ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ವೆಂಕಟೇಶ ಪಿ. ದಳವಾಯಿ,‘ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಆಂಬುಲೆನ್ಸ್ ನಿರ್ವಹಣಾ ವ್ಯವಸ್ಥೆ ಜಾರಿಗೆ ಈ ಮೊದಲು ಕರೆದಿದ್ದ ₹ 1,800 ಕೋಟಿ ಮೊತ್ತದ ಟೆಂಡರ್ ಅನ್ನು ಸರ್ಕಾರ ರದ್ದುಪಡಿಸಿತ್ತು. ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ ನಂತರ ಆ ಆದೇಶ ಹಿಂಪಡೆದು ಹೊಸ ಟೆಂಡರ್ ಕರೆಯುವುದಾಗಿ ಹೇಳಿತ್ತು. ಆದರೆ, ಈವರೆಗೂ ಕರೆದಿಲ್ಲ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.