‘ಹೈಕೋರ್ಟ್ ಆದೇಶ ಹೊರಡಿಸಿ 45 ದಿನಗಳಾದರೂ ಆಯೋಗಕ್ಕೆ ಸಂಬಂಧಿಸಿದವರು ಯಾಕೆ ಒಂದೇ ಒಂದು ಹಾಳೆಯ ದಾಖಲೆಯನ್ನೂ ಸಲ್ಲಿಸಿಲ್ಲ’ ಎಂದು ಕಿಡಿ ಕಾರಿರುವ ನ್ಯಾಯಪೀಠ, ‘ಇದಕ್ಕೆ ರಾಜ್ಯ ಸರ್ಕಾರ ಸೂಕ್ತ ಉತ್ತರ ನೀಡಬೇಕು. ಇಲ್ಲವಾದಲ್ಲಿ ಈ ನಿಟ್ಟಿನಲ್ಲಿ ಸೂಕ್ತ ಆದೇಶ ಹೊರಡಿಸಲಾಗುವುದು’ ಎಂದು ಎಚ್ಚರಿಸಿದ್ದು, ವಿಚಾರಣೆಯನ್ನು ಇದೇ 12ಕ್ಕೆ ಮುಂದೂಡಿದೆ.