<p><strong>ಬೆಂಗಳೂರು:</strong> ‘ಕನ್ನಡ ಸಾಹಿತ್ಯ ಪರಿಷತ್ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿ ದಂತೆ ಮಾಜಿ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ತಳೆಯುವ ಯಾವುದೇ ನಿಲುವನ್ನು ಮುಂದಿನ ವಿಚಾರಣೆವರೆಗೆ ಜಾರಿಗೊಳಿಸಬಾರದು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ತಾತ್ಪೂರ್ತಿಕ ನಿರ್ದೇಶನ ನೀಡಿದೆ.</p>. <p>ಪರಿಷತ್ನಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಆಡಳಿತಾಧಿಕಾರಿ ಜಾರಿ ಮಾಡಿರುವ ಷೋಕಾಸ್<br>ನೋಟಿಸ್ ಪ್ರಶ್ನಿಸಿ ಮಹೇಶ್ ಜೋಶಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>. <p>ವಾದ– ಪ್ರತಿವಾದ ಆಲಿಸಿದ ನ್ಯಾಯಪೀಠ, ‘ಮೇಲ್ನೋಟಕ್ಕೆ, ಆಡಳಿತಾಧಿಕಾರಿ ಷೋಕಾಸ್ ನೋಟಿಸ್ ನೀಡುವ ಅಧಿಕಾರ ವ್ಯಾಪ್ತಿ ಹೊಂದಿರು ವುದನ್ನು ಸಮರ್ಥನೆ ಮಾಡಿಕೊಂಡಿ ದ್ದಾರೆಯೇ ಎಂಬ ಪ್ರಶ್ನೆ ಇದೆ. ಹಾಗಾಗಿ, ಪಕ್ಷಗಾರರ ವಾದ ಆಲಿಸಿದ ನಂತರ ಇದನ್ನು ನಿರ್ಧರಿಸಲಾಗುವುದು’ ಎಂದು<br>ತಿಳಿಸಿತು.</p>. <p>‘ಮಹೇಶ್ ಜೋಶಿ ಷೋಕಾಸ್ ನೋಟಿಸ್ಗೆ ಉತ್ತರಿಸಬೇಕಿದೆ. ಈಗಾಗಲೇ ಪ್ರತಿಕ್ರಿಯೆ ಸಲ್ಲಿಸುವ ಕಾಲಾವಧಿ ಮುಗಿದಿದ್ದರೂ ಜೋಶಿ ಅವರಿಗೆ ಸಕಾರಣ ಸಮಯಾವಕಾಶ ನೀಡಬೇಕಿದೆ. ಆದ್ದರಿಂದ, ಮಾರ್ಚ್ 2ರ ಒಳಗೆ ಜೋಶಿ ನೋಟಿಸ್ಗೆ ಉತ್ತರಿಸಬೇಕು’ ಎಂದು ನ್ಯಾಯಪೀಠ ತಾಕೀತು ಮಾಡಿದೆ.</p>. <p>ಅಂತೆಯೇ, ‘ಜೋಶಿ ವಿರುದ್ಧ ಕೈಗೊಳ್ಳುವ ಕ್ರಮವನ್ನು ಮುಂದಿನ ವಿಚಾರಣೆವರೆಗೆ ಜಾರಿಗೊಳಿಸಕೂಡದು’ ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ.</p>. <p>ಮಹೇಶ್ ಜೋಶಿ ಪರ ಪದಾಂಕಿತ ಹಿರಿಯ ವಕೀಲ ಜಯಕುಮಾರ್ ಎಸ್.ಪಾಟೀಲ್ ಮತ್ತು ಸರ್ಕಾರದ ಪರ ಪದಾಂಕಿತ ಹಿರಿಯ ವಕೀಲ ರವಿವರ್ಮ ಕುಮಾರ್ ವಾದ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕನ್ನಡ ಸಾಹಿತ್ಯ ಪರಿಷತ್ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿ ದಂತೆ ಮಾಜಿ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ತಳೆಯುವ ಯಾವುದೇ ನಿಲುವನ್ನು ಮುಂದಿನ ವಿಚಾರಣೆವರೆಗೆ ಜಾರಿಗೊಳಿಸಬಾರದು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ತಾತ್ಪೂರ್ತಿಕ ನಿರ್ದೇಶನ ನೀಡಿದೆ.</p>. <p>ಪರಿಷತ್ನಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಆಡಳಿತಾಧಿಕಾರಿ ಜಾರಿ ಮಾಡಿರುವ ಷೋಕಾಸ್<br>ನೋಟಿಸ್ ಪ್ರಶ್ನಿಸಿ ಮಹೇಶ್ ಜೋಶಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>. <p>ವಾದ– ಪ್ರತಿವಾದ ಆಲಿಸಿದ ನ್ಯಾಯಪೀಠ, ‘ಮೇಲ್ನೋಟಕ್ಕೆ, ಆಡಳಿತಾಧಿಕಾರಿ ಷೋಕಾಸ್ ನೋಟಿಸ್ ನೀಡುವ ಅಧಿಕಾರ ವ್ಯಾಪ್ತಿ ಹೊಂದಿರು ವುದನ್ನು ಸಮರ್ಥನೆ ಮಾಡಿಕೊಂಡಿ ದ್ದಾರೆಯೇ ಎಂಬ ಪ್ರಶ್ನೆ ಇದೆ. ಹಾಗಾಗಿ, ಪಕ್ಷಗಾರರ ವಾದ ಆಲಿಸಿದ ನಂತರ ಇದನ್ನು ನಿರ್ಧರಿಸಲಾಗುವುದು’ ಎಂದು<br>ತಿಳಿಸಿತು.</p>. <p>‘ಮಹೇಶ್ ಜೋಶಿ ಷೋಕಾಸ್ ನೋಟಿಸ್ಗೆ ಉತ್ತರಿಸಬೇಕಿದೆ. ಈಗಾಗಲೇ ಪ್ರತಿಕ್ರಿಯೆ ಸಲ್ಲಿಸುವ ಕಾಲಾವಧಿ ಮುಗಿದಿದ್ದರೂ ಜೋಶಿ ಅವರಿಗೆ ಸಕಾರಣ ಸಮಯಾವಕಾಶ ನೀಡಬೇಕಿದೆ. ಆದ್ದರಿಂದ, ಮಾರ್ಚ್ 2ರ ಒಳಗೆ ಜೋಶಿ ನೋಟಿಸ್ಗೆ ಉತ್ತರಿಸಬೇಕು’ ಎಂದು ನ್ಯಾಯಪೀಠ ತಾಕೀತು ಮಾಡಿದೆ.</p>. <p>ಅಂತೆಯೇ, ‘ಜೋಶಿ ವಿರುದ್ಧ ಕೈಗೊಳ್ಳುವ ಕ್ರಮವನ್ನು ಮುಂದಿನ ವಿಚಾರಣೆವರೆಗೆ ಜಾರಿಗೊಳಿಸಕೂಡದು’ ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ.</p>. <p>ಮಹೇಶ್ ಜೋಶಿ ಪರ ಪದಾಂಕಿತ ಹಿರಿಯ ವಕೀಲ ಜಯಕುಮಾರ್ ಎಸ್.ಪಾಟೀಲ್ ಮತ್ತು ಸರ್ಕಾರದ ಪರ ಪದಾಂಕಿತ ಹಿರಿಯ ವಕೀಲ ರವಿವರ್ಮ ಕುಮಾರ್ ವಾದ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>