<p><strong>ಬೆಂಗಳೂರು:</strong> ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ಇಸ್ರೊ) ಗ್ರಾಫಿಕ್ ಡಿಸೈನರ್ ಕೆಲಸ ಪಡೆಯಲು ವಿನುತಾ ಎಂಬುವರಿಗೆ ₹1.03 ಕೋಟಿ ಮೊತ್ತವನ್ನು ನೀಡಿದ್ದ ವ್ಯಕ್ತಿಯೊಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಹೈಕೋರ್ಟ್ ಆದೇಶಿಸಿದೆ.</p>.<p>ಈ ಪ್ರಕರಣದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ವಂಚಿಸಿರುವ ಆರೋಪ ಎದುರಿಸುತ್ತಿರುವ ವಿಜಯನಗರದ ಎಂ.ಇ.ವಿನುತಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ರಜಾ ಕಾಲದ ಏಕಸದಸ್ಯ ನ್ಯಾಯಪೀಠದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಮಂಗಳವಾರ ವಿಚಾರಣೆ ನಡೆಸಿದರು.</p>.<p>‘ಈ ಆದೇಶದ ಪ್ರತಿಯನ್ನು ಇಸ್ರೊ ಮುಖ್ಯಸ್ಥರಿಗೆ ಕಳುಹಿಸಬೇಕು’ ಎಂದು ನ್ಯಾಯಾಂಗ ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶಿಸಿದ ನ್ಯಾಯಪೀಠ, ಈ ಕುರಿತ ಸ್ವೀಕೃತಿ ಪ್ರತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿ ವಿಚಾರಣೆಯನ್ನು ಜೂನ್ 4ಕ್ಕೆ ಮುಂದೂಡಿದೆ.</p>.<p>ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ‘ಅರ್ಜಿದಾರರಾದ ವಿನುತಾ ಹವ್ಯಾಸಿ ಆರೋಪಿಯಾಗಿದ್ದಾರೆ. ಹಣ ಪಡೆದು ಕೆಲಸ ಕೊಡಿಸುವ ಇನ್ನೂ ಎರಡು ಆರೋಪಗಳು ಇವರ ವಿರುದ್ಧ ಇವೆ. ಅಂತೆಯೇ, ದೂರುದಾರ ಸಂಜಯ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ನಿರ್ದೇಶಿಸಲಾಗುವುದು. ಈ ಎರಡೂ ಪ್ರಕರಣಗಳ ತನಿಖೆ ನಡೆಯಲಿ’ ಎಂದು ಆದೇಶಿಸಿತು.</p>.<p>ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ, ‘ವನಿತಾ ವಿರುದ್ಧ ಕೊಳ್ಳೇಗಾಲ ಮತ್ತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಮಾಹಿತಿಯನ್ನು ಮುಂದಿನ ವಿಚಾರಣೆ ವೇಳೆಗೆ ಸಲ್ಲಿಸಬೇಕು’ ಎಂದು ಅರ್ಜಿದಾರರ ಪರ ವಕೀಲರಿಗೆ ತಾಕೀತು ಮಾಡಿದೆ.</p>.<p>ಪ್ರಕರಣದಲ್ಲಿ ಅನ್ನಪೂರ್ಣೇಶ್ವರಿನಗರ ಠಾಣೆಯ ಪೊಲೀಸರು ಎಂ.ಇ.ವಿನುತಾ ಮತ್ತು ಇತರರನ್ನು ಆರೋಪಿಗಳನ್ನಾಗಿಸಿ, ಭಾರತೀಯ ನ್ಯಾಯ ಸಂಹಿತೆ–2023ರ (ಬಿಎನ್ಎಸ್) ಕಲಂ 115(2), 3(2), 318(4), 336(2), 336(3), 340(2), 351(2), 352ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ಇಸ್ರೊ) ಗ್ರಾಫಿಕ್ ಡಿಸೈನರ್ ಕೆಲಸ ಪಡೆಯಲು ವಿನುತಾ ಎಂಬುವರಿಗೆ ₹1.03 ಕೋಟಿ ಮೊತ್ತವನ್ನು ನೀಡಿದ್ದ ವ್ಯಕ್ತಿಯೊಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಹೈಕೋರ್ಟ್ ಆದೇಶಿಸಿದೆ.</p>.<p>ಈ ಪ್ರಕರಣದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ವಂಚಿಸಿರುವ ಆರೋಪ ಎದುರಿಸುತ್ತಿರುವ ವಿಜಯನಗರದ ಎಂ.ಇ.ವಿನುತಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ರಜಾ ಕಾಲದ ಏಕಸದಸ್ಯ ನ್ಯಾಯಪೀಠದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಮಂಗಳವಾರ ವಿಚಾರಣೆ ನಡೆಸಿದರು.</p>.<p>‘ಈ ಆದೇಶದ ಪ್ರತಿಯನ್ನು ಇಸ್ರೊ ಮುಖ್ಯಸ್ಥರಿಗೆ ಕಳುಹಿಸಬೇಕು’ ಎಂದು ನ್ಯಾಯಾಂಗ ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶಿಸಿದ ನ್ಯಾಯಪೀಠ, ಈ ಕುರಿತ ಸ್ವೀಕೃತಿ ಪ್ರತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿ ವಿಚಾರಣೆಯನ್ನು ಜೂನ್ 4ಕ್ಕೆ ಮುಂದೂಡಿದೆ.</p>.<p>ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ‘ಅರ್ಜಿದಾರರಾದ ವಿನುತಾ ಹವ್ಯಾಸಿ ಆರೋಪಿಯಾಗಿದ್ದಾರೆ. ಹಣ ಪಡೆದು ಕೆಲಸ ಕೊಡಿಸುವ ಇನ್ನೂ ಎರಡು ಆರೋಪಗಳು ಇವರ ವಿರುದ್ಧ ಇವೆ. ಅಂತೆಯೇ, ದೂರುದಾರ ಸಂಜಯ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ನಿರ್ದೇಶಿಸಲಾಗುವುದು. ಈ ಎರಡೂ ಪ್ರಕರಣಗಳ ತನಿಖೆ ನಡೆಯಲಿ’ ಎಂದು ಆದೇಶಿಸಿತು.</p>.<p>ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ, ‘ವನಿತಾ ವಿರುದ್ಧ ಕೊಳ್ಳೇಗಾಲ ಮತ್ತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಮಾಹಿತಿಯನ್ನು ಮುಂದಿನ ವಿಚಾರಣೆ ವೇಳೆಗೆ ಸಲ್ಲಿಸಬೇಕು’ ಎಂದು ಅರ್ಜಿದಾರರ ಪರ ವಕೀಲರಿಗೆ ತಾಕೀತು ಮಾಡಿದೆ.</p>.<p>ಪ್ರಕರಣದಲ್ಲಿ ಅನ್ನಪೂರ್ಣೇಶ್ವರಿನಗರ ಠಾಣೆಯ ಪೊಲೀಸರು ಎಂ.ಇ.ವಿನುತಾ ಮತ್ತು ಇತರರನ್ನು ಆರೋಪಿಗಳನ್ನಾಗಿಸಿ, ಭಾರತೀಯ ನ್ಯಾಯ ಸಂಹಿತೆ–2023ರ (ಬಿಎನ್ಎಸ್) ಕಲಂ 115(2), 3(2), 318(4), 336(2), 336(3), 340(2), 351(2), 352ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>