<p><strong>ಬೆಂಗಳೂರು</strong>: ‘ಟೆಂಡರ್ ಪ್ರಕ್ರಿಯೆಯ ಪ್ರತಿಯೊಂದು ಹಂತಗಳಲ್ಲೂ ಮಧ್ಯ ಪ್ರವೇಶಿಸಲು ಆಗದು’ ಎಂದು ಹೈಕೋರ್ಟ್ ಖಡಕ್ ಅಬಿಪ್ರಾಯ ವ್ಯಕ್ತಪಡಿಸಿದೆ.</p>.<p>ರಾಸಾಯನಿಕ ಮತ್ತು ಸುಗಂಧ ದ್ರವ್ಯ ಪೂರೈಕೆಗೆ ಸಂಬಂಧಿಸಿದಂತೆ ‘ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ’ (ಕೆಎಸ್ಡಿಎಲ್) ಕರೆದಿದ್ದ ಟೆಂಡರ್ ಪ್ರಶ್ನಿಸಿ ಬೆಂಗಳೂರಿನ ಎಸ್ಪಿ ಎಂಟರ್ ಪ್ರೈಸಸ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.</p>.<p>‘ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಅರ್ಜಿದಾರರನ್ನು ತಾಂತ್ರಿಕ ಬಿಡ್ ಹಂತದಲ್ಲೇ ತಿರಸ್ಕರಿಸಲಾಗಿದೆ. ತದನಂತರ ಯಶಸ್ವಿ ಬಿಡ್ಡರ್ಗೆ ಕಾರ್ಯಾದೇಶ ನೀಡಲಾಗಿದೆ. ಹಾಗಾಗಿ, ಈ ಹಂತದಲ್ಲಿ ಟೆಂಡರ್ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶ ಮಾಡಲು ಆಗದು. ಬೇಕಿದ್ದರೆ ಮೇಲ್ಮನವಿ ಪ್ರಾಧಿಕಾರದ ಮುಂದೆ ನಿಮ್ಮ ಅಹವಾಲು ಸಲ್ಲಿಸಿ’ ಎಂದು ಅರ್ಜಿದಾರರಿಗೆ ಸೂಚಿಸಿದೆ.</p>.<p>‘ಕೋರ್ಟ್, ಟೆಂಡರ್ ಪ್ರಕ್ರಿಯೆಯ ಮೇಲೆ ನಿಗಾ ವಹಿಸಬೇಕು ಎಂಬುದು ಅರ್ಜಿದಾರರ ಕೋರಿಕೆ. ಆದರೆ, ನ್ಯಾಯಾಲಯ ಟೆಂಡರ್ ಪರಿಶೀಲನಾ ಸಮಿತಿಯ ಸ್ಥಾನದಲ್ಲಿ ಕುಳಿತು ಪ್ರತಿಯೊಂದು ಹಂತದಲ್ಲೂ ಮೇಲ್ವಿಚಾರಣೆ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿರುವ ನ್ಯಾಯಪೀಠ, ಅರ್ಜಿದಾರರ ಆಕ್ಷೇಪಣೆಗಳನ್ನು ಪುರಸ್ಕರಿಸಲು ನಿರಾಕರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಟೆಂಡರ್ ಪ್ರಕ್ರಿಯೆಯ ಪ್ರತಿಯೊಂದು ಹಂತಗಳಲ್ಲೂ ಮಧ್ಯ ಪ್ರವೇಶಿಸಲು ಆಗದು’ ಎಂದು ಹೈಕೋರ್ಟ್ ಖಡಕ್ ಅಬಿಪ್ರಾಯ ವ್ಯಕ್ತಪಡಿಸಿದೆ.</p>.<p>ರಾಸಾಯನಿಕ ಮತ್ತು ಸುಗಂಧ ದ್ರವ್ಯ ಪೂರೈಕೆಗೆ ಸಂಬಂಧಿಸಿದಂತೆ ‘ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ’ (ಕೆಎಸ್ಡಿಎಲ್) ಕರೆದಿದ್ದ ಟೆಂಡರ್ ಪ್ರಶ್ನಿಸಿ ಬೆಂಗಳೂರಿನ ಎಸ್ಪಿ ಎಂಟರ್ ಪ್ರೈಸಸ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.</p>.<p>‘ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಅರ್ಜಿದಾರರನ್ನು ತಾಂತ್ರಿಕ ಬಿಡ್ ಹಂತದಲ್ಲೇ ತಿರಸ್ಕರಿಸಲಾಗಿದೆ. ತದನಂತರ ಯಶಸ್ವಿ ಬಿಡ್ಡರ್ಗೆ ಕಾರ್ಯಾದೇಶ ನೀಡಲಾಗಿದೆ. ಹಾಗಾಗಿ, ಈ ಹಂತದಲ್ಲಿ ಟೆಂಡರ್ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶ ಮಾಡಲು ಆಗದು. ಬೇಕಿದ್ದರೆ ಮೇಲ್ಮನವಿ ಪ್ರಾಧಿಕಾರದ ಮುಂದೆ ನಿಮ್ಮ ಅಹವಾಲು ಸಲ್ಲಿಸಿ’ ಎಂದು ಅರ್ಜಿದಾರರಿಗೆ ಸೂಚಿಸಿದೆ.</p>.<p>‘ಕೋರ್ಟ್, ಟೆಂಡರ್ ಪ್ರಕ್ರಿಯೆಯ ಮೇಲೆ ನಿಗಾ ವಹಿಸಬೇಕು ಎಂಬುದು ಅರ್ಜಿದಾರರ ಕೋರಿಕೆ. ಆದರೆ, ನ್ಯಾಯಾಲಯ ಟೆಂಡರ್ ಪರಿಶೀಲನಾ ಸಮಿತಿಯ ಸ್ಥಾನದಲ್ಲಿ ಕುಳಿತು ಪ್ರತಿಯೊಂದು ಹಂತದಲ್ಲೂ ಮೇಲ್ವಿಚಾರಣೆ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿರುವ ನ್ಯಾಯಪೀಠ, ಅರ್ಜಿದಾರರ ಆಕ್ಷೇಪಣೆಗಳನ್ನು ಪುರಸ್ಕರಿಸಲು ನಿರಾಕರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>