ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ದಿನೇಶ್ ಕುಮಾರ್ ಕೆ.ರಾವ್ ಅವರು, ‘ಈ ಪ್ರಕರಣದಲ್ಲಿ ಅರ್ಜಿದಾರರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ವಿಚಾರಣಾ ನ್ಯಾಯಾಲಯದ ಆದೇಶದಂತೆ ಈಗಾಗಲೇ ಮೂರು ದಿನಗಳ ಸಾದಾ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಅವರಿಗೆ 81 ವರ್ಷವಾಗಿದೆ. ಮಕ್ಕಳೂ ಇಲ್ಲ. ವಯಸ್ಸಾಗಿರುವ ಪತ್ನಿಯ ಆರೈಕೆಯನ್ನೂ ಅವರು ಮಾಡಬೇಕಿದೆ. ಹೀಗಾಗಿ, ಮನವಿ ಪರಿಗಣಿಸಿ ಶಿಕ್ಷೆ ಮಾರ್ಪಾಡು ಮಾಡಬೇಕು’ ಎಂದು ಕೋರಿದ್ದರು.