<p><strong>ಬೆಂಗಳೂರು:</strong> ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಆ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಶಾಲಾ–ಕಾಲೇಜುಗಳ ತರಗತಿಗಳನ್ನು ಮುಂದುವರಿಸಲು ರೂಪಿಸಿರುವ ಕ್ರಿಯಾ ಯೋಜನೆ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಮುಂದುವರಿಸಲು ನಿರ್ದೇಶನ ನೀಡುವಂತೆ ಕೋರಿ ಎಂ.ರಾಧಾ ಮತ್ತು ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಏ.22 ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಿತು.</p>.<p>‘ಮಕ್ಕಳು ಶಾಲೆಗಳಿಗೆ ಹೋಗದಿದ್ದರೆ ಅವರನ್ನು ಬಾಲ ಕಾರ್ಮಿಕ ಪದ್ಧತಿ ಮತ್ತು ಕಳ್ಳಸಾಗಣೆಗೆ ಬಳಸಿಕೊಳ್ಳುವ ಸಾಧ್ಯತೆ ಇದೆ’ ಎಂದು ಪೀಠ ಕಳವಳ ವ್ಯಕ್ತಪಡಿಸಿತು. ಶಿಕ್ಷಣ ಪಡೆಯುವುದು ಮಕ್ಕಳ ಮೂಲಭೂತ ಹಕ್ಕು. ಅದನ್ನು ಕಾಪಾಡಲು ಸರ್ಕಾರ ಈ ಸವಾಲಿನ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬೇಕಾಗುತ್ತದೆ. ಮಕ್ಕಳಿಗೆ ಶಿಕ್ಷಣದ ಹಕ್ಕು ಕೊಡಿಸುವ ಸಲುವಾಗಿಯೇ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಕರೆತರುವ ಪ್ರಯತ್ನ ನಡೆಯುತ್ತಿದೆ. ಅದು ಪರಿಪೂರ್ಣವಾಗಿ ಆಗಿದೆಯೇ’ ಎಂದು ಪೀಠ ಪ್ರಶ್ನಿಸಿದೆ.</p>.<p>ಮಧ್ಯಾಹ್ನದ ಬಿಸಿಯೂಟದ ಬದಲಿಗೆ ಪಡಿತರವನ್ನು ವಿತರಿಸಲಾಗುತ್ತಿದೆ ಎಂದು ಸರ್ಕಾರ, ನ್ಯಾಯಾಲಯಕ್ಕೆ ಮಾಹಿತಿ ನೀಡಿತು.</p>.<p>‘ಹಿಂದಿನ ಶೈಕ್ಷಣಿಕ ವರ್ಷಗಳಿಗೆ ಹೋಲಿಸಿದರೆ ಸುಮಾರು 9 ಸಾವಿರ ಮಕ್ಕಳ ಹಾಜರಾತಿ ಕಡಿಮೆಯಾಗಿದೆ.’ ಎಂದು ಅರ್ಜಿದಾರರ ಪರ ವಕೀಲರು ಆತಂಕ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಆ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಶಾಲಾ–ಕಾಲೇಜುಗಳ ತರಗತಿಗಳನ್ನು ಮುಂದುವರಿಸಲು ರೂಪಿಸಿರುವ ಕ್ರಿಯಾ ಯೋಜನೆ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಮುಂದುವರಿಸಲು ನಿರ್ದೇಶನ ನೀಡುವಂತೆ ಕೋರಿ ಎಂ.ರಾಧಾ ಮತ್ತು ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಏ.22 ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಿತು.</p>.<p>‘ಮಕ್ಕಳು ಶಾಲೆಗಳಿಗೆ ಹೋಗದಿದ್ದರೆ ಅವರನ್ನು ಬಾಲ ಕಾರ್ಮಿಕ ಪದ್ಧತಿ ಮತ್ತು ಕಳ್ಳಸಾಗಣೆಗೆ ಬಳಸಿಕೊಳ್ಳುವ ಸಾಧ್ಯತೆ ಇದೆ’ ಎಂದು ಪೀಠ ಕಳವಳ ವ್ಯಕ್ತಪಡಿಸಿತು. ಶಿಕ್ಷಣ ಪಡೆಯುವುದು ಮಕ್ಕಳ ಮೂಲಭೂತ ಹಕ್ಕು. ಅದನ್ನು ಕಾಪಾಡಲು ಸರ್ಕಾರ ಈ ಸವಾಲಿನ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬೇಕಾಗುತ್ತದೆ. ಮಕ್ಕಳಿಗೆ ಶಿಕ್ಷಣದ ಹಕ್ಕು ಕೊಡಿಸುವ ಸಲುವಾಗಿಯೇ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಕರೆತರುವ ಪ್ರಯತ್ನ ನಡೆಯುತ್ತಿದೆ. ಅದು ಪರಿಪೂರ್ಣವಾಗಿ ಆಗಿದೆಯೇ’ ಎಂದು ಪೀಠ ಪ್ರಶ್ನಿಸಿದೆ.</p>.<p>ಮಧ್ಯಾಹ್ನದ ಬಿಸಿಯೂಟದ ಬದಲಿಗೆ ಪಡಿತರವನ್ನು ವಿತರಿಸಲಾಗುತ್ತಿದೆ ಎಂದು ಸರ್ಕಾರ, ನ್ಯಾಯಾಲಯಕ್ಕೆ ಮಾಹಿತಿ ನೀಡಿತು.</p>.<p>‘ಹಿಂದಿನ ಶೈಕ್ಷಣಿಕ ವರ್ಷಗಳಿಗೆ ಹೋಲಿಸಿದರೆ ಸುಮಾರು 9 ಸಾವಿರ ಮಕ್ಕಳ ಹಾಜರಾತಿ ಕಡಿಮೆಯಾಗಿದೆ.’ ಎಂದು ಅರ್ಜಿದಾರರ ಪರ ವಕೀಲರು ಆತಂಕ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>