ಪ್ರಕರಣವೇನು?: ‘ರಾಜ್ಯದಲ್ಲಿ ಅನಧಿಕೃತವಾಗಿ ಉಳುಮೆ ಮಾಡುತ್ತಿರುವ ಜಮೀನನ್ನು ಸಕ್ರಮಗೊಳಿಸಲು ಮತ್ತು ಆ ಜಮೀನಿನಲ್ಲಿ ಉಳುಮೆ ಮುಂದುವರಿಸಲು ಅನುಮತಿ ನೀಡುವಂತೆ ಕೋರಿ ಹಲವು ಮಂದಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಇಂತಹ ಮನವಿಗಳನ್ನು ಸಕ್ಷಮ ಸಮಿತಿಯೊಂದು ಪರಿಶೀಲನೆ ನಡೆಸುವ ಅಗತ್ಯವಿದೆ. ಹೀಗಾಗಿ, ಸಮಿತಿ ರಚಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಬಂಗಾರಪೇಟೆ ತಾಲ್ಲೂಕಿನ ಬಾವರಹಳ್ಳಿಯ ಮಂಜುನಾಥ ಸೇರಿದಂತೆ ರಾಜ್ಯದ ವಿವಿಧೆಡೆಯ 20ಕ್ಕೂ ಹೆಚ್ಚು ಜನ 2019ರಲ್ಲಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.