<p><strong>ಬೆಂಗಳೂರು</strong>: ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದು ನಾಲ್ಕು ದಿನ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಇರಿಸಿಕೊಂಡು, ನಂತರ ಎಫ್ಐಆರ್ ದಾಖಲಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿದ ಪ್ರಕರಣವೊಂದರಲ್ಲಿ ಹೈಕೋರ್ಟ್, ಬಂಧಿತ ವ್ಯಕ್ತಿಗೆ ಪರಿಹಾರ ರೂಪವಾಗಿ 2 ಲಕ್ಷ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.</p>.<p>ಈ ಕುರಿತಾದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ.ಪಾಟೀಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ಪುರಸ್ಕರಿಸಿದೆ.</p>.<p>‘ಬಂಧನ ಅಕ್ರಮ ಎಂಬುದು ಸಾಬೀತಾಗಿದ್ದು, ಬಂಧಿತ ರವಿ ಅವರಿಗೆ ಉಂಟಾಗಿರುವ ದೈಹಿಕ ಹಾಗೂ ಮಾನಸಿಕ ಹಾನಿಗಾಗಿ ₹2 ಲಕ್ಷ ಪರಿಹಾರ ಹಾಗೂ ಅರ್ಜಿದಾರರಿಗೆ ವ್ಯಾಜ್ಯದ ವೆಚ್ಚ ರೂಪದಲ್ಲಿ ₹50 ಸಾವಿರ ಪಾವತಿಸಬೇಕು’ ಎಂದು ನ್ಯಾಯಪೀಠ ಆದೇಶಿಸಿದೆ.</p>.<p>‘ಈ ಪರಿಹಾರದ ಮೊತ್ತವನ್ನು ತಪ್ಪಿತಸ್ಥ ಅಧಿಕಾರಿಗಳಿಂದ ವಸೂಲಿ ಮಾಡಬೇಕು. ಇಲಾಖಾ ತನಿಖೆ ನಡೆಸಿದ ನಂತರ ಪೊಲೀಸ್ ಠಾಣೆ ಅಥವಾ ಇಲಾಖೆ ಅಧಿಕಾರಿಗಳ ವಿರುದ್ಧ ತಪ್ಪಿನ ಹೊಣೆ ನಿಗದಿಪಡಿಸಬೇಕು’ ಎಂದು ಆದೇಶದಲ್ಲಿ ವಿವರಿಸಲಾಗಿದೆ.</p>.<p>‘ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ, ಭಾರತೀಯ ನ್ಯಾಯ ಸುರಕ್ಷಾ ಸಂಹಿತಾ–2023ರ (ಬಿಎನ್ಎಸ್ಎಸ್) ಅಧ್ಯಾಯ 5ರಲ್ಲಿ ಉಲ್ಲೇಖಿಸಿರುವ ಪ್ರಕ್ರಿಯೆ ಮತ್ತು ಜೋಗಿಂದರ್ ಕುಮಾರ್ v/s ಉತ್ತರ ಪ್ರದೇಶದ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶಗಳನ್ನು ಪಾಲಿಸಬೇಕು. ಇಲ್ಲವಾದಲ್ಲಿ ವ್ಯಕ್ತಿಯೊಬ್ಬನಿಗೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಕೊಡಮಾಡಿರುವ ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯ ರಕ್ಷಣೆಯ ಹಕ್ಕುಗಳ ಉಲ್ಲಂಘನೆಯಾಗುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p><strong>ಪ್ರಕರಣವೇನು?</strong>: ಕಲ್ಲು ಒಡೆಯುವ ಕಾರ್ಮಿಕ ರವಿ ಅವರನ್ನು ಗಂಗಮ್ಮನ ಗುಡಿ ಠಾಣೆಯ ಪೊಲೀಸರು 2025ರ ಅಕ್ಟೋಬರ್ 14ರಂದು ಬಂಧಿಸಿದ್ದರು. ಈ ಸಂಬಂಧ ರವಿ ಪತ್ನಿ ಎಂ.ವಿ.ವರಲಕ್ಷ್ಮಿ ನೀಡಿದ ದೂರು ಆಧರಿಸಿ ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಡಿವೈಎಸ್ಪಿ ಅಕ್ಟೋಬರ್17ರಂದು ಸಂಜೆ 7.45ಕ್ಕೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು.</p>.<p>ತದನಂತರ ರವಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್ಐಆರ್ ದಾಖಲಿಸಿದ್ದ ಪೊಲೀಸರು, ಅಕ್ಟೋಬರ್ 18ರಂದು ಸಂಜೆ 5ಕ್ಕೆ ನಗರದ 49ನೇ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಹಿನ್ನೆಲೆಯಲ್ಲಿ ವರಲಕ್ಷ್ಮಿ ಅವರು, ‘ಕರ್ನಾಟಕ ಮಾನವ ಹಕ್ಕುಗಳ ಆಯೋಗ’ಕ್ಕೆ ದೂರು ನೀಡಿದ್ದರು. ಅಂತೆಯೇ, ಹೈಕೋರ್ಟ್ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ, ‘ಪತಿಯ ಬಂಧನವನ್ನು ಅಕ್ರಮ ಎಂದು ಘೋಷಿಸಬೇಕು ಮತ್ತು ಬಿಡುಗಡೆಗೆ ಆದೇಶಿಸಬೇಕು’ ಎಂದು ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದು ನಾಲ್ಕು ದಿನ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಇರಿಸಿಕೊಂಡು, ನಂತರ ಎಫ್ಐಆರ್ ದಾಖಲಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿದ ಪ್ರಕರಣವೊಂದರಲ್ಲಿ ಹೈಕೋರ್ಟ್, ಬಂಧಿತ ವ್ಯಕ್ತಿಗೆ ಪರಿಹಾರ ರೂಪವಾಗಿ 2 ಲಕ್ಷ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.</p>.<p>ಈ ಕುರಿತಾದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ.ಪಾಟೀಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ಪುರಸ್ಕರಿಸಿದೆ.</p>.<p>‘ಬಂಧನ ಅಕ್ರಮ ಎಂಬುದು ಸಾಬೀತಾಗಿದ್ದು, ಬಂಧಿತ ರವಿ ಅವರಿಗೆ ಉಂಟಾಗಿರುವ ದೈಹಿಕ ಹಾಗೂ ಮಾನಸಿಕ ಹಾನಿಗಾಗಿ ₹2 ಲಕ್ಷ ಪರಿಹಾರ ಹಾಗೂ ಅರ್ಜಿದಾರರಿಗೆ ವ್ಯಾಜ್ಯದ ವೆಚ್ಚ ರೂಪದಲ್ಲಿ ₹50 ಸಾವಿರ ಪಾವತಿಸಬೇಕು’ ಎಂದು ನ್ಯಾಯಪೀಠ ಆದೇಶಿಸಿದೆ.</p>.<p>‘ಈ ಪರಿಹಾರದ ಮೊತ್ತವನ್ನು ತಪ್ಪಿತಸ್ಥ ಅಧಿಕಾರಿಗಳಿಂದ ವಸೂಲಿ ಮಾಡಬೇಕು. ಇಲಾಖಾ ತನಿಖೆ ನಡೆಸಿದ ನಂತರ ಪೊಲೀಸ್ ಠಾಣೆ ಅಥವಾ ಇಲಾಖೆ ಅಧಿಕಾರಿಗಳ ವಿರುದ್ಧ ತಪ್ಪಿನ ಹೊಣೆ ನಿಗದಿಪಡಿಸಬೇಕು’ ಎಂದು ಆದೇಶದಲ್ಲಿ ವಿವರಿಸಲಾಗಿದೆ.</p>.<p>‘ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ, ಭಾರತೀಯ ನ್ಯಾಯ ಸುರಕ್ಷಾ ಸಂಹಿತಾ–2023ರ (ಬಿಎನ್ಎಸ್ಎಸ್) ಅಧ್ಯಾಯ 5ರಲ್ಲಿ ಉಲ್ಲೇಖಿಸಿರುವ ಪ್ರಕ್ರಿಯೆ ಮತ್ತು ಜೋಗಿಂದರ್ ಕುಮಾರ್ v/s ಉತ್ತರ ಪ್ರದೇಶದ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶಗಳನ್ನು ಪಾಲಿಸಬೇಕು. ಇಲ್ಲವಾದಲ್ಲಿ ವ್ಯಕ್ತಿಯೊಬ್ಬನಿಗೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಕೊಡಮಾಡಿರುವ ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯ ರಕ್ಷಣೆಯ ಹಕ್ಕುಗಳ ಉಲ್ಲಂಘನೆಯಾಗುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p><strong>ಪ್ರಕರಣವೇನು?</strong>: ಕಲ್ಲು ಒಡೆಯುವ ಕಾರ್ಮಿಕ ರವಿ ಅವರನ್ನು ಗಂಗಮ್ಮನ ಗುಡಿ ಠಾಣೆಯ ಪೊಲೀಸರು 2025ರ ಅಕ್ಟೋಬರ್ 14ರಂದು ಬಂಧಿಸಿದ್ದರು. ಈ ಸಂಬಂಧ ರವಿ ಪತ್ನಿ ಎಂ.ವಿ.ವರಲಕ್ಷ್ಮಿ ನೀಡಿದ ದೂರು ಆಧರಿಸಿ ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಡಿವೈಎಸ್ಪಿ ಅಕ್ಟೋಬರ್17ರಂದು ಸಂಜೆ 7.45ಕ್ಕೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು.</p>.<p>ತದನಂತರ ರವಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್ಐಆರ್ ದಾಖಲಿಸಿದ್ದ ಪೊಲೀಸರು, ಅಕ್ಟೋಬರ್ 18ರಂದು ಸಂಜೆ 5ಕ್ಕೆ ನಗರದ 49ನೇ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಹಿನ್ನೆಲೆಯಲ್ಲಿ ವರಲಕ್ಷ್ಮಿ ಅವರು, ‘ಕರ್ನಾಟಕ ಮಾನವ ಹಕ್ಕುಗಳ ಆಯೋಗ’ಕ್ಕೆ ದೂರು ನೀಡಿದ್ದರು. ಅಂತೆಯೇ, ಹೈಕೋರ್ಟ್ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ, ‘ಪತಿಯ ಬಂಧನವನ್ನು ಅಕ್ರಮ ಎಂದು ಘೋಷಿಸಬೇಕು ಮತ್ತು ಬಿಡುಗಡೆಗೆ ಆದೇಶಿಸಬೇಕು’ ಎಂದು ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>