<p><strong>ಬೆಂಗಳೂರು</strong>: ‘48 ಶಾಸಕರನ್ನು ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ, ಸಂಪುಟ ದರ್ಜೆಯ ಸ್ಥಾನ ನೀಡಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ’ ಎಂದು ಆಕ್ಷೇಪಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನಿಮ್ಮ ನಿಲುವು ಏನೆಂಬುದನ್ನು ಸ್ಪಷ್ಟಪಡಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.</p>.<p>ಈ ಸಂಬಂಧ, ಸೂರಿ ಪಾಯಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>‘ಅರ್ಜಿದಾರರು ಪ್ರಸ್ತಾಪ ಮಾಡಿರುವ ವಿಷಯದ ಬಗ್ಗೆ ನಿಮ್ಮ ನಿಲುವು ಏನೆಂಬುದನ್ನು ತಿಳಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಮಾರ್ಚ್ 4 ಮುಂದೂಡಿತು.</p>.<p>ಕೋರಿಕೆ: ‘ಈ ನೇಮಕಾತಿ ಸಂವಿಧಾನದ 102 ಮತ್ತು 192ನೇ ವಿಧಿಗೆ ಮತ್ತು ಪ್ರಜಾಪ್ರತಿನಿಧಿ ಕಾಯ್ದೆ–1951ಕ್ಕೆ ವಿರುದ್ಧವಾಗಿದೆ. ಅಂತೆಯೇ, ಸುಪ್ರೀಂ ಕೋರ್ಟ್ನ ಮಾನದಂಡಗಳಿಗೂ ವ್ಯತಿರಿಕ್ತವಾಗಿದೆ. ಲಾಭದಾಯಕ ಹುದ್ದೆಗಳಲ್ಲಿರುವ ಈ ನೇಮಕಾತಿಗಳನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು. ನೇಮಕಗೊಂಡಿರುವವರನ್ನು ತಕ್ಷಣವೇ ಆಯಾ ಸ್ಥಾನಗಳಿಂದ ತೆಗೆದುಹಾಕಬೇಕು. ಅವರಿಗೆ ನೀಡಿರುವ ಎಲ್ಲ ಸೌಲಭ್ಯಗಳನ್ನೂ ಹಿಂಪಡೆಯಲು ಆದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<p><strong>ವೀಸಾ ಅವಧಿ ವಿಸ್ತರಣೆ ಕೋರಿಕೆ: ನೋಟಿಸ್</strong></p><p>ಬೆಂಗಳೂರು: ಎರಡು ವರ್ಷಗಳ ಹಿಂದೆಯೇ ಮುಕ್ತಾಯಗೊಂಡ ವೀಸಾ ಅವಧಿ ವಿಸ್ತರಣೆ ಮಾಡುವಂತೆ ಕೋರಿ ಸುಡಾನ್ ಪ್ರಜೆಯೊಬ್ಬರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p><p>ಈ ಸಂಬಂಧ ಸುಡಾನ್ ಪ್ರಜೆ ಅವಾಬ್ ಆದಿಲ್ ಅಹಮದ್ ಮೊಹಮದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಮಾರ್ಚ್ 6ಕ್ಕೆ ಮುಂದೂಡಿತು.</p><p>ಅರ್ಜಿಯಲ್ಲಿ ಏನಿದೆ?: ಅರ್ಜಿದಾರರು ವಿದ್ಯಾರ್ಥಿ ವೀಸಾದಡಿ ಭಾರತಕ್ಕೆ ಬಂದು ಇಲ್ಲೇ ನೆಲಸಿದ್ದರು. 2023ರ ಆಗಸ್ಟ್ 9ರಂದು ವೀಸಾ ಅವಧಿ ಮುಕ್ತಾವಾಗಿದ್ದು, ವಿಸ್ತರಣೆ ಮಾಡಬೇಕು ಎಂದು ಕೋರಿ ವಿದೇಶಿಗರ ಪ್ರಾದೇಶಿಕ ನೋಂದಣಾಧಿಕಾರಿ ಕಚೇರಿಗೆ (ಎಫ್ಆರ್ಆರ್ಒ) 2025ರ ಸೆಪ್ಟೆಂಬರ್ 11ರಂದು ಅರ್ಜಿ ಸಲ್ಲಿಸಿದ್ದರು.</p><p>ಈ ಅರ್ಜಿಯನ್ನು ತಿರಸ್ಕರಿಸಿ ಆನ್ಲೈನ್ ಹಿಂಬರಹ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘48 ಶಾಸಕರನ್ನು ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ, ಸಂಪುಟ ದರ್ಜೆಯ ಸ್ಥಾನ ನೀಡಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ’ ಎಂದು ಆಕ್ಷೇಪಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನಿಮ್ಮ ನಿಲುವು ಏನೆಂಬುದನ್ನು ಸ್ಪಷ್ಟಪಡಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.</p>.<p>ಈ ಸಂಬಂಧ, ಸೂರಿ ಪಾಯಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>‘ಅರ್ಜಿದಾರರು ಪ್ರಸ್ತಾಪ ಮಾಡಿರುವ ವಿಷಯದ ಬಗ್ಗೆ ನಿಮ್ಮ ನಿಲುವು ಏನೆಂಬುದನ್ನು ತಿಳಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಮಾರ್ಚ್ 4 ಮುಂದೂಡಿತು.</p>.<p>ಕೋರಿಕೆ: ‘ಈ ನೇಮಕಾತಿ ಸಂವಿಧಾನದ 102 ಮತ್ತು 192ನೇ ವಿಧಿಗೆ ಮತ್ತು ಪ್ರಜಾಪ್ರತಿನಿಧಿ ಕಾಯ್ದೆ–1951ಕ್ಕೆ ವಿರುದ್ಧವಾಗಿದೆ. ಅಂತೆಯೇ, ಸುಪ್ರೀಂ ಕೋರ್ಟ್ನ ಮಾನದಂಡಗಳಿಗೂ ವ್ಯತಿರಿಕ್ತವಾಗಿದೆ. ಲಾಭದಾಯಕ ಹುದ್ದೆಗಳಲ್ಲಿರುವ ಈ ನೇಮಕಾತಿಗಳನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು. ನೇಮಕಗೊಂಡಿರುವವರನ್ನು ತಕ್ಷಣವೇ ಆಯಾ ಸ್ಥಾನಗಳಿಂದ ತೆಗೆದುಹಾಕಬೇಕು. ಅವರಿಗೆ ನೀಡಿರುವ ಎಲ್ಲ ಸೌಲಭ್ಯಗಳನ್ನೂ ಹಿಂಪಡೆಯಲು ಆದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<p><strong>ವೀಸಾ ಅವಧಿ ವಿಸ್ತರಣೆ ಕೋರಿಕೆ: ನೋಟಿಸ್</strong></p><p>ಬೆಂಗಳೂರು: ಎರಡು ವರ್ಷಗಳ ಹಿಂದೆಯೇ ಮುಕ್ತಾಯಗೊಂಡ ವೀಸಾ ಅವಧಿ ವಿಸ್ತರಣೆ ಮಾಡುವಂತೆ ಕೋರಿ ಸುಡಾನ್ ಪ್ರಜೆಯೊಬ್ಬರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p><p>ಈ ಸಂಬಂಧ ಸುಡಾನ್ ಪ್ರಜೆ ಅವಾಬ್ ಆದಿಲ್ ಅಹಮದ್ ಮೊಹಮದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಮಾರ್ಚ್ 6ಕ್ಕೆ ಮುಂದೂಡಿತು.</p><p>ಅರ್ಜಿಯಲ್ಲಿ ಏನಿದೆ?: ಅರ್ಜಿದಾರರು ವಿದ್ಯಾರ್ಥಿ ವೀಸಾದಡಿ ಭಾರತಕ್ಕೆ ಬಂದು ಇಲ್ಲೇ ನೆಲಸಿದ್ದರು. 2023ರ ಆಗಸ್ಟ್ 9ರಂದು ವೀಸಾ ಅವಧಿ ಮುಕ್ತಾವಾಗಿದ್ದು, ವಿಸ್ತರಣೆ ಮಾಡಬೇಕು ಎಂದು ಕೋರಿ ವಿದೇಶಿಗರ ಪ್ರಾದೇಶಿಕ ನೋಂದಣಾಧಿಕಾರಿ ಕಚೇರಿಗೆ (ಎಫ್ಆರ್ಆರ್ಒ) 2025ರ ಸೆಪ್ಟೆಂಬರ್ 11ರಂದು ಅರ್ಜಿ ಸಲ್ಲಿಸಿದ್ದರು.</p><p>ಈ ಅರ್ಜಿಯನ್ನು ತಿರಸ್ಕರಿಸಿ ಆನ್ಲೈನ್ ಹಿಂಬರಹ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>