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನುಸ್ಥಳೀಯ ಅಧಿಕಾರಿಗಳು ಉಲ್ಲಂಘಿಸಿದಾಗ ಕೆಎಸ್ಪಿಸಿಬಿ ಅಸಹಾಯಕತೆಯಿಂದವರ್ತಿಸಬಾರದು. ಅಧ್ಯಕ್ಷರ ಅಧಿಕಾರ ನಿರ್ವಹಿಸುತ್ತಿರುವವರೇ ಈ ಸಂಬಂಧ ಅಫಿಡವಿಟ್ ಸಲ್ಲಿಸಬೇಕು’ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಹೇಳಿದೆ.</p>.<p>ಮಡಿಕೇರಿಯಸುಬ್ರಮಣ್ಯನಗರ,ವಿದ್ಯಾನಗರ, ಕನ್ನಿಕ ಲೇಔಟ್ ನಿವಾಸಿಗಳು ಮತ್ತುಎಸ್ಆರ್ವಿಕೆ ವೆಲ್ಫೇರ್ ಅಸೋಸಿಯೇಷನ್ ಸಲ್ಲಿಸದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಪೀಠ, ಈ ಆದೇಶ ನೀಡಿದೆ.</p>.<p>‘ಮಡಿಕೇರಿಯ ಕರ್ಣಗೇರಿ ಸಮೀಪ ಅರಣ್ಯ ಇಲಾಖೆ ವಿರೋಧದ ನಡುವೆ ನಿಯಮ ಉಲ್ಲಂಘಿಸಿ ಕಸ ಸುರಿಯಲಾಗುತ್ತಿದೆ’ ಎಂದು ಅರ್ಜಿದಾರರು ದೂರಿದ್ದಾರೆ.</p>.<p>ಸ್ಥಳಕ್ಕೆ ಭೇಟಿ ನೀಡಿ ಸದ್ಯದ ಪರಿಸ್ಥಿತಿ ಪರಿಶೀಲಿಸಲು ಅಧಿಕಾರಿಯೊಬ್ಬರನ್ನು ನಿಯೋಜಿಸುವಂತೆ ಮತ್ತು ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ವರದಿ ಸಲ್ಲಿಸುವಂತೆ ಕೆಎಸ್ಪಿಸಿಬಿಗೆ ಈ ಹಿಂದಿನ ವಿಚಾರಣೆ ವೇಳೆಯೇ ಪೀಠ ನಿರ್ದೇಶನ ನೀಡಿತ್ತು.</p>.<p>‘ಮಾಲಿನ್ಯ ನಿಯಂತ್ರಣ ಮಂಡಳಿ ಅಸಹಾಯಕತೆಯಿಂದ ವರ್ತಿಸುತ್ತಿರುವುದು ವಿಷಾದದ ಸಂಗತಿ. ಇಂತಹ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆ ವಿರುದ್ಧ ರಾಜ್ಯ ಸರ್ಕಾರವೇ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿ ವಿಚಾರಣೆಯನ್ನು ಆ.14ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಡಿಕೇರಿಯಲ್ಲಿಅವೈಜ್ಞಾನಿಕವಾಗಿ ತ್ಯಾಜ್ಯ ಸುರಿಯುತ್ತಿರುವ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ(ಕೆಎಸ್ಪಿಸಿಬಿ) ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಪರಿಸರ ಸಂರಕ್ಷಣಾ ಕಾಯ್ದೆ ಮತ್ತು ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನುಸ್ಥಳೀಯ ಅಧಿಕಾರಿಗಳು ಉಲ್ಲಂಘಿಸಿದಾಗ ಕೆಎಸ್ಪಿಸಿಬಿ ಅಸಹಾಯಕತೆಯಿಂದವರ್ತಿಸಬಾರದು. ಅಧ್ಯಕ್ಷರ ಅಧಿಕಾರ ನಿರ್ವಹಿಸುತ್ತಿರುವವರೇ ಈ ಸಂಬಂಧ ಅಫಿಡವಿಟ್ ಸಲ್ಲಿಸಬೇಕು’ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಹೇಳಿದೆ.</p>.<p>ಮಡಿಕೇರಿಯಸುಬ್ರಮಣ್ಯನಗರ,ವಿದ್ಯಾನಗರ, ಕನ್ನಿಕ ಲೇಔಟ್ ನಿವಾಸಿಗಳು ಮತ್ತುಎಸ್ಆರ್ವಿಕೆ ವೆಲ್ಫೇರ್ ಅಸೋಸಿಯೇಷನ್ ಸಲ್ಲಿಸದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಪೀಠ, ಈ ಆದೇಶ ನೀಡಿದೆ.</p>.<p>‘ಮಡಿಕೇರಿಯ ಕರ್ಣಗೇರಿ ಸಮೀಪ ಅರಣ್ಯ ಇಲಾಖೆ ವಿರೋಧದ ನಡುವೆ ನಿಯಮ ಉಲ್ಲಂಘಿಸಿ ಕಸ ಸುರಿಯಲಾಗುತ್ತಿದೆ’ ಎಂದು ಅರ್ಜಿದಾರರು ದೂರಿದ್ದಾರೆ.</p>.<p>ಸ್ಥಳಕ್ಕೆ ಭೇಟಿ ನೀಡಿ ಸದ್ಯದ ಪರಿಸ್ಥಿತಿ ಪರಿಶೀಲಿಸಲು ಅಧಿಕಾರಿಯೊಬ್ಬರನ್ನು ನಿಯೋಜಿಸುವಂತೆ ಮತ್ತು ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ವರದಿ ಸಲ್ಲಿಸುವಂತೆ ಕೆಎಸ್ಪಿಸಿಬಿಗೆ ಈ ಹಿಂದಿನ ವಿಚಾರಣೆ ವೇಳೆಯೇ ಪೀಠ ನಿರ್ದೇಶನ ನೀಡಿತ್ತು.</p>.<p>‘ಮಾಲಿನ್ಯ ನಿಯಂತ್ರಣ ಮಂಡಳಿ ಅಸಹಾಯಕತೆಯಿಂದ ವರ್ತಿಸುತ್ತಿರುವುದು ವಿಷಾದದ ಸಂಗತಿ. ಇಂತಹ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆ ವಿರುದ್ಧ ರಾಜ್ಯ ಸರ್ಕಾರವೇ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿ ವಿಚಾರಣೆಯನ್ನು ಆ.14ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>