<p><strong>ಬೆಂಗಳೂರು</strong>: ದೊಡ್ಡಗುಬ್ಡಿ ಗ್ರಾಮದಲ್ಲಿನ ‘ನ್ಯೂ ಆರ್ಕ್ ಮಿಷನ್ ಆಫ್ ಇಂಡಿಯಾ’ ಸಂಸ್ಥೆಯಲ್ಲಿರುವ ಮನೋಸಾಮಾಜಿಕ ಅಂಗವಿಕಲರಿಗೆ ವೈಯಕ್ತಿಕ ಗುರುತಿನ ಚೀಟಿ ಹಾಗೂ ಅಂಗವೈಕಲ್ಯತೆಯ ಪ್ರಮಾಣ ಪತ್ರ ವಿತರಿಸಲು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p><p>ಮಾನಸಿಕ–ಸಾಮಾಜಿಕ ಅಂಗವೈಕಲ್ಯ ಹೊಂದಿರುವ ಎಲ್ಲಾ ವ್ಯಕ್ತಿಗಳ ಗುರುತಿಸುವಿಕೆ ಮತ್ತು ಪ್ರಮಾಣೀಕರಿಸುವ ನಿಟ್ಟಿನಲ್ಲಿ; ಅಂಗವಿಕಲರ ಹಕ್ಕುಗಳ ಕಾಯ್ದೆ–2016ರ ಅನುಸಾರ ಅಂಗವೈಕಲ್ಯ ಪ್ರಮಾಣಪತ್ರಗಳನ್ನು ನೀಡುವಂತೆ ಬೆಂಗಳೂರಿನ ‘ನ್ಯೂ ಆರ್ಕ್ ಮಿಷನ್’ಗೆ ನಿರ್ದೇಶಿಸಬೇಕು ಎಂದು ಕೋರಲಾದ ರಿಟ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p><p>ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಕೇಂದ್ರ, ರಾಜ್ಯ ಸರ್ಕಾರ ಹಾಗೂ ‘ನ್ಯೂ ಆರ್ಕ್ ಮಿಷನ್ ಆಫ್ ಇಂಡಿಯಾ’ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಆಗಸ್ಟ್ 11ಕ್ಕೆ ಮುಂದೂಡಿತು.</p><p><strong>ಏನಿದು ಅರ್ಜಿ?:</strong> ‘ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ವ್ಯಾಪ್ತಿಯಲ್ಲಿನ ಅಂಗವಿಕಲರಿಗೆ ಆಧಾರ್ ಕಾರ್ಡ್ ಇಲ್ಲದ ಕಾರಣ ಅಂಗವೈಕಲ್ಯ ಪ್ರಮಾಣ ಪತ್ರ ಮತ್ತು ಗುರುತಿನ ಚೀಟಿ ವಿತರಣೆ ಮಾಡುವಂತೆ ಸುಪ್ರೀಂ ಕೋರ್ಟ್ ಸೂಕ್ತ ನಿರ್ದೇಶನಗಳನ್ನು ನೀಡಿದೆ. ಈ ಸಮಸ್ಯೆ ಪರಿಹರಿಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಸರ್ಕಾರಗಳಿಗೆ 2021ರಲ್ಲೇ ನಿರ್ದೇಶಿಸಿದೆ. ಆದರೆ, ಕರ್ನಾಟಕದಲ್ಲಿ ಈ ನಿರ್ದೇಶನ ಪಾಲನೆ ಮಾಡಿಲ್ಲ’ ಎಂದು ಆಕ್ಷೇಪಿಸಿ ಸುಪ್ರೀಂ ಕೋರ್ಟ್ನ ವಕೀಲೆ ಚಂದ್ರಿಕಾ ಉಪಾಧ್ಯಾಯ ಈ ಅರ್ಜಿ ಸಲ್ಲಿಸಿದ್ದಾರೆ.</p><p>‘ನ್ಯೂ ಆರ್ಕ್ ಮಿಷನ್ ಆಫ್ ಇಂಡಿಯಾ ಸಂಸ್ಥೆಯಲ್ಲಿ ಮನೋಸಾಮಾಜಿಕ ಮತ್ತು ಅಂಗವೈಕ್ಯಲ ಹೊಂದಿದ 900ಕ್ಕೂ ಅಧಿಕ ಮಹಿಳೆಯರು ಮತ್ತು ಪುರುಷರಿದ್ದಾರೆ. ಅವರ ಪೈಕಿ ಅನೇಕರಿಗೆ ಅಂಗೈಕಲ್ಯತೆಯ ಪ್ರಮಾಣ ಪತ್ರ ಮತ್ತು ಮೂಲ ಗುರುತಿನ ಚೀಟಿಗಳೇ ಇಲ್ಲ. ಈ ಕುರಿತು ಸಂಬಂಧಿಸಿದ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸಲಾಗಿದ್ದರೂ ಪ್ರಯೋಜನವಾಗಿಲ್ಲ. ಆದ್ದರಿಂದ, ಕಾಲಮಿತಿಯಲ್ಲಿ ನ್ಯೂ ಆರ್ಕ್ ಮಿಷನ್ ಆಫ್ ಇಂಡಿಯಾ ಸಂಸ್ಥೆಯಲ್ಲಿರುವ ಮಹಿಳೆಯರು ಮತ್ತು ಅಂಗವಿಕಲರಿಗೆ ಗುರುತಿನ ಚೀಟಿ ಹಾಗೂ ಅಂಗೈಕಲ್ಯತೆಯ ಪ್ರಮಾಣ ಪತ್ರ ವಿತರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಮನವಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದೊಡ್ಡಗುಬ್ಡಿ ಗ್ರಾಮದಲ್ಲಿನ ‘ನ್ಯೂ ಆರ್ಕ್ ಮಿಷನ್ ಆಫ್ ಇಂಡಿಯಾ’ ಸಂಸ್ಥೆಯಲ್ಲಿರುವ ಮನೋಸಾಮಾಜಿಕ ಅಂಗವಿಕಲರಿಗೆ ವೈಯಕ್ತಿಕ ಗುರುತಿನ ಚೀಟಿ ಹಾಗೂ ಅಂಗವೈಕಲ್ಯತೆಯ ಪ್ರಮಾಣ ಪತ್ರ ವಿತರಿಸಲು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p><p>ಮಾನಸಿಕ–ಸಾಮಾಜಿಕ ಅಂಗವೈಕಲ್ಯ ಹೊಂದಿರುವ ಎಲ್ಲಾ ವ್ಯಕ್ತಿಗಳ ಗುರುತಿಸುವಿಕೆ ಮತ್ತು ಪ್ರಮಾಣೀಕರಿಸುವ ನಿಟ್ಟಿನಲ್ಲಿ; ಅಂಗವಿಕಲರ ಹಕ್ಕುಗಳ ಕಾಯ್ದೆ–2016ರ ಅನುಸಾರ ಅಂಗವೈಕಲ್ಯ ಪ್ರಮಾಣಪತ್ರಗಳನ್ನು ನೀಡುವಂತೆ ಬೆಂಗಳೂರಿನ ‘ನ್ಯೂ ಆರ್ಕ್ ಮಿಷನ್’ಗೆ ನಿರ್ದೇಶಿಸಬೇಕು ಎಂದು ಕೋರಲಾದ ರಿಟ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p><p>ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಕೇಂದ್ರ, ರಾಜ್ಯ ಸರ್ಕಾರ ಹಾಗೂ ‘ನ್ಯೂ ಆರ್ಕ್ ಮಿಷನ್ ಆಫ್ ಇಂಡಿಯಾ’ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಆಗಸ್ಟ್ 11ಕ್ಕೆ ಮುಂದೂಡಿತು.</p><p><strong>ಏನಿದು ಅರ್ಜಿ?:</strong> ‘ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ವ್ಯಾಪ್ತಿಯಲ್ಲಿನ ಅಂಗವಿಕಲರಿಗೆ ಆಧಾರ್ ಕಾರ್ಡ್ ಇಲ್ಲದ ಕಾರಣ ಅಂಗವೈಕಲ್ಯ ಪ್ರಮಾಣ ಪತ್ರ ಮತ್ತು ಗುರುತಿನ ಚೀಟಿ ವಿತರಣೆ ಮಾಡುವಂತೆ ಸುಪ್ರೀಂ ಕೋರ್ಟ್ ಸೂಕ್ತ ನಿರ್ದೇಶನಗಳನ್ನು ನೀಡಿದೆ. ಈ ಸಮಸ್ಯೆ ಪರಿಹರಿಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಸರ್ಕಾರಗಳಿಗೆ 2021ರಲ್ಲೇ ನಿರ್ದೇಶಿಸಿದೆ. ಆದರೆ, ಕರ್ನಾಟಕದಲ್ಲಿ ಈ ನಿರ್ದೇಶನ ಪಾಲನೆ ಮಾಡಿಲ್ಲ’ ಎಂದು ಆಕ್ಷೇಪಿಸಿ ಸುಪ್ರೀಂ ಕೋರ್ಟ್ನ ವಕೀಲೆ ಚಂದ್ರಿಕಾ ಉಪಾಧ್ಯಾಯ ಈ ಅರ್ಜಿ ಸಲ್ಲಿಸಿದ್ದಾರೆ.</p><p>‘ನ್ಯೂ ಆರ್ಕ್ ಮಿಷನ್ ಆಫ್ ಇಂಡಿಯಾ ಸಂಸ್ಥೆಯಲ್ಲಿ ಮನೋಸಾಮಾಜಿಕ ಮತ್ತು ಅಂಗವೈಕ್ಯಲ ಹೊಂದಿದ 900ಕ್ಕೂ ಅಧಿಕ ಮಹಿಳೆಯರು ಮತ್ತು ಪುರುಷರಿದ್ದಾರೆ. ಅವರ ಪೈಕಿ ಅನೇಕರಿಗೆ ಅಂಗೈಕಲ್ಯತೆಯ ಪ್ರಮಾಣ ಪತ್ರ ಮತ್ತು ಮೂಲ ಗುರುತಿನ ಚೀಟಿಗಳೇ ಇಲ್ಲ. ಈ ಕುರಿತು ಸಂಬಂಧಿಸಿದ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸಲಾಗಿದ್ದರೂ ಪ್ರಯೋಜನವಾಗಿಲ್ಲ. ಆದ್ದರಿಂದ, ಕಾಲಮಿತಿಯಲ್ಲಿ ನ್ಯೂ ಆರ್ಕ್ ಮಿಷನ್ ಆಫ್ ಇಂಡಿಯಾ ಸಂಸ್ಥೆಯಲ್ಲಿರುವ ಮಹಿಳೆಯರು ಮತ್ತು ಅಂಗವಿಕಲರಿಗೆ ಗುರುತಿನ ಚೀಟಿ ಹಾಗೂ ಅಂಗೈಕಲ್ಯತೆಯ ಪ್ರಮಾಣ ಪತ್ರ ವಿತರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಮನವಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>