<p><strong>ಬೆಂಗಳೂರು:</strong> ‘ಏಕಲವ್ಯ ಪ್ರಶಸ್ತಿ’ ಪಡೆಯಲು ಅರ್ಹತೆ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಮಾರ್ಗಸೂಚಿಗೆ ಸಂಬಂಧಿಸಿದಂತೆ ಮಧ್ಯಪ್ರವೇಶಿಸಲು ನಿರಾಕರಿಸಿರುವ ಹೈಕೋರ್ಟ್, ‘ನ್ಯಾಯಾಲಯಗಳು ಕ್ರೀಡೆಗಳಲ್ಲಿನ ತೀರ್ಪುಗಾರರಂತೆ ಇರಬೇಕೆ ವಿನಃ ರೆಫರಿಗಳಂತೆ ಅಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>ಈ ಸಂಬಂಧ ರೋಲರ್ ಸ್ಕೇಟಿಂಗ್ ಅಥ್ಲೀಟ್ ವಿ.ವರ್ಷಿತ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಸರ್ಕಾರದ ನೀತಿಗಳು ಸಂವಿಧಾನ ಬಾಹಿರ ಹಾಗೂ ದೋಷಪೂರಿತವಾಗಿದ್ದಲ್ಲಿ ಮಾತ್ರವೇ ನ್ಯಾಯಾಲಯದ ಪರಿಶೀಲನೆಗೆ ಒಳಪಡುತ್ತವೆ’ ಎಂದು ಹೇಳಿದೆ.</p>.<p>‘ಸರ್ಕಾರ ಹಾಗೂ ಶಾಸನಬದ್ಧ ಪ್ರಾಧಿಕಾರಗಳು ಎಚ್ಚರಿಕೆಯಿಂದ ರಚಿಸುವ ನೀತಿಗಳ ಬಗ್ಗೆ ನ್ಯಾಯಾಲಯಗಳು ಸದಾ ಸಂಯಮ ಪ್ರದರ್ಶಿಸಬೇಕು. ಸರ್ಕಾರದ ನೀತಿಗಳು ಸಂವಿಧಾನದ 14ನೇ ವಿಧಿಯ ಅಡಿಯಲ್ಲಿನ ಸಮಾನತೆ ಉಲ್ಲಂಘನೆ, ಅಸಮಂಜಸ ಹಾಗೂ ದೋಷದಿಂದ ಕೂಡಿದ್ದರೆ ಮಾತ್ರವೇ ಕೋರ್ಟ್ ಮಧ್ಯಪ್ರವೇಶಿಸಬಹುದು’ ಎಂದು ನ್ಯಾಯಪೀಠ ತಿಳಿಸಿದೆ.</p>.<p><strong>ಪ್ರಕರಣವೇನು?: </strong></p><p>‘ಏಕಲವ್ಯ ಪ್ರಶಸ್ತಿ’ ನೀಡಲು ರಾಜ್ಯ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಕಾಲಕಾಲಕ್ಕೆ ಮಾರ್ಗಸೂಚಿಗಳನ್ನು ನಿಗದಿಪಡಿಸುತ್ತದೆ. ಇದರನ್ವಯ 2015ರ ಆಗಸ್ಟ್ 24ರಂದು ಏಕಲವ್ಯ ಪ್ರಶಸ್ತಿಗೆ ಅರ್ಹತೆ ಹೊಂದಲು ಮಾರ್ಗಸೂಚಿಗಳನ್ನು ಹೊರಡಿಸಲಾಗಿತ್ತು. ಅರ್ಜಿದಾರರು ಈ ಮಾರ್ಗಸೂಚಿಗಳನ್ನು ಪ್ರಶ್ನಿಸಿದ್ದರು.</p>.<p>ಅರ್ಜಿದಾರರು ರೋಲರ್ ಸ್ಕೇಟಿಂಗ್ ಪಟುವಾಗಿದ್ದು, ರಾಷ್ಟ್ರೀಯ ಕಿರಿಯ, ಹಿರಿಯ ಹಾಗೂ ಏಷ್ಯನ್ ಚಾಂಪಿಯನ್ ಶಿಪ್ಗಳಲ್ಲಿ ಭಾಗವಹಿಸಿದ್ದು, ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ವಿಜೇತರೂ ಹೌದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಏಕಲವ್ಯ ಪ್ರಶಸ್ತಿ’ ಪಡೆಯಲು ಅರ್ಹತೆ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಮಾರ್ಗಸೂಚಿಗೆ ಸಂಬಂಧಿಸಿದಂತೆ ಮಧ್ಯಪ್ರವೇಶಿಸಲು ನಿರಾಕರಿಸಿರುವ ಹೈಕೋರ್ಟ್, ‘ನ್ಯಾಯಾಲಯಗಳು ಕ್ರೀಡೆಗಳಲ್ಲಿನ ತೀರ್ಪುಗಾರರಂತೆ ಇರಬೇಕೆ ವಿನಃ ರೆಫರಿಗಳಂತೆ ಅಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>ಈ ಸಂಬಂಧ ರೋಲರ್ ಸ್ಕೇಟಿಂಗ್ ಅಥ್ಲೀಟ್ ವಿ.ವರ್ಷಿತ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಸರ್ಕಾರದ ನೀತಿಗಳು ಸಂವಿಧಾನ ಬಾಹಿರ ಹಾಗೂ ದೋಷಪೂರಿತವಾಗಿದ್ದಲ್ಲಿ ಮಾತ್ರವೇ ನ್ಯಾಯಾಲಯದ ಪರಿಶೀಲನೆಗೆ ಒಳಪಡುತ್ತವೆ’ ಎಂದು ಹೇಳಿದೆ.</p>.<p>‘ಸರ್ಕಾರ ಹಾಗೂ ಶಾಸನಬದ್ಧ ಪ್ರಾಧಿಕಾರಗಳು ಎಚ್ಚರಿಕೆಯಿಂದ ರಚಿಸುವ ನೀತಿಗಳ ಬಗ್ಗೆ ನ್ಯಾಯಾಲಯಗಳು ಸದಾ ಸಂಯಮ ಪ್ರದರ್ಶಿಸಬೇಕು. ಸರ್ಕಾರದ ನೀತಿಗಳು ಸಂವಿಧಾನದ 14ನೇ ವಿಧಿಯ ಅಡಿಯಲ್ಲಿನ ಸಮಾನತೆ ಉಲ್ಲಂಘನೆ, ಅಸಮಂಜಸ ಹಾಗೂ ದೋಷದಿಂದ ಕೂಡಿದ್ದರೆ ಮಾತ್ರವೇ ಕೋರ್ಟ್ ಮಧ್ಯಪ್ರವೇಶಿಸಬಹುದು’ ಎಂದು ನ್ಯಾಯಪೀಠ ತಿಳಿಸಿದೆ.</p>.<p><strong>ಪ್ರಕರಣವೇನು?: </strong></p><p>‘ಏಕಲವ್ಯ ಪ್ರಶಸ್ತಿ’ ನೀಡಲು ರಾಜ್ಯ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಕಾಲಕಾಲಕ್ಕೆ ಮಾರ್ಗಸೂಚಿಗಳನ್ನು ನಿಗದಿಪಡಿಸುತ್ತದೆ. ಇದರನ್ವಯ 2015ರ ಆಗಸ್ಟ್ 24ರಂದು ಏಕಲವ್ಯ ಪ್ರಶಸ್ತಿಗೆ ಅರ್ಹತೆ ಹೊಂದಲು ಮಾರ್ಗಸೂಚಿಗಳನ್ನು ಹೊರಡಿಸಲಾಗಿತ್ತು. ಅರ್ಜಿದಾರರು ಈ ಮಾರ್ಗಸೂಚಿಗಳನ್ನು ಪ್ರಶ್ನಿಸಿದ್ದರು.</p>.<p>ಅರ್ಜಿದಾರರು ರೋಲರ್ ಸ್ಕೇಟಿಂಗ್ ಪಟುವಾಗಿದ್ದು, ರಾಷ್ಟ್ರೀಯ ಕಿರಿಯ, ಹಿರಿಯ ಹಾಗೂ ಏಷ್ಯನ್ ಚಾಂಪಿಯನ್ ಶಿಪ್ಗಳಲ್ಲಿ ಭಾಗವಹಿಸಿದ್ದು, ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ವಿಜೇತರೂ ಹೌದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>