<p><strong>ಬೆಂಗಳೂರು</strong>: ‘ವಕ್ಫ್ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ವಜಾಗೊಳಿಸುವ ಅಧಿಕಾರ ವಕ್ಫ್ ಮಂಡಳಿಗೆ ಮಾತ್ರ ಇದೆಯೇ ಹೊರತು ವಕ್ಫ್ ವ್ಯವಸ್ಥಾಪನಾ ಸಮಿತಿಗೆ ಅಲ್ಲ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.</p>.<p>ದಕ್ಷಿಣ ಕನ್ನಡ ಜಿಲ್ಲೆ ಸುರತ್ಕಲ್ನ ಅಬ್ದುಲ್ ಸತ್ತಾರ್ ಮತ್ತು ಮೊಹಮದ್ ಮುಸ್ತಾಫ ಸಲ್ಲಿಸಿದ್ದ ರಿಟ್ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತು ಆದೇಶಿಸಿದೆ.</p>.<p>2024ರ ಅಕ್ಟೋಬರ್ 11ರಂದು ತುರ್ತು ಸಭೆ ನಡೆಸಿ ಅರ್ಜಿದಾರರನ್ನು ವಜಾಗೊಳಿಸಿದ್ದ ವ್ಯವಸ್ಥಾಪನಾ ಸಮಿತಿ ಅದೇಶವನ್ನು ರದ್ದುಗೊಳಿಸಿರುವ ನ್ಯಾಯಪೀಠ, ‘ಅರ್ಜಿದಾರರು ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಮುಂದುವರಿಯಬಹುದು’ ಎಂದೂ ಹೇಳಿದೆ.</p>.<p>‘ವಕ್ಫ್ ಕಾಯ್ದೆ-1995ರ ಕಲಂ 32(2)(ಜಿ) ಅನುಸಾರ ವ್ಯವಸ್ಥಾಪನಾ ಸಮಿತಿಗೆ, ಮುತವಲ್ಲಿಗಳನ್ನು ನೇಮಿಸುವ ಅಥವಾ ತೆಗೆಯುವ ಅಧಿಕಾರ ವಕ್ಫ್ ಮಂಡಳಿಗೆ ಮಾತ್ರವೇ ಇದೆ. ಮುತವಲ್ಲಿಗಳನ್ನು ವಜಾಗೊಳಿಸುವಾಗ ವಕ್ಫ್ ಕಾಯ್ದೆಯ ಕಲಂ 64 ಮತ್ತು ಕರ್ನಾಟಕ ವಕ್ಫ್ ನಿಯಮಗಳು-2017ರ ನಿಯಮ 58ರ ಅಡಿ ಇರುವ ಕಾರಣಗಳನ್ನು ಪಾಲಿಸಬೇಕು’ ಎಂದು ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿದೆ.</p>.<p>ಅರ್ಜಿದಾರರು ದಕ್ಷಿಣ ಕನ್ನಡ ಜಿಲ್ಲೆ ಕೃಷ್ಣಾಪುರದ ಮುಸ್ಲಿಮ್ ಜಮಾತ್ನ ಬದಾರಿಯಾ ಜುಮ್ಮಾ ಮಸೀದಿಯ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ವಕ್ಫ್ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ವಜಾಗೊಳಿಸುವ ಅಧಿಕಾರ ವಕ್ಫ್ ಮಂಡಳಿಗೆ ಮಾತ್ರ ಇದೆಯೇ ಹೊರತು ವಕ್ಫ್ ವ್ಯವಸ್ಥಾಪನಾ ಸಮಿತಿಗೆ ಅಲ್ಲ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.</p>.<p>ದಕ್ಷಿಣ ಕನ್ನಡ ಜಿಲ್ಲೆ ಸುರತ್ಕಲ್ನ ಅಬ್ದುಲ್ ಸತ್ತಾರ್ ಮತ್ತು ಮೊಹಮದ್ ಮುಸ್ತಾಫ ಸಲ್ಲಿಸಿದ್ದ ರಿಟ್ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತು ಆದೇಶಿಸಿದೆ.</p>.<p>2024ರ ಅಕ್ಟೋಬರ್ 11ರಂದು ತುರ್ತು ಸಭೆ ನಡೆಸಿ ಅರ್ಜಿದಾರರನ್ನು ವಜಾಗೊಳಿಸಿದ್ದ ವ್ಯವಸ್ಥಾಪನಾ ಸಮಿತಿ ಅದೇಶವನ್ನು ರದ್ದುಗೊಳಿಸಿರುವ ನ್ಯಾಯಪೀಠ, ‘ಅರ್ಜಿದಾರರು ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಮುಂದುವರಿಯಬಹುದು’ ಎಂದೂ ಹೇಳಿದೆ.</p>.<p>‘ವಕ್ಫ್ ಕಾಯ್ದೆ-1995ರ ಕಲಂ 32(2)(ಜಿ) ಅನುಸಾರ ವ್ಯವಸ್ಥಾಪನಾ ಸಮಿತಿಗೆ, ಮುತವಲ್ಲಿಗಳನ್ನು ನೇಮಿಸುವ ಅಥವಾ ತೆಗೆಯುವ ಅಧಿಕಾರ ವಕ್ಫ್ ಮಂಡಳಿಗೆ ಮಾತ್ರವೇ ಇದೆ. ಮುತವಲ್ಲಿಗಳನ್ನು ವಜಾಗೊಳಿಸುವಾಗ ವಕ್ಫ್ ಕಾಯ್ದೆಯ ಕಲಂ 64 ಮತ್ತು ಕರ್ನಾಟಕ ವಕ್ಫ್ ನಿಯಮಗಳು-2017ರ ನಿಯಮ 58ರ ಅಡಿ ಇರುವ ಕಾರಣಗಳನ್ನು ಪಾಲಿಸಬೇಕು’ ಎಂದು ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿದೆ.</p>.<p>ಅರ್ಜಿದಾರರು ದಕ್ಷಿಣ ಕನ್ನಡ ಜಿಲ್ಲೆ ಕೃಷ್ಣಾಪುರದ ಮುಸ್ಲಿಮ್ ಜಮಾತ್ನ ಬದಾರಿಯಾ ಜುಮ್ಮಾ ಮಸೀದಿಯ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>