<p><strong>ಬೆಂಗಳೂರು</strong>: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್ಸಿ–ಎಸ್ಟಿ) ಮೇಲಿನ ದೌರ್ಜನ್ಯ ತಡೆ ವಿಶೇಷ ಕಾಯ್ದೆಯ ದುರುಪಯೋಗ ಆಗಬಾರದು‘ ಎಂದು ಪುನರುಚ್ಚರಿಸಿರುವ ಹೈಕೋರ್ಟ್, ಈ ಕಾಯ್ದೆಯಡಿ ಖಾಸಗಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸಿದೆ.</p><p>ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಗಿರಿನಗರದ ಕೆ.ಎಸ್.ವಿಶ್ವಕಿರಣ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಅರ್ಜಿದಾರರು ಜಾತಿಯ ಹೆಸರಿನಲ್ಲಿ ನಿಂದಿಸಿದ್ದಾರೆ ಎಂದು ಹೇಳಲು ಈ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯವಿಲ್ಲ. ಫಿರ್ಯಾದುದಾರರ ಆರೋಪದಲ್ಲೂ ಅದು ಸ್ಪಷ್ಟವಾಗಿಲ್ಲ’ ಎಂಬ ಅಭಿಪ್ರಾಯದೊಂದಿಗೆ ದೂರು ವಜಾಗೊಳಿಸಿ ಆದೇಶಿಸಿದೆ.</p><p>’ಆರೋಪಿಯು, ಅಂಜಿನಮ್ಮ ಅವರ ಜಾತಿ ಹೆಸರು ಹಿಡಿದು ತುಚ್ಛ ಶಬ್ದಗಳ ಮೂಲಕ ನಿಂದಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಆದರೆ, ಬೈಸಿಕೊಂಡಿರುವ ಅಂಜಿನಮ್ಮ ದೂರು ನೀಡಿಲ್ಲ. ದೂರು ನೀಡಿರುವುದು ರಾಮಯ್ಯ ಎಂಬುವರು. ರಾಮಯ್ಯಗೋ ಘಟನೆಯ ಬಗ್ಗೆ ಸ್ಪಷ್ಟತೆಯೇ ಇಲ್ಲ. ಹೀಗಿರುವಾಗ, ಈ ಪ್ರಕರಣದಲ್ಲಿ ತನಿಖೆ ನಡೆದರೆ ಏನೂ ಪ್ರಯೋಜನವಾಗುವುದಿಲ್ಲ. ಒಂದುವೇಳೆ ಪ್ರಕರಣವನ್ನು ಮುಂದುವರಿಸಿದರೆ ಕಾನೂನಿನ ದುರ್ಬಳಕೆ ಆಗಲಿದೆ. ಹಾಗಾಗಿ, ಕ್ರಿಮಿನಲ್ ಪ್ರಕ್ರಿಯೆ ರದ್ದುಗೊಳಿಸಲಾಗುತ್ತದೆ’ ಎಂದು ನ್ಯಾಯಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್ಸಿ–ಎಸ್ಟಿ) ಮೇಲಿನ ದೌರ್ಜನ್ಯ ತಡೆ ವಿಶೇಷ ಕಾಯ್ದೆಯ ದುರುಪಯೋಗ ಆಗಬಾರದು‘ ಎಂದು ಪುನರುಚ್ಚರಿಸಿರುವ ಹೈಕೋರ್ಟ್, ಈ ಕಾಯ್ದೆಯಡಿ ಖಾಸಗಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸಿದೆ.</p><p>ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಗಿರಿನಗರದ ಕೆ.ಎಸ್.ವಿಶ್ವಕಿರಣ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಅರ್ಜಿದಾರರು ಜಾತಿಯ ಹೆಸರಿನಲ್ಲಿ ನಿಂದಿಸಿದ್ದಾರೆ ಎಂದು ಹೇಳಲು ಈ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯವಿಲ್ಲ. ಫಿರ್ಯಾದುದಾರರ ಆರೋಪದಲ್ಲೂ ಅದು ಸ್ಪಷ್ಟವಾಗಿಲ್ಲ’ ಎಂಬ ಅಭಿಪ್ರಾಯದೊಂದಿಗೆ ದೂರು ವಜಾಗೊಳಿಸಿ ಆದೇಶಿಸಿದೆ.</p><p>’ಆರೋಪಿಯು, ಅಂಜಿನಮ್ಮ ಅವರ ಜಾತಿ ಹೆಸರು ಹಿಡಿದು ತುಚ್ಛ ಶಬ್ದಗಳ ಮೂಲಕ ನಿಂದಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಆದರೆ, ಬೈಸಿಕೊಂಡಿರುವ ಅಂಜಿನಮ್ಮ ದೂರು ನೀಡಿಲ್ಲ. ದೂರು ನೀಡಿರುವುದು ರಾಮಯ್ಯ ಎಂಬುವರು. ರಾಮಯ್ಯಗೋ ಘಟನೆಯ ಬಗ್ಗೆ ಸ್ಪಷ್ಟತೆಯೇ ಇಲ್ಲ. ಹೀಗಿರುವಾಗ, ಈ ಪ್ರಕರಣದಲ್ಲಿ ತನಿಖೆ ನಡೆದರೆ ಏನೂ ಪ್ರಯೋಜನವಾಗುವುದಿಲ್ಲ. ಒಂದುವೇಳೆ ಪ್ರಕರಣವನ್ನು ಮುಂದುವರಿಸಿದರೆ ಕಾನೂನಿನ ದುರ್ಬಳಕೆ ಆಗಲಿದೆ. ಹಾಗಾಗಿ, ಕ್ರಿಮಿನಲ್ ಪ್ರಕ್ರಿಯೆ ರದ್ದುಗೊಳಿಸಲಾಗುತ್ತದೆ’ ಎಂದು ನ್ಯಾಯಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>