<p><strong>ಬೆಂಗಳೂರು:</strong> ‘ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸೇರಿದ ಅಕ್ರಮ ಹಣವನ್ನು ಸಚಿನ್ ನಾರಾಯಣ್ ಒಡೆತನದ ಉದ್ಯಮಗಳಲ್ಲಿ ತೊಡಗಿಸಲಾಗುತ್ತಿದೆ’ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಹೈಕೋರ್ಟ್ಗೆ ತಿಳಿಸಿದೆ.</p>.<p>‘₹ 8.60 ಕೋಟಿ ಪತ್ತೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಬೇಕು’ ಎಂದು ಇ.ಡಿ ನೀಡಿರುವ ಸಮನ್ಸ್ ರದ್ದು ಕೋರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಐವರು ಆರೋಪಿಗಳು ಸಲ್ಲಿಸಿರುವ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p>.<p>ಇ.ಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ.ನಾವದಗಿ, ‘ಪ್ರಕರಣದ ಒಂದನೇ ಆರೋಪಿಯಾದ ಶಿವಕುಮಾರ್ ಅವರ ಲೆಕ್ಕವಿಲ್ಲದ ಹಣಕ್ಕೆ ಎರಡನೇ ಆರೋಪಿ ಸಚಿನ್ ನಾರಾಯಣ್ ಅಗ್ರೇಸರನಾಗಿದ್ದಾರೆ’ ಎಂದರು.</p>.<p>‘2017ರ ಆ.2ರಂದು ಡಿ.ಕೆ.ಶಿ ಅವರಿಗೆ ಸೇರಿದ ದೆಹಲಿಯ ಸಫ್ದರ್ಜಂಗ್ ಎನ್ಕ್ಲೇವ್ ಮತ್ತು ಆರ್.ಕೆ. ಪುರಂ ಫ್ಲ್ಯಾಟ್ಗಳಲ್ಲಿ ದೊರೆತ ಹಣವನ್ನು ಅಕ್ರಮವಾಗಿ ಹವಾಲಾ ಮುಖಾಂತರ ಸಾಗಿಸಲಾಗಿತ್ತು. ಈ ಪ್ರಕರಣದ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 120–ಬಿ ಅನುಸಾರ ಪ್ರಕರಣ ದಾಖಲಿಸಿರುವುದು ಸರಿಯಾಗಿಯೇ ಇದೆ. ಅಕ್ರಮ ಹಣ ಸಾಗಣೆ ಮಾಡಲು, ಸಂಗ್ರಹಿಸಲು ಷಡ್ಯಂತ್ರ ಹೂಡಿರುವುದು ಸ್ಪಷ್ಟವಾಗಿದೆ’ ಎಂದು ಪ್ರತಿಪಾದಿಸಿದರು.</p>.<p>ವಾದ ಅಪೂರ್ಣವಾಗಿದ್ದು ವಿಚಾರಣೆಯನ್ನು ಮಂಗಳವಾರಕ್ಕೆ (ಮಾರ್ಚ್ 12) ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸೇರಿದ ಅಕ್ರಮ ಹಣವನ್ನು ಸಚಿನ್ ನಾರಾಯಣ್ ಒಡೆತನದ ಉದ್ಯಮಗಳಲ್ಲಿ ತೊಡಗಿಸಲಾಗುತ್ತಿದೆ’ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಹೈಕೋರ್ಟ್ಗೆ ತಿಳಿಸಿದೆ.</p>.<p>‘₹ 8.60 ಕೋಟಿ ಪತ್ತೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಬೇಕು’ ಎಂದು ಇ.ಡಿ ನೀಡಿರುವ ಸಮನ್ಸ್ ರದ್ದು ಕೋರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಐವರು ಆರೋಪಿಗಳು ಸಲ್ಲಿಸಿರುವ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p>.<p>ಇ.ಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ.ನಾವದಗಿ, ‘ಪ್ರಕರಣದ ಒಂದನೇ ಆರೋಪಿಯಾದ ಶಿವಕುಮಾರ್ ಅವರ ಲೆಕ್ಕವಿಲ್ಲದ ಹಣಕ್ಕೆ ಎರಡನೇ ಆರೋಪಿ ಸಚಿನ್ ನಾರಾಯಣ್ ಅಗ್ರೇಸರನಾಗಿದ್ದಾರೆ’ ಎಂದರು.</p>.<p>‘2017ರ ಆ.2ರಂದು ಡಿ.ಕೆ.ಶಿ ಅವರಿಗೆ ಸೇರಿದ ದೆಹಲಿಯ ಸಫ್ದರ್ಜಂಗ್ ಎನ್ಕ್ಲೇವ್ ಮತ್ತು ಆರ್.ಕೆ. ಪುರಂ ಫ್ಲ್ಯಾಟ್ಗಳಲ್ಲಿ ದೊರೆತ ಹಣವನ್ನು ಅಕ್ರಮವಾಗಿ ಹವಾಲಾ ಮುಖಾಂತರ ಸಾಗಿಸಲಾಗಿತ್ತು. ಈ ಪ್ರಕರಣದ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 120–ಬಿ ಅನುಸಾರ ಪ್ರಕರಣ ದಾಖಲಿಸಿರುವುದು ಸರಿಯಾಗಿಯೇ ಇದೆ. ಅಕ್ರಮ ಹಣ ಸಾಗಣೆ ಮಾಡಲು, ಸಂಗ್ರಹಿಸಲು ಷಡ್ಯಂತ್ರ ಹೂಡಿರುವುದು ಸ್ಪಷ್ಟವಾಗಿದೆ’ ಎಂದು ಪ್ರತಿಪಾದಿಸಿದರು.</p>.<p>ವಾದ ಅಪೂರ್ಣವಾಗಿದ್ದು ವಿಚಾರಣೆಯನ್ನು ಮಂಗಳವಾರಕ್ಕೆ (ಮಾರ್ಚ್ 12) ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>