‘ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಹೊಸದಾಗಿ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಈ ಹಿಂದೆ ಅಂದರೆ 2011ರಲ್ಲಿ ಸದಸ್ಯರಾಗಿ ಆಯ್ಕೆಯಾಗಿದ್ದ ಡಾ.ವಿ.ಕಂಚಿ ಪ್ರಲ್ಹಾದ್ ಮತ್ತು ಡಾ.ನಾಗರಾಜ್ ಅಣ್ಣೇಗೌಡ ಅನಧಿಕೃತವಾಗಿ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದ್ದರಿಂದ, ಅವರನ್ನು ಆ ಸ್ಥಾನಗಳಿಂದ ತೆರವುಗೊಳಿಸಲು ನಿರ್ದೇಶಿಸಬೇಕು. ಶೀಘ್ರವೇ ಐವರು ಸದಸ್ಯರ ನಾಮ ನಿರ್ದೇಶನ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.