<p><strong>ಬೆಂಗಳೂರು:</strong> ‘ಕರ್ತವ್ಯ ಲೋಪದ ಆರೋಪದಡಿ ಚಿಕ್ಕಮಗಳೂರು ಜಿಲ್ಲೆ ಬಾಲ ಕಾರ್ಮಿಕ (ನಿರ್ಮೂಲನಾ) ಯೋಜನಾ ಸೊಸೈಟಿಯ ನಿರ್ದೇಶಕ ಹುದ್ದೆಯಿಂದ ವಜಾಗೊಂಡಿರುವ ಬಿ.ಎಂ.ಪ್ರವೀಣ್ ಕುಮಾರ್ ಅವರನ್ನು ಅದೇ ಹುದ್ದೆಗೆ ಮರು ನಿಯೋಜಿಸಬೇಕು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.</p>.<p>ವಜಾ ಆದೇಶ ಪ್ರಶ್ನಿಸಿ ಬಿ.ಎಂ.ಪ್ರವೀಣ್ ಕುಮಾರ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಅರ್ಜಿದಾರರನ್ನು ಯೋಜನಾ ನಿರ್ದೇಶಕ ಹುದ್ದೆಗೆ ಮರು ನಿಯೋಜಿಸಬೇಕು’ ಎಂದು ಆದೇಶಿಸಿದೆ.</p>.<p>ಅರ್ಜಿದಾರರ ಪರ ಹೈಕೋರ್ಟ್ ವಕೀಲ ಕೆ.ಗೋವಿಂದರಾಜ್ ಮಂಡಿಸಿದ್ದ ವಾದವನ್ನು ಪುರಸ್ಕರಿಸಿರುವ ನ್ಯಾಯಪೀಠ, ‘ಗಂಭೀರ ಆರೋಪಗಳಿದ್ದಾಗ ಅರ್ಜಿದಾರರಿಗೆ ಸೂಕ್ತ ಅವಕಾಶ ನೀಡಿ; ಅವರ ವಿವರಣೆ ಆಲಿಸದೆ ಸೇವೆಯಿಂದ ವಜಾಗೊಳಿಸುವುದು ಸಂವಿಧಾನದ 14 ನೇ ವಿಧಿಯಡಿ ಖಾತರಿಪಡಿಸಲಾದ ಸಮಾನತೆಯ ಹಕ್ಕಿನ ಉಲ್ಲಂಘನೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಕಾರ್ಮಿಕ ಅಧಿಕಾರಿಯ ಆದೇಶವನ್ನು ರದ್ದುಪಡಿಸಿದೆ.</p>.<p>ಅರ್ಜಿದಾರರು 2011ರ ಅಕ್ಟೋಬರ್ 18ರಂದು ಗುತ್ತಿಗೆ ಆಧಾರದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಾಲ ಕಾರ್ಮಿಕ (ನಿರ್ಮೂಲನಾ) ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರ ಹುದ್ದೆಗೆ ನೇಮಕಗೊಂಡಿದ್ದರು. ಕರ್ತವ್ಯ ಲೋಪ ಆರೋಪದಡಿ ಅವರನ್ನು 2025ರ ಡಿಸೆಂಬರ್ 15ರಂದು ವಜಾಗೊಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕರ್ತವ್ಯ ಲೋಪದ ಆರೋಪದಡಿ ಚಿಕ್ಕಮಗಳೂರು ಜಿಲ್ಲೆ ಬಾಲ ಕಾರ್ಮಿಕ (ನಿರ್ಮೂಲನಾ) ಯೋಜನಾ ಸೊಸೈಟಿಯ ನಿರ್ದೇಶಕ ಹುದ್ದೆಯಿಂದ ವಜಾಗೊಂಡಿರುವ ಬಿ.ಎಂ.ಪ್ರವೀಣ್ ಕುಮಾರ್ ಅವರನ್ನು ಅದೇ ಹುದ್ದೆಗೆ ಮರು ನಿಯೋಜಿಸಬೇಕು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.</p>.<p>ವಜಾ ಆದೇಶ ಪ್ರಶ್ನಿಸಿ ಬಿ.ಎಂ.ಪ್ರವೀಣ್ ಕುಮಾರ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಅರ್ಜಿದಾರರನ್ನು ಯೋಜನಾ ನಿರ್ದೇಶಕ ಹುದ್ದೆಗೆ ಮರು ನಿಯೋಜಿಸಬೇಕು’ ಎಂದು ಆದೇಶಿಸಿದೆ.</p>.<p>ಅರ್ಜಿದಾರರ ಪರ ಹೈಕೋರ್ಟ್ ವಕೀಲ ಕೆ.ಗೋವಿಂದರಾಜ್ ಮಂಡಿಸಿದ್ದ ವಾದವನ್ನು ಪುರಸ್ಕರಿಸಿರುವ ನ್ಯಾಯಪೀಠ, ‘ಗಂಭೀರ ಆರೋಪಗಳಿದ್ದಾಗ ಅರ್ಜಿದಾರರಿಗೆ ಸೂಕ್ತ ಅವಕಾಶ ನೀಡಿ; ಅವರ ವಿವರಣೆ ಆಲಿಸದೆ ಸೇವೆಯಿಂದ ವಜಾಗೊಳಿಸುವುದು ಸಂವಿಧಾನದ 14 ನೇ ವಿಧಿಯಡಿ ಖಾತರಿಪಡಿಸಲಾದ ಸಮಾನತೆಯ ಹಕ್ಕಿನ ಉಲ್ಲಂಘನೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಕಾರ್ಮಿಕ ಅಧಿಕಾರಿಯ ಆದೇಶವನ್ನು ರದ್ದುಪಡಿಸಿದೆ.</p>.<p>ಅರ್ಜಿದಾರರು 2011ರ ಅಕ್ಟೋಬರ್ 18ರಂದು ಗುತ್ತಿಗೆ ಆಧಾರದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಾಲ ಕಾರ್ಮಿಕ (ನಿರ್ಮೂಲನಾ) ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರ ಹುದ್ದೆಗೆ ನೇಮಕಗೊಂಡಿದ್ದರು. ಕರ್ತವ್ಯ ಲೋಪ ಆರೋಪದಡಿ ಅವರನ್ನು 2025ರ ಡಿಸೆಂಬರ್ 15ರಂದು ವಜಾಗೊಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>