<p><strong>ಬೆಂಗಳೂರು</strong>: ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ಹೈಕೋರ್ಟ್ನ ಹಿರಿಯ ವಕೀಲ ವಿಜಯಕುಮಾರ್ ಎಂ.ಶೀಲವಂತ ಅವರ ಶುಲ್ಕದ ಮೊತ್ತ ₹44.59 ಲಕ್ಷವನ್ನು ನಾಲ್ಕು ವಾರಗಳ ಒಳಗಾಗಿ ಪಾವತಿಸುವಂತೆ ಆದೇಶಿಸಿರುವ ಹೈಕೋರ್ಟ್, ಶುಲ್ಕ ಪಾವತಿಯಲ್ಲಿ ವಿಳಂಬ ಸಲ್ಲ ಎಂದೂ ಹೇಳಿದೆ.</p>.<p>‘ರಾಜ್ಯ ಸರ್ಕಾರ ನನಗೆ ಪಾವತಿಸಬೇಕಾದ ಶುಲ್ಕವನ್ನು ಇನ್ನೂ ಪಾವತಿಸಿಲ್ಲ’ ಎಂದು ಆಕ್ಷೇಪಿಸಿ ವಿಜಯಕುಮಾರ್ ಎಂ.ಶೀಲವಂತ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಪುರಸ್ಕರಿಸಿದೆ.</p>.<p>ಶುಲ್ಕದ ಮೊತ್ತ ₹44.59 ಲಕ್ಷವನ್ನು ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿರುವ ನ್ಯಾಯಪೀಠ, ಈ ಕುರಿತ ಅನುಪಾಲನಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದೂ ತಾಕೀತು ಮಾಡಿದೆ.</p>.<p>‘ಅಡ್ವೊಕೇಟ್ ಜನರಲ್, ಹೆಚ್ಚುವರಿ ಅಡ್ವೊಕೇಟ್ ಜನರಲ್ಗಳು, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ಗಳು, ಸರ್ಕಾರಿ ವಕೀಲರು ಅಥವಾ ಹೈಕೋರ್ಟ್ನ ಸರ್ಕಾರಿ ಪ್ಲೀಡರ್ಗಳು... ಇತ್ಯಾದಿ ಸರ್ಕಾರದ ಪರ ವಾದ ಮಂಡಿಸುವ ವಕೀಲರ ಶುಲ್ಕ ಪಾವತಿಯಲ್ಲಿ ಸರ್ಕಾರ ವಿಳಂಬ ಧೋರಣೆ ಅನುಸರಿಸಬಾರದು’ ಎಂದೂ ಆದೇಶಿಸಿದೆ.</p>.<p><strong>ಮಾರ್ಗದರ್ಶಿ ಸೂತ್ರ: ‘</strong>ಸರ್ಕಾರದ ಪರ ವಾದ ಮಂಡಿಸುವ ವಕೀಲರಿಗೆ ಸಕಾಲದಲ್ಲಿ ಶುಲ್ಕ ಪಾವತಿ ಮಾಡುವ ನಿಟ್ಟಿನಲ್ಲಿ ಮತ್ತು ಶುಲ್ಕ ಪಾವತಿ ವ್ಯವಸ್ಥೆ ಪಾರದರ್ಶಕವಾಗಿರುವಂತೆ ಅಗತ್ಯ ಡಿಜಿಟಲ್ ವ್ಯವಸ್ಥೆಯೊಂದನ್ನು ರೂಪಿಸಿ’ ಎಂದು ರಾಜ್ಯ ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸಿರುವ ನ್ಯಾಯಪೀಠ ಈ ದಿಸೆಯಲ್ಲಿ ಮಾರ್ಗದರ್ಶಿ ಸೂತ್ರಾಂಶಗಳನ್ನೂ ವಿವರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ಹೈಕೋರ್ಟ್ನ ಹಿರಿಯ ವಕೀಲ ವಿಜಯಕುಮಾರ್ ಎಂ.ಶೀಲವಂತ ಅವರ ಶುಲ್ಕದ ಮೊತ್ತ ₹44.59 ಲಕ್ಷವನ್ನು ನಾಲ್ಕು ವಾರಗಳ ಒಳಗಾಗಿ ಪಾವತಿಸುವಂತೆ ಆದೇಶಿಸಿರುವ ಹೈಕೋರ್ಟ್, ಶುಲ್ಕ ಪಾವತಿಯಲ್ಲಿ ವಿಳಂಬ ಸಲ್ಲ ಎಂದೂ ಹೇಳಿದೆ.</p>.<p>‘ರಾಜ್ಯ ಸರ್ಕಾರ ನನಗೆ ಪಾವತಿಸಬೇಕಾದ ಶುಲ್ಕವನ್ನು ಇನ್ನೂ ಪಾವತಿಸಿಲ್ಲ’ ಎಂದು ಆಕ್ಷೇಪಿಸಿ ವಿಜಯಕುಮಾರ್ ಎಂ.ಶೀಲವಂತ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಪುರಸ್ಕರಿಸಿದೆ.</p>.<p>ಶುಲ್ಕದ ಮೊತ್ತ ₹44.59 ಲಕ್ಷವನ್ನು ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿರುವ ನ್ಯಾಯಪೀಠ, ಈ ಕುರಿತ ಅನುಪಾಲನಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದೂ ತಾಕೀತು ಮಾಡಿದೆ.</p>.<p>‘ಅಡ್ವೊಕೇಟ್ ಜನರಲ್, ಹೆಚ್ಚುವರಿ ಅಡ್ವೊಕೇಟ್ ಜನರಲ್ಗಳು, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ಗಳು, ಸರ್ಕಾರಿ ವಕೀಲರು ಅಥವಾ ಹೈಕೋರ್ಟ್ನ ಸರ್ಕಾರಿ ಪ್ಲೀಡರ್ಗಳು... ಇತ್ಯಾದಿ ಸರ್ಕಾರದ ಪರ ವಾದ ಮಂಡಿಸುವ ವಕೀಲರ ಶುಲ್ಕ ಪಾವತಿಯಲ್ಲಿ ಸರ್ಕಾರ ವಿಳಂಬ ಧೋರಣೆ ಅನುಸರಿಸಬಾರದು’ ಎಂದೂ ಆದೇಶಿಸಿದೆ.</p>.<p><strong>ಮಾರ್ಗದರ್ಶಿ ಸೂತ್ರ: ‘</strong>ಸರ್ಕಾರದ ಪರ ವಾದ ಮಂಡಿಸುವ ವಕೀಲರಿಗೆ ಸಕಾಲದಲ್ಲಿ ಶುಲ್ಕ ಪಾವತಿ ಮಾಡುವ ನಿಟ್ಟಿನಲ್ಲಿ ಮತ್ತು ಶುಲ್ಕ ಪಾವತಿ ವ್ಯವಸ್ಥೆ ಪಾರದರ್ಶಕವಾಗಿರುವಂತೆ ಅಗತ್ಯ ಡಿಜಿಟಲ್ ವ್ಯವಸ್ಥೆಯೊಂದನ್ನು ರೂಪಿಸಿ’ ಎಂದು ರಾಜ್ಯ ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸಿರುವ ನ್ಯಾಯಪೀಠ ಈ ದಿಸೆಯಲ್ಲಿ ಮಾರ್ಗದರ್ಶಿ ಸೂತ್ರಾಂಶಗಳನ್ನೂ ವಿವರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>