ಕೋಲಾರದ ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶೆ ಜೆ.ಪ್ರೀತ್, ‘ಅಪರಾಧ ದಂಡ ಸಂಹಿತೆ (ಸಿಆರ್ಪಿಸಿ) ಕಲಂ 156ರ (3) ಅನ್ವಯ ಈ ಪ್ರಕರಣ ತನಿಖೆಗೆ ಲಾಯಕ್ಕಾಗಿದೆ. ಆದ್ದರಿಂದ, ತನಿಖೆ ಕೈಗೊಂಡು ಡಿಸೆಂಬರ್ 7ಕ್ಕೆ ವರದಿ ಸಲ್ಲಿಸಿ’ ಎಂದು ಮಾಲೂರು ಪೊಲೀಸ್ ಠಾಣಾಧಿಕಾರಿಗೆ ನಿರ್ದೇಶಿಸಿದ್ದಾರೆ.