<p><strong>ಬೆಂಗಳೂರು: </strong>ನಗರದ ಡಿಆರ್ಡಿಒ ಟೌನ್ ಶಿಪ್ ವ್ಯಾಪ್ತಿಯಲ್ಲಿನ ನಾಯಿಗಳನ್ನು ಸ್ಥಳಾಂತರಿಸಿದ ಆರೋಪದಡಿ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ನೌಕರರ ವಿರುದ್ಧ ದಾಖಲಿಸಿದ್ದ ಎಫ್ಐಆರ್ಗೆ ನೀಡಲಾಗಿರುವ ಮಧ್ಯಂತರ ತಡೆ ಆದೇಶ ತೆರವುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.</p><p>ಈ ಸಂಬಂಧ ಡಿಆರ್ ಡಿಒ ಟೌನ್ಶಿಪ್ ಎಸ್ಟೇಟ್ ವ್ಯವಸ್ಥಾಪಕ ರಾಕೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, 'ಹೆಚ್ಚಿನ ತನಿಖೆಯ ಅಗತ್ಯವಿದ್ದಲ್ಲಿ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಸಂರಕ್ಷಿಸಿ' ಎಂದು ಡಿಆರ್ಡಿಒಗೆ ನಿರ್ದೇಶಿಸಿದೆ.</p><p>'ಮುಂದಿನ ವಿಚಾರಣೆವರೆಗೆ ಮಧ್ಯಂತರ ಆದೇಶ ಮುಂದುವರಿಯಲಿದೆ' ಎಂದು ಆದೇಶಿಸಿರುವ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.</p><p><strong>ಪ್ರಕರಣ:</strong> ಆರೋಪಿ ನೌಕರರ ವಿರುದ್ಧ, ಬೆಂಗಳೂರು ಪೂರ್ವ ವಿಭಾಗದ ಪಶು ಸಂಗೋಪನೆ ಸಹಾಯಕ ನಿರ್ದೇಶಕ ಡಾ.ವಿವೇಕ್, ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ದೂರು ಸಲ್ಲಿಸಿದ್ದರು. </p><p>ಇದರ ಆಧಾರದ ಅಡಿಯಲ್ಲಿ ಡಿಆರ್ಡಿಒ ಎಸ್ಟೇಟ್ ವ್ಯವಸ್ಥಾಪಕ ಮತ್ತು ಕ್ಲೀನಿಂಗ್ ಸೂಪರ್ ವೈಸರ್ ವಿರುದ್ಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960ರ ಕಲಂ 11 ಮತ್ತು ಭಾರತೀಯ ನ್ಯಾಯ ಸಂಹಿತೆ-2023ರ (ಬಿಎನ್ಎಸ್) ಕಲಂ 240, 325, 270, 61(1)ರ ಅಪರಾಧಗಳಿಗಾಗಿ 2026ರ ಮಾರ್ಚ್ 9ರಂದು ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಡಿಆರ್ಡಿಒ ಟೌನ್ ಶಿಪ್ ವ್ಯಾಪ್ತಿಯಲ್ಲಿನ ನಾಯಿಗಳನ್ನು ಸ್ಥಳಾಂತರಿಸಿದ ಆರೋಪದಡಿ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ನೌಕರರ ವಿರುದ್ಧ ದಾಖಲಿಸಿದ್ದ ಎಫ್ಐಆರ್ಗೆ ನೀಡಲಾಗಿರುವ ಮಧ್ಯಂತರ ತಡೆ ಆದೇಶ ತೆರವುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.</p><p>ಈ ಸಂಬಂಧ ಡಿಆರ್ ಡಿಒ ಟೌನ್ಶಿಪ್ ಎಸ್ಟೇಟ್ ವ್ಯವಸ್ಥಾಪಕ ರಾಕೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, 'ಹೆಚ್ಚಿನ ತನಿಖೆಯ ಅಗತ್ಯವಿದ್ದಲ್ಲಿ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಸಂರಕ್ಷಿಸಿ' ಎಂದು ಡಿಆರ್ಡಿಒಗೆ ನಿರ್ದೇಶಿಸಿದೆ.</p><p>'ಮುಂದಿನ ವಿಚಾರಣೆವರೆಗೆ ಮಧ್ಯಂತರ ಆದೇಶ ಮುಂದುವರಿಯಲಿದೆ' ಎಂದು ಆದೇಶಿಸಿರುವ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.</p><p><strong>ಪ್ರಕರಣ:</strong> ಆರೋಪಿ ನೌಕರರ ವಿರುದ್ಧ, ಬೆಂಗಳೂರು ಪೂರ್ವ ವಿಭಾಗದ ಪಶು ಸಂಗೋಪನೆ ಸಹಾಯಕ ನಿರ್ದೇಶಕ ಡಾ.ವಿವೇಕ್, ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ದೂರು ಸಲ್ಲಿಸಿದ್ದರು. </p><p>ಇದರ ಆಧಾರದ ಅಡಿಯಲ್ಲಿ ಡಿಆರ್ಡಿಒ ಎಸ್ಟೇಟ್ ವ್ಯವಸ್ಥಾಪಕ ಮತ್ತು ಕ್ಲೀನಿಂಗ್ ಸೂಪರ್ ವೈಸರ್ ವಿರುದ್ಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960ರ ಕಲಂ 11 ಮತ್ತು ಭಾರತೀಯ ನ್ಯಾಯ ಸಂಹಿತೆ-2023ರ (ಬಿಎನ್ಎಸ್) ಕಲಂ 240, 325, 270, 61(1)ರ ಅಪರಾಧಗಳಿಗಾಗಿ 2026ರ ಮಾರ್ಚ್ 9ರಂದು ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>