<p>ಬೆಂಗಳೂರು: ಮಾಗಡಿ ರಸ್ತೆಯಲ್ಲಿರುವ ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಸೇರಿದ ಜಾಗದಲ್ಲಿ ಕೆಲ ಭಾಗವನ್ನು ಕೊಳೆಗೇರಿ ನಿವಾಸಿಗಳ ವಸತಿ ನಿರ್ಮಾಣಕ್ಕೆ ನಿಗದಿಪಡಿಸಿ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.</p>.<p>ಈ ಸಂಬಂಧ ‘ಕೇಂದ್ರ ಪರಿಹಾರ ಸಮಿತಿ’ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ, ‘ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಸೇರಿದ ಜಾಗದಲ್ಲಿ ಹೆಚ್ಚಿನ ಭೂಮಿಯನ್ನು ಪಡೆದಿದ್ದರೆ ಪರಿಸ್ಥಿತಿ ಬೇರೆಯೇ ಆಗಿರುತ್ತಿತ್ತು. ಆದರೆ, ಈ ಪ್ರಕರಣದಲ್ಲಿ ಅಂತಹ ಪರಿಸ್ಥಿತಿ ಇಲ್ಲವಾದ್ದರಿಂದ ಅರ್ಜಿ ಊರ್ಜಿತವಾಗದು’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>‘ರಾಜ್ಯ ಸರ್ಕಾರದ ಒಂದು ಅಂಗವು ಮತ್ತೊಂದು ಅಂಗಸಂಸ್ಥೆ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದೆ. ಈ ಪ್ರಕರಣದಲ್ಲಿ ಕೊಳೆಗೇರಿ ನಿವಾಸಿಗಳು ಹಲವು ವರ್ಷಗಳಿಂದ ವಸತಿ ಸೌಕರ್ಯವಿಲ್ಲದೆ ಬಳಲುವಂತಾಗಿರುವುದು ಕಂಡು ಬಂದಿದೆ. ಹಾಗಾಗಿ, ರಾಜ್ಯ ಸರ್ಕಾರವೇ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ವ್ಯಾಜ್ಯವನ್ನು ಬಗೆಹರಿಸಲು ಮುಂದಾಗಬೇಕು’ ಎಂದು ನ್ಯಾಯಪೀಠ ಸಲಹೆ ಮಾಡಿದೆ.</p>.<p><strong>ಪ್ರಕರಣವೇನು?:</strong> </p><p>ಮೈಸೂರು ಮಹಾರಾಜರ ಆಡಳಿತಾವಧಿಯಲ್ಲಿ 1941ರಲ್ಲಿ ಯಶವಂತಪುರ ಹೋಬಳಿಗೆ ಸೇರಿದ ಪ್ರದೇಶದಲ್ಲಿನ 311 ಎಕರೆ ಜಮೀನನನ್ನು ಭಿಕ್ಷುಕರ ಪುನರ್ ವಸತಿಗಾಗಿ ಮಂಜೂರು ಮಾಡಲಾಗಿತ್ತು. ಈ ಪೈಕಿ 63 ಎಕರೆ ಜಾಗವನ್ನು ಭಿಕ್ಷುಕರ ಪುನರ್ ವಸತಿಗೆ ಮೀಸಲಿಟ್ಟು, ಉಳಿದ ಜಾಗವನ್ನು ಸುಮನಹಳ್ಳಿ ಕ್ಷಯ ರೋಗಿಗಳ ಪುನರ್ ವಸತಿ ಕೇಂದ್ರಕ್ಕೆ ಗುತ್ತಿಗೆ ಆಧಾರದಲ್ಲಿ ನೀಡಲಾಗಿತ್ತು. ಈ ಜಾಗದಲ್ಲಿ 27 ಎಕರೆಯನ್ನು ಕೊಳೆಗೇರಿ ನಿವಾಸಿಗಳಿಗೆ ಪುನರ್ ವಸತಿ ಮತ್ತಿತರ ಉದ್ದೇಶಗಳಿಗೆ ಬಳಸಿಕೊಳ್ಳಲು ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗೆ ಅಧಿಕಾರ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮಾಗಡಿ ರಸ್ತೆಯಲ್ಲಿರುವ ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಸೇರಿದ ಜಾಗದಲ್ಲಿ ಕೆಲ ಭಾಗವನ್ನು ಕೊಳೆಗೇರಿ ನಿವಾಸಿಗಳ ವಸತಿ ನಿರ್ಮಾಣಕ್ಕೆ ನಿಗದಿಪಡಿಸಿ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.</p>.<p>ಈ ಸಂಬಂಧ ‘ಕೇಂದ್ರ ಪರಿಹಾರ ಸಮಿತಿ’ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ, ‘ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಸೇರಿದ ಜಾಗದಲ್ಲಿ ಹೆಚ್ಚಿನ ಭೂಮಿಯನ್ನು ಪಡೆದಿದ್ದರೆ ಪರಿಸ್ಥಿತಿ ಬೇರೆಯೇ ಆಗಿರುತ್ತಿತ್ತು. ಆದರೆ, ಈ ಪ್ರಕರಣದಲ್ಲಿ ಅಂತಹ ಪರಿಸ್ಥಿತಿ ಇಲ್ಲವಾದ್ದರಿಂದ ಅರ್ಜಿ ಊರ್ಜಿತವಾಗದು’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>‘ರಾಜ್ಯ ಸರ್ಕಾರದ ಒಂದು ಅಂಗವು ಮತ್ತೊಂದು ಅಂಗಸಂಸ್ಥೆ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದೆ. ಈ ಪ್ರಕರಣದಲ್ಲಿ ಕೊಳೆಗೇರಿ ನಿವಾಸಿಗಳು ಹಲವು ವರ್ಷಗಳಿಂದ ವಸತಿ ಸೌಕರ್ಯವಿಲ್ಲದೆ ಬಳಲುವಂತಾಗಿರುವುದು ಕಂಡು ಬಂದಿದೆ. ಹಾಗಾಗಿ, ರಾಜ್ಯ ಸರ್ಕಾರವೇ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ವ್ಯಾಜ್ಯವನ್ನು ಬಗೆಹರಿಸಲು ಮುಂದಾಗಬೇಕು’ ಎಂದು ನ್ಯಾಯಪೀಠ ಸಲಹೆ ಮಾಡಿದೆ.</p>.<p><strong>ಪ್ರಕರಣವೇನು?:</strong> </p><p>ಮೈಸೂರು ಮಹಾರಾಜರ ಆಡಳಿತಾವಧಿಯಲ್ಲಿ 1941ರಲ್ಲಿ ಯಶವಂತಪುರ ಹೋಬಳಿಗೆ ಸೇರಿದ ಪ್ರದೇಶದಲ್ಲಿನ 311 ಎಕರೆ ಜಮೀನನನ್ನು ಭಿಕ್ಷುಕರ ಪುನರ್ ವಸತಿಗಾಗಿ ಮಂಜೂರು ಮಾಡಲಾಗಿತ್ತು. ಈ ಪೈಕಿ 63 ಎಕರೆ ಜಾಗವನ್ನು ಭಿಕ್ಷುಕರ ಪುನರ್ ವಸತಿಗೆ ಮೀಸಲಿಟ್ಟು, ಉಳಿದ ಜಾಗವನ್ನು ಸುಮನಹಳ್ಳಿ ಕ್ಷಯ ರೋಗಿಗಳ ಪುನರ್ ವಸತಿ ಕೇಂದ್ರಕ್ಕೆ ಗುತ್ತಿಗೆ ಆಧಾರದಲ್ಲಿ ನೀಡಲಾಗಿತ್ತು. ಈ ಜಾಗದಲ್ಲಿ 27 ಎಕರೆಯನ್ನು ಕೊಳೆಗೇರಿ ನಿವಾಸಿಗಳಿಗೆ ಪುನರ್ ವಸತಿ ಮತ್ತಿತರ ಉದ್ದೇಶಗಳಿಗೆ ಬಳಸಿಕೊಳ್ಳಲು ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗೆ ಅಧಿಕಾರ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>