<p><strong>ಬೆಂಗಳೂರು</strong>: ಪರಿಸರ ಸ್ನೇಹಿ, ಬಟ್ಟೆಯ ಕೈಚೀಲಗಳನ್ನು ಖರೀದಿಸುವ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂಪಾಯಿಗಳ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ; ಮೈಸೂರು ಜಿಲ್ಲೆಯ ಅಂದಿನ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವ ಪೂರ್ವಾನುಮತಿಗೆ ಮುಂದಾಗುವಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. </p><p>ಈ ಸಂಬಂಧ ಮೈಸೂರಿನ ವಕೀಲ ಎನ್.ಆರ್.ರವಿಚಂದ್ರೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದ್ದು, ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ಕೈಗೊಳ್ಳಬೇಕೆಂಬ ಅರ್ಜಿದಾರರ ಪೂರ್ವಾನುಮತಿ ಕೋರಿಕೆಯನ್ನು ನಿರಾಕರಿಸಿದ್ದ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್) ಆದೇಶವನ್ನು ರದ್ದುಗೊಳಿಸಿದೆ.</p><p>‘ಈ ಆದೇಶದ ಪ್ರತಿ ಸ್ವೀಕರಿಸಿದ ದಿನದಿಂದ 4 ವಾರಗಳಲ್ಲಿ ನ್ಯಾಯದ ಹಿತದೃಷ್ಟಿಯಿಂದ ತನಿಖೆಗೆ ಪರಮಾದೇಶ ನೀಡಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದೆ.</p><p>‘ಭ್ರಷ್ಟಾಚಾರದಂತಹ ಗಂಭೀರ ಆರೋಪಗಳು ಕೇಳಿ ಬಂದಾಗ ಅವುಗಳನ್ನು ಆರಂಭದಲ್ಲೇ ನಂದಿಸುವುದು ಸಾಧುವಲ್ಲ. ನಿಜಾಂಶವನ್ನು ತನಿಖಾ ಪ್ರಕ್ರಿಯೆಯ ಮೂಲಕ ಬಯಲು ಮಾಡಲು ಅವಕಾಶ ನೀಡಬೇಕು. ಆಗ ಮಾತ್ರ ಜನರಿಗೆ ಸತ್ಯ ಅರ್ಥವಾಗುತ್ತದೆ. ಹಾಲಿ ಪ್ರಕರಣದ ಆರೋಪಗಳು ಸಾರ್ವಜನಿಕ ಪ್ರಾಮಾಣಿಕತೆಯ ಹೃದಯವನ್ನೇ ಜಖಂಗೊಳಿಸುವಂತಿವೆ. ರೋಹಿಣಿ ಸಿಂಧೂರಿ ಕೇವಲ ಆಡಳಿತಾತ್ಮಕ ಲೋಪ ಎಸಗಿದ್ದಾರೆ ಎಂಬುದಲ್ಲ. ಇವರ ನಿರ್ಧಾರದಿಂದ ಸಾರ್ವಜನಿಕ ಬೊಕ್ಕಸಕ್ಕೆ ಗಂಭೀರವಾದ ನಷ್ಟ ಉಂಟಾಗಿದೆ ಗಮನಾರ್ಹ’ ಎಂದು ನ್ಯಾಯಪೀಠ ವಿವರಿಸಿದೆ.</p><p>‘ಆರೋಪದ ತನಿಖೆಗೆ ಪೂರ್ವಾನುಮತಿ ನೀಡಲು ನಿರಾಕರಿಸಿರುವ ನಿರ್ಧಾರ ವಸ್ತುನಿಷ್ಠ ಮತ್ತು ತಾರ್ಕಿಕ ಅಂಶಗಳಿಂದ ಕೂಡಿಲ್ಲ. ಇಲಾಖೆಯು, ಆರೋಪಗಳ ಗಂಭೀರತೆಯನ್ನು ಗಮನವಿಟ್ಟು ಪರಿಶೀಲಿಸಿ ನ್ಯಾಯೋಚಿತ ನಿರ್ಧಾರ ಕೈಗೊಳ್ಳಲು ವಿಫಲವಾಗಿರುವುದು ಎದ್ದು ಕಾಣುತ್ತದೆ. ಅಷ್ಟೇ ಅಲ್ಲ, ಇದು ಅಧಿಕಾರಿ ವರ್ಗದ ಯಾಂತ್ರಿಕ ಕಸರತ್ತಿನಂತೆ ಕಾಟಾಚಾರದ ಪ್ರತಿಬಿಂಬವಾಗಿದೆ’ ಎಂದು ಡಿಪಿಎಆರ್ ನಿರ್ಧಾರಕ್ಕೆ ಕಿಡಿ ಕಾರಿದೆ.</p><p>‘ಇಲಾಖಾ ವಿಚಾರಣೆಗಳು ಮತ್ತು ಕ್ರಿಮಿನಲ್ ವಿಚಾರಣೆಗಳು ವಿಭಿನ್ನ ತಳಹದಿಯಲ್ಲಿ ಕಾರ್ಯನಿರ್ವಹಿಸುತ್ತವೆ. ಇವುಗಳಲ್ಲಿ ಪರಿಗಣಿಸಲಾಗುವ ಪುರಾವೆ ಮತ್ತು ಉದ್ದೇಶದ ಮಾನದಂಡಗಳನ್ನು ಪ್ರತ್ಯೇಕ ಕಾನೂನುಗಳಿಂದ ನಿಯಂತ್ರಿಸಲಾಗುತ್ತದೆ. ಇಲಾಖಾ ವಿಚಾರಣೆಯಲ್ಲಿ ಅಧಿಕಾರಿಯನ್ನು ದೋಷಮುಕ್ತಗೊಳಿಸಿದ ಮಾತ್ರಕ್ಕೆ ಕ್ರಿಮಿನಲ್ ತನಿಖೆ ನಡೆಯುವುದನ್ನು ತಡೆಯಲು ಸಾಧ್ಯವಿಲ್ಲ ಎಂಬುದು ಈಗಾಗಲೇ ನ್ಯಾಯಾಂಗ ಪರಾಮರ್ಶೆಯಲ್ಲಿ ಇತ್ಯರ್ಥವಾಗಿರುವ ಅಂಶ’ ಎಂಬುದನ್ನು ಮೆಲುಕು ಹಾಕಿದೆ. ಅರ್ಜಿದಾರರ ಪರ ಬಿಪಿನ್ ಹೆಗಡೆ ವಾದ ಮಂಡಿಸಿದ್ದರು.</p>.<div><blockquote>ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ–1988ಕ್ಕೆ 2018ರಲ್ಲಿ ತರಲಾದ ತಿದ್ದುಪಡಿಯಲ್ಲಿ ಕಲಂ 17ಎ ಅನ್ನು ಮುಗ್ಧರ ಪಾಲಿನ ಗುರಾಣಿಯಾಗಿ ಪರಿಚಯಿಸಲಾಗಿದೆ. ಇದು ಅಪರಾಧಿಗಳಿಗೆ ಆಶ್ರಯ ನೀಡುವುದಕ್ಕಾಗಿ ಅಲ್ಲ.</blockquote><span class="attribution">– ನ್ಯಾ.ಎಂ.ನಾಗಪ್ರಸನ್ನ</span></div>.<p><strong><ins>ಬೊಕ್ಕಸಕ್ಕೆ ₹7.65 ಕೋಟಿ ನಷ್ಟ ಆರೋಪ</ins></strong></p><p>‘ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಿಸಬೇಕು ಮತ್ತು ಪ್ಲಾಸ್ಟಿಕ್ ಬಳಕೆಗೆ ಇತಿಶ್ರೀ ಹಾಡಿ ಬಟ್ಟೆಯ ಕೈಚೀಲಗಳನ್ನು ಬಳಸಬೇಕು ಎಂದು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ಜಿಲ್ಲೆಯ ನಗರ, ಗ್ರಾಮಾಂತರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶಿಸಿದ್ದರು.</p><p>‘ಈ ನಿಟ್ಟಿನಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಚೀಲಕ್ಕೆ ₹13 ಇದ್ದರೆ ಅವುಗಳನ್ನು ಪ್ರತಿ ಚೀಲಕ್ಕೆ ₹52ರಷ್ಟು ದರ ನೀಡಿ ಖರೀದಿಸಲಾಗಿದೆ. ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ ₹7,65,15,816 ಕೋಟಿ ನಷ್ಟು ಉಂಟು ಮಾಡಲಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಪ್ರಯೋಜನ ನೀಡುವ ಉದ್ದೇಶದಿಂದ ಕಲ್ಯಾಣ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಈ ಕೈಚೀಲಗಳ ಖರೀದಿಗೆ ಬಳಸಲಾಗಿದೆ. ಗ್ರಾಮ ಸ್ವರಾಜ್ಯದ ಎಲ್ಲ ಕನಸುಗಳನ್ನು ಗಾಳಿಗೆ ತೂರಿ ಭ್ರಷ್ಟಾಚಾರ ಎಸಗಲಾಗಿದೆ’ ಎಂದು ಅರ್ಜಿದಾರರು ಆರೋಪಿಸಿದ್ದರು.</p><p>ಅಕ್ರಮದ ಕುರಿತಂತೆ, ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಬಗ್ಗೆ ಎನ್.ಆರ್.ರವಿಚಂದ್ರೇಗೌಡ 2021ರ ಅಕ್ಟೋಬರ್ 13ರಂದು ಮೈಸೂರು ಜಿಲ್ಲಾ ಭ್ರಷ್ಟಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದ್ದರು.</p>.<p><strong>ಭ್ರಷ್ಟಾಚಾರ ಕ್ಯಾನ್ಸರ್, ಪ್ಲೇಗ್, ಸಾಂಕ್ರಾಮಿಕ..!</strong></p><p>‘ಸಾರ್ವಜನಿಕ ಸೇವಕರು ತಮ್ಮ ಅಧಿಕೃತ ಕಾರ್ಯ ಅಥವಾ ಕರ್ತವ್ಯಗಳನ್ನು ನಿರ್ವಹಿಸುವಾಗ ಮಾಡಿದ ಶಿಫಾರಸುಗಳು ಅಥವಾ ನಿರ್ಧಾರಗಳಿಗೆ ಸಂಬಂಧಿಸಿದ ಅಪರಾಧಗಳ ವಿಚಾರಣೆ ಅಥವಾ ತನಿಖೆಗೆ ಅನುಮತಿ ನೀಡುವುದು ಸಾಂವಿಧಾನಿಕ ಮತ್ತು ಶಾಸನಬದ್ಧ ಕಡ್ಡಾಯ ನಿಲುವಾಗಿರಬೇಕು. ಯಾಕೆಂದರೆ, ಭ್ರಷ್ಟಾಚಾರ ಒಂದು ಪಿಡುಗು. ಇದನ್ನು ಕ್ಯಾನ್ಸರ್, ಪ್ಲೇಗ್ ಮತ್ತು ಸಾಂಕ್ರಾಮಿಕ ಎಂದು ವಿವಿಧ ರೀತಿಯಲ್ಲಿ ವರ್ಣಿಸಲಾಗಿದೆ’ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ನ್ಯಾಯಪೀಠ ಆದೇಶದಲ್ಲಿ ಉಲ್ಲೇಖಿಸಿದೆ.</p><p>‘ಭ್ರಷ್ಟಚಾರವನ್ನು ನಿಯಂತ್ರಿಸದೇ ಹೋದರೆ ಅದು ರಾಜಕೀಯ ಕ್ಷೇತ್ರವನ್ನೇ ಅಸ್ಥಿರಗೊಳಿಸುತ್ತದೆ. ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶಮಾಡುವ ಸಾಮರ್ಥ್ಯ ಭ್ರಷ್ಟಾಚಾರಕ್ಕಿದೆ. ಭ್ರಷ್ಟಾಚಾರವು ರಾಷ್ಟ್ರದ ಶತ್ರು. ಭ್ರಷ್ಟ ಸಾರ್ವಜನಿಕ ಸೇವಕರು ಯಾವುದೇ ಶ್ರೇಣಿ ಅಥವಾ ಅಂತಸ್ತನ್ನು ಹೊಂದಿದ್ದರೂ ಕಾಯ್ದೆಗೆ ಅನುಗುಣವಾಗಿ ಅಂಥವರನ್ನು ಪತ್ತೆಹಚ್ಚಿ ಶಿಕ್ಷಿಸುವುದಕ್ಕೆ ಹಿಂಜರಿಕೆ ಸಲ್ಲ’ ಎಂಬುದನ್ನು ನ್ಯಾಯಪೀಠ ಪುನರುಚ್ಚರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪರಿಸರ ಸ್ನೇಹಿ, ಬಟ್ಟೆಯ ಕೈಚೀಲಗಳನ್ನು ಖರೀದಿಸುವ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂಪಾಯಿಗಳ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ; ಮೈಸೂರು ಜಿಲ್ಲೆಯ ಅಂದಿನ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವ ಪೂರ್ವಾನುಮತಿಗೆ ಮುಂದಾಗುವಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. </p><p>ಈ ಸಂಬಂಧ ಮೈಸೂರಿನ ವಕೀಲ ಎನ್.ಆರ್.ರವಿಚಂದ್ರೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದ್ದು, ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ಕೈಗೊಳ್ಳಬೇಕೆಂಬ ಅರ್ಜಿದಾರರ ಪೂರ್ವಾನುಮತಿ ಕೋರಿಕೆಯನ್ನು ನಿರಾಕರಿಸಿದ್ದ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್) ಆದೇಶವನ್ನು ರದ್ದುಗೊಳಿಸಿದೆ.</p><p>‘ಈ ಆದೇಶದ ಪ್ರತಿ ಸ್ವೀಕರಿಸಿದ ದಿನದಿಂದ 4 ವಾರಗಳಲ್ಲಿ ನ್ಯಾಯದ ಹಿತದೃಷ್ಟಿಯಿಂದ ತನಿಖೆಗೆ ಪರಮಾದೇಶ ನೀಡಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದೆ.</p><p>‘ಭ್ರಷ್ಟಾಚಾರದಂತಹ ಗಂಭೀರ ಆರೋಪಗಳು ಕೇಳಿ ಬಂದಾಗ ಅವುಗಳನ್ನು ಆರಂಭದಲ್ಲೇ ನಂದಿಸುವುದು ಸಾಧುವಲ್ಲ. ನಿಜಾಂಶವನ್ನು ತನಿಖಾ ಪ್ರಕ್ರಿಯೆಯ ಮೂಲಕ ಬಯಲು ಮಾಡಲು ಅವಕಾಶ ನೀಡಬೇಕು. ಆಗ ಮಾತ್ರ ಜನರಿಗೆ ಸತ್ಯ ಅರ್ಥವಾಗುತ್ತದೆ. ಹಾಲಿ ಪ್ರಕರಣದ ಆರೋಪಗಳು ಸಾರ್ವಜನಿಕ ಪ್ರಾಮಾಣಿಕತೆಯ ಹೃದಯವನ್ನೇ ಜಖಂಗೊಳಿಸುವಂತಿವೆ. ರೋಹಿಣಿ ಸಿಂಧೂರಿ ಕೇವಲ ಆಡಳಿತಾತ್ಮಕ ಲೋಪ ಎಸಗಿದ್ದಾರೆ ಎಂಬುದಲ್ಲ. ಇವರ ನಿರ್ಧಾರದಿಂದ ಸಾರ್ವಜನಿಕ ಬೊಕ್ಕಸಕ್ಕೆ ಗಂಭೀರವಾದ ನಷ್ಟ ಉಂಟಾಗಿದೆ ಗಮನಾರ್ಹ’ ಎಂದು ನ್ಯಾಯಪೀಠ ವಿವರಿಸಿದೆ.</p><p>‘ಆರೋಪದ ತನಿಖೆಗೆ ಪೂರ್ವಾನುಮತಿ ನೀಡಲು ನಿರಾಕರಿಸಿರುವ ನಿರ್ಧಾರ ವಸ್ತುನಿಷ್ಠ ಮತ್ತು ತಾರ್ಕಿಕ ಅಂಶಗಳಿಂದ ಕೂಡಿಲ್ಲ. ಇಲಾಖೆಯು, ಆರೋಪಗಳ ಗಂಭೀರತೆಯನ್ನು ಗಮನವಿಟ್ಟು ಪರಿಶೀಲಿಸಿ ನ್ಯಾಯೋಚಿತ ನಿರ್ಧಾರ ಕೈಗೊಳ್ಳಲು ವಿಫಲವಾಗಿರುವುದು ಎದ್ದು ಕಾಣುತ್ತದೆ. ಅಷ್ಟೇ ಅಲ್ಲ, ಇದು ಅಧಿಕಾರಿ ವರ್ಗದ ಯಾಂತ್ರಿಕ ಕಸರತ್ತಿನಂತೆ ಕಾಟಾಚಾರದ ಪ್ರತಿಬಿಂಬವಾಗಿದೆ’ ಎಂದು ಡಿಪಿಎಆರ್ ನಿರ್ಧಾರಕ್ಕೆ ಕಿಡಿ ಕಾರಿದೆ.</p><p>‘ಇಲಾಖಾ ವಿಚಾರಣೆಗಳು ಮತ್ತು ಕ್ರಿಮಿನಲ್ ವಿಚಾರಣೆಗಳು ವಿಭಿನ್ನ ತಳಹದಿಯಲ್ಲಿ ಕಾರ್ಯನಿರ್ವಹಿಸುತ್ತವೆ. ಇವುಗಳಲ್ಲಿ ಪರಿಗಣಿಸಲಾಗುವ ಪುರಾವೆ ಮತ್ತು ಉದ್ದೇಶದ ಮಾನದಂಡಗಳನ್ನು ಪ್ರತ್ಯೇಕ ಕಾನೂನುಗಳಿಂದ ನಿಯಂತ್ರಿಸಲಾಗುತ್ತದೆ. ಇಲಾಖಾ ವಿಚಾರಣೆಯಲ್ಲಿ ಅಧಿಕಾರಿಯನ್ನು ದೋಷಮುಕ್ತಗೊಳಿಸಿದ ಮಾತ್ರಕ್ಕೆ ಕ್ರಿಮಿನಲ್ ತನಿಖೆ ನಡೆಯುವುದನ್ನು ತಡೆಯಲು ಸಾಧ್ಯವಿಲ್ಲ ಎಂಬುದು ಈಗಾಗಲೇ ನ್ಯಾಯಾಂಗ ಪರಾಮರ್ಶೆಯಲ್ಲಿ ಇತ್ಯರ್ಥವಾಗಿರುವ ಅಂಶ’ ಎಂಬುದನ್ನು ಮೆಲುಕು ಹಾಕಿದೆ. ಅರ್ಜಿದಾರರ ಪರ ಬಿಪಿನ್ ಹೆಗಡೆ ವಾದ ಮಂಡಿಸಿದ್ದರು.</p>.<div><blockquote>ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ–1988ಕ್ಕೆ 2018ರಲ್ಲಿ ತರಲಾದ ತಿದ್ದುಪಡಿಯಲ್ಲಿ ಕಲಂ 17ಎ ಅನ್ನು ಮುಗ್ಧರ ಪಾಲಿನ ಗುರಾಣಿಯಾಗಿ ಪರಿಚಯಿಸಲಾಗಿದೆ. ಇದು ಅಪರಾಧಿಗಳಿಗೆ ಆಶ್ರಯ ನೀಡುವುದಕ್ಕಾಗಿ ಅಲ್ಲ.</blockquote><span class="attribution">– ನ್ಯಾ.ಎಂ.ನಾಗಪ್ರಸನ್ನ</span></div>.<p><strong><ins>ಬೊಕ್ಕಸಕ್ಕೆ ₹7.65 ಕೋಟಿ ನಷ್ಟ ಆರೋಪ</ins></strong></p><p>‘ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಿಸಬೇಕು ಮತ್ತು ಪ್ಲಾಸ್ಟಿಕ್ ಬಳಕೆಗೆ ಇತಿಶ್ರೀ ಹಾಡಿ ಬಟ್ಟೆಯ ಕೈಚೀಲಗಳನ್ನು ಬಳಸಬೇಕು ಎಂದು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ಜಿಲ್ಲೆಯ ನಗರ, ಗ್ರಾಮಾಂತರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶಿಸಿದ್ದರು.</p><p>‘ಈ ನಿಟ್ಟಿನಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಚೀಲಕ್ಕೆ ₹13 ಇದ್ದರೆ ಅವುಗಳನ್ನು ಪ್ರತಿ ಚೀಲಕ್ಕೆ ₹52ರಷ್ಟು ದರ ನೀಡಿ ಖರೀದಿಸಲಾಗಿದೆ. ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ ₹7,65,15,816 ಕೋಟಿ ನಷ್ಟು ಉಂಟು ಮಾಡಲಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಪ್ರಯೋಜನ ನೀಡುವ ಉದ್ದೇಶದಿಂದ ಕಲ್ಯಾಣ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಈ ಕೈಚೀಲಗಳ ಖರೀದಿಗೆ ಬಳಸಲಾಗಿದೆ. ಗ್ರಾಮ ಸ್ವರಾಜ್ಯದ ಎಲ್ಲ ಕನಸುಗಳನ್ನು ಗಾಳಿಗೆ ತೂರಿ ಭ್ರಷ್ಟಾಚಾರ ಎಸಗಲಾಗಿದೆ’ ಎಂದು ಅರ್ಜಿದಾರರು ಆರೋಪಿಸಿದ್ದರು.</p><p>ಅಕ್ರಮದ ಕುರಿತಂತೆ, ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಬಗ್ಗೆ ಎನ್.ಆರ್.ರವಿಚಂದ್ರೇಗೌಡ 2021ರ ಅಕ್ಟೋಬರ್ 13ರಂದು ಮೈಸೂರು ಜಿಲ್ಲಾ ಭ್ರಷ್ಟಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದ್ದರು.</p>.<p><strong>ಭ್ರಷ್ಟಾಚಾರ ಕ್ಯಾನ್ಸರ್, ಪ್ಲೇಗ್, ಸಾಂಕ್ರಾಮಿಕ..!</strong></p><p>‘ಸಾರ್ವಜನಿಕ ಸೇವಕರು ತಮ್ಮ ಅಧಿಕೃತ ಕಾರ್ಯ ಅಥವಾ ಕರ್ತವ್ಯಗಳನ್ನು ನಿರ್ವಹಿಸುವಾಗ ಮಾಡಿದ ಶಿಫಾರಸುಗಳು ಅಥವಾ ನಿರ್ಧಾರಗಳಿಗೆ ಸಂಬಂಧಿಸಿದ ಅಪರಾಧಗಳ ವಿಚಾರಣೆ ಅಥವಾ ತನಿಖೆಗೆ ಅನುಮತಿ ನೀಡುವುದು ಸಾಂವಿಧಾನಿಕ ಮತ್ತು ಶಾಸನಬದ್ಧ ಕಡ್ಡಾಯ ನಿಲುವಾಗಿರಬೇಕು. ಯಾಕೆಂದರೆ, ಭ್ರಷ್ಟಾಚಾರ ಒಂದು ಪಿಡುಗು. ಇದನ್ನು ಕ್ಯಾನ್ಸರ್, ಪ್ಲೇಗ್ ಮತ್ತು ಸಾಂಕ್ರಾಮಿಕ ಎಂದು ವಿವಿಧ ರೀತಿಯಲ್ಲಿ ವರ್ಣಿಸಲಾಗಿದೆ’ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ನ್ಯಾಯಪೀಠ ಆದೇಶದಲ್ಲಿ ಉಲ್ಲೇಖಿಸಿದೆ.</p><p>‘ಭ್ರಷ್ಟಚಾರವನ್ನು ನಿಯಂತ್ರಿಸದೇ ಹೋದರೆ ಅದು ರಾಜಕೀಯ ಕ್ಷೇತ್ರವನ್ನೇ ಅಸ್ಥಿರಗೊಳಿಸುತ್ತದೆ. ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶಮಾಡುವ ಸಾಮರ್ಥ್ಯ ಭ್ರಷ್ಟಾಚಾರಕ್ಕಿದೆ. ಭ್ರಷ್ಟಾಚಾರವು ರಾಷ್ಟ್ರದ ಶತ್ರು. ಭ್ರಷ್ಟ ಸಾರ್ವಜನಿಕ ಸೇವಕರು ಯಾವುದೇ ಶ್ರೇಣಿ ಅಥವಾ ಅಂತಸ್ತನ್ನು ಹೊಂದಿದ್ದರೂ ಕಾಯ್ದೆಗೆ ಅನುಗುಣವಾಗಿ ಅಂಥವರನ್ನು ಪತ್ತೆಹಚ್ಚಿ ಶಿಕ್ಷಿಸುವುದಕ್ಕೆ ಹಿಂಜರಿಕೆ ಸಲ್ಲ’ ಎಂಬುದನ್ನು ನ್ಯಾಯಪೀಠ ಪುನರುಚ್ಚರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>