<p><strong>ಬೆಂಗಳೂರು</strong>: ದೋಷಾರೋಪ ಪಟ್ಟಿಯನ್ನೇ "ದೋಷಪೂರಿತ"ವಾಗಿ ತಯಾರಿಸಿ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ ಬಾಣಸವಾಡಿ ಠಾಣೆಯ ಇನ್ ಸ್ಪೆಕ್ಟರ್ ವಿರುದ್ಧ ಇಲಾಖಾ ವಿಚಾರಣೆ ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ.</p><p>"ನನ್ನ ವಿರುದ್ಧ ನಗರದ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿರುವ ಪ್ರಕರಣ ರದ್ದುಪಡಿಸಬೇಕು" ಎಂದು ಕೋರಿ ಆರ್.ಎಸ್. ಪಾಳ್ಯದ 29 ವರ್ಷದ ಯುವಕ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.</p><p>"ಆತ್ಮಹತ್ಯೆಗೆ ಪ್ರಚೋದನೆ (abetment) ನೀಡಿದ ಎಂಬ ಕಾರಣವನ್ನು ನಮೂದು ಮಾಡುವಾಗ ಅಲ್ಲಿ ಸಂತ್ರಸ್ತೆ ಅಥವಾ ಸಂತ್ರಸ್ತ ಮೃತಪಟ್ಟಿರಬೇಕು. ಸಂತ್ರಸ್ತರು ಜೀವಂತ ಇದ್ದಾಗಾಲೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧದಡಿ, ದೋಷಾರೋಪ ಪಟ್ಟಿ ಸಲ್ಲಿಸಲು ಸಾಧ್ಯವಿಲ್ಲ" ಎಂದು ನ್ಯಾಯಪೀಠ ವಿಶದಪಡಿಸಿದೆ.</p><p>"ಈ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ ಅರ್ಜಿದಾರರ ಪತ್ನಿಯು ಬದುಕಿರುವಾಗ ತನಿಖಾಧಿಕಾರಿ ಮೂಲ ತತ್ವವನ್ನೇ ಮರೆತು ಕಲಂ 108ರ (ಪ್ರಚೋದನೆಯಿಂದ ಆತ್ಮಹತ್ಯೆ) ಅಡಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿರುವುದು ಮೂರ್ಖತನ" ಎಂದು ಕಿಡಿ ಕಾರಿದೆ.</p><p>"ಅಜಾಗರೂಕತೆ ಅಥವಾ ಕಾನೂನು ಕ್ರಮ ಕೈಗೊಳ್ಳುವ ಆತುರದಲ್ಲಿ, ಅರ್ಜಿದಾರರನ್ನು ಬಂಧಿಸಿ ಇಡಲಾಗಿದೆ. ಇದು ತನಿಖೆಯ ಅವಿವೇಕ ಮತ್ತು ವ್ಯಕ್ತಿಯೊಬ್ಬರ ವೈಯಕ್ತಿಕ ಸ್ವಾತಂತ್ರ್ಯದ ಬಗ್ಗೆ ಆಳವಾದ ಅಸಡ್ಡೆ ಹೊಂದಿರುವುದನ್ನು ಪ್ರತಿಬಿಂಬಿಸುತ್ತದೆ" ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. </p><p>"ತನಿಖಾಧಿಕಾರಿಯ (ಇನ್ ಸ್ಪೆಕ್ಟರ್) ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರುವ ಈ ಪ್ರಕರಣ ನ್ಯಾಯಾಂಗದ ಮನಃಸ್ಸಾಕ್ಷಿಗೆ ಆಘಾತ ಉಂಟು ಮಾಡಿದೆ. ಪ್ರಾಸಿಕ್ಯೂಷನ್ ತುಳಿದಿರುವ ತಪ್ಪು ಹಾದಿಯಿಂದಾಗಿ ಅರ್ಜಿದಾರರು ಆರು ತಿಂಗಳಿಗೂ ಹೆಚ್ಚು ಕಾಲ ಜೈಲಿನ ಕಂಬಿಗಳ ಹಿಂದೆ ನರಳುವಂತಾಗಿದೆ. ಈ ಕೂಡಲೇ ಅರ್ಜಿದಾರರನ್ನು ಜೈಲಿನಿಂದ ಬಿಡುಗಡೆ ಮಾಡಬೇಕು" ಎಂದು ಸಕ್ಷಮ ಪ್ರಾಧಿಕಾರಕ್ಕೆ ಆದೇಶಿಸಿದೆ.</p><p>ಅಂತೆಯೇ, "ಅರ್ಜಿದಾರ ಪತಿ ಮತ್ತು ದೂರುದಾರ ಪತ್ನಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವ ನಿರ್ಧಾರವನ್ನು ಮನ್ನಿಸಲಾಗಿದೆ" ಎಂದು ನ್ಯಾಯಪೀಠ ಹೇಳಿದೆ.</p><p>ವರದಿ ಸಲ್ಲಿಸಿ: "ತಪ್ಪಿತಸ್ಥ ಪೊಲೀಸ್ ಅಧಿಕಾರಿಯ ವಿರುದ್ಧದ ಇಲಾಖಾ ವಿಚಾರಣೆಯ ವರದಿಯನ್ನು ಮೂರು ತಿಂಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು" ಎಂದು ಪ್ರಾಸಿಕ್ಯೂಷನ್ ಗೆ ನಿರ್ದೇಶಿಸಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಆರ್.ರಂಗನಾಥ ರಡ್ಡಿ ವಾದ ಮಂಡಿಸಿದ್ದರು.</p><p>ಪ್ರಕರಣ: ಅರ್ಜಿದಾರ ಯುವಕ ಮತ್ತು ಪ್ರಕರಣದ ದೂರುದಾರ ಯುವತಿ ಪರಸ್ಪರ ಪ್ರೀತಿಸಿ 2018ರ ಅಕ್ಟೋಬರ್ ನಲ್ಲಿ ಮದುವೆಯಾಗಿದ್ದು ಒಂದು ವರ್ಷದ ಹೆಣ್ಣು ಮಗುವಿದೆ.</p><p>ಕಳೆದ ವರ್ಷ ಪತಿ-ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕೆ ಕೌಟುಂಬಿಕ ಜಗಳ ನಡೆದಿತ್ತು. ಮಾತಿನ ಭರದಲ್ಲಿ ಪತ್ನಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮನೆಯ ಎರಡನೆಯ ಮಹಡಿಯಿಂದ ಕೆಳಗೆ ಜಿಗಿದಿದ್ದರು. ಪರಿಣಾಮ ಬೆನ್ನುಮೂಳೆ ಮತ್ತು ಕೈ ಮುರಿದಿತ್ತು. ನಂತರ ಸಂಪೂರ್ಣ ಚೇತರಿಸಿಕೊಂಡಿದ್ದರು.</p><p>ಈ ಹಿನ್ನೆಲೆಯಲ್ಲಿ ಪತ್ನಿಯು ಪತಿಯ ವಿರುದ್ಧ ದೂರು ನೀಡಿದ್ದರು. ಪೊಲೀಸರು, ಭಾರತೀಯ ನ್ಯಾಯ ಸಂಹಿತೆ-2023ರ (ಬಿಎನ್ಎಸ್) ಕಲಂ 108, 62, 85 ಮತ್ತು 352ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ನಂತರ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದೋಷಾರೋಪ ಪಟ್ಟಿಯನ್ನೇ "ದೋಷಪೂರಿತ"ವಾಗಿ ತಯಾರಿಸಿ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ ಬಾಣಸವಾಡಿ ಠಾಣೆಯ ಇನ್ ಸ್ಪೆಕ್ಟರ್ ವಿರುದ್ಧ ಇಲಾಖಾ ವಿಚಾರಣೆ ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ.</p><p>"ನನ್ನ ವಿರುದ್ಧ ನಗರದ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿರುವ ಪ್ರಕರಣ ರದ್ದುಪಡಿಸಬೇಕು" ಎಂದು ಕೋರಿ ಆರ್.ಎಸ್. ಪಾಳ್ಯದ 29 ವರ್ಷದ ಯುವಕ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.</p><p>"ಆತ್ಮಹತ್ಯೆಗೆ ಪ್ರಚೋದನೆ (abetment) ನೀಡಿದ ಎಂಬ ಕಾರಣವನ್ನು ನಮೂದು ಮಾಡುವಾಗ ಅಲ್ಲಿ ಸಂತ್ರಸ್ತೆ ಅಥವಾ ಸಂತ್ರಸ್ತ ಮೃತಪಟ್ಟಿರಬೇಕು. ಸಂತ್ರಸ್ತರು ಜೀವಂತ ಇದ್ದಾಗಾಲೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧದಡಿ, ದೋಷಾರೋಪ ಪಟ್ಟಿ ಸಲ್ಲಿಸಲು ಸಾಧ್ಯವಿಲ್ಲ" ಎಂದು ನ್ಯಾಯಪೀಠ ವಿಶದಪಡಿಸಿದೆ.</p><p>"ಈ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ ಅರ್ಜಿದಾರರ ಪತ್ನಿಯು ಬದುಕಿರುವಾಗ ತನಿಖಾಧಿಕಾರಿ ಮೂಲ ತತ್ವವನ್ನೇ ಮರೆತು ಕಲಂ 108ರ (ಪ್ರಚೋದನೆಯಿಂದ ಆತ್ಮಹತ್ಯೆ) ಅಡಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿರುವುದು ಮೂರ್ಖತನ" ಎಂದು ಕಿಡಿ ಕಾರಿದೆ.</p><p>"ಅಜಾಗರೂಕತೆ ಅಥವಾ ಕಾನೂನು ಕ್ರಮ ಕೈಗೊಳ್ಳುವ ಆತುರದಲ್ಲಿ, ಅರ್ಜಿದಾರರನ್ನು ಬಂಧಿಸಿ ಇಡಲಾಗಿದೆ. ಇದು ತನಿಖೆಯ ಅವಿವೇಕ ಮತ್ತು ವ್ಯಕ್ತಿಯೊಬ್ಬರ ವೈಯಕ್ತಿಕ ಸ್ವಾತಂತ್ರ್ಯದ ಬಗ್ಗೆ ಆಳವಾದ ಅಸಡ್ಡೆ ಹೊಂದಿರುವುದನ್ನು ಪ್ರತಿಬಿಂಬಿಸುತ್ತದೆ" ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. </p><p>"ತನಿಖಾಧಿಕಾರಿಯ (ಇನ್ ಸ್ಪೆಕ್ಟರ್) ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರುವ ಈ ಪ್ರಕರಣ ನ್ಯಾಯಾಂಗದ ಮನಃಸ್ಸಾಕ್ಷಿಗೆ ಆಘಾತ ಉಂಟು ಮಾಡಿದೆ. ಪ್ರಾಸಿಕ್ಯೂಷನ್ ತುಳಿದಿರುವ ತಪ್ಪು ಹಾದಿಯಿಂದಾಗಿ ಅರ್ಜಿದಾರರು ಆರು ತಿಂಗಳಿಗೂ ಹೆಚ್ಚು ಕಾಲ ಜೈಲಿನ ಕಂಬಿಗಳ ಹಿಂದೆ ನರಳುವಂತಾಗಿದೆ. ಈ ಕೂಡಲೇ ಅರ್ಜಿದಾರರನ್ನು ಜೈಲಿನಿಂದ ಬಿಡುಗಡೆ ಮಾಡಬೇಕು" ಎಂದು ಸಕ್ಷಮ ಪ್ರಾಧಿಕಾರಕ್ಕೆ ಆದೇಶಿಸಿದೆ.</p><p>ಅಂತೆಯೇ, "ಅರ್ಜಿದಾರ ಪತಿ ಮತ್ತು ದೂರುದಾರ ಪತ್ನಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವ ನಿರ್ಧಾರವನ್ನು ಮನ್ನಿಸಲಾಗಿದೆ" ಎಂದು ನ್ಯಾಯಪೀಠ ಹೇಳಿದೆ.</p><p>ವರದಿ ಸಲ್ಲಿಸಿ: "ತಪ್ಪಿತಸ್ಥ ಪೊಲೀಸ್ ಅಧಿಕಾರಿಯ ವಿರುದ್ಧದ ಇಲಾಖಾ ವಿಚಾರಣೆಯ ವರದಿಯನ್ನು ಮೂರು ತಿಂಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು" ಎಂದು ಪ್ರಾಸಿಕ್ಯೂಷನ್ ಗೆ ನಿರ್ದೇಶಿಸಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಆರ್.ರಂಗನಾಥ ರಡ್ಡಿ ವಾದ ಮಂಡಿಸಿದ್ದರು.</p><p>ಪ್ರಕರಣ: ಅರ್ಜಿದಾರ ಯುವಕ ಮತ್ತು ಪ್ರಕರಣದ ದೂರುದಾರ ಯುವತಿ ಪರಸ್ಪರ ಪ್ರೀತಿಸಿ 2018ರ ಅಕ್ಟೋಬರ್ ನಲ್ಲಿ ಮದುವೆಯಾಗಿದ್ದು ಒಂದು ವರ್ಷದ ಹೆಣ್ಣು ಮಗುವಿದೆ.</p><p>ಕಳೆದ ವರ್ಷ ಪತಿ-ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕೆ ಕೌಟುಂಬಿಕ ಜಗಳ ನಡೆದಿತ್ತು. ಮಾತಿನ ಭರದಲ್ಲಿ ಪತ್ನಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮನೆಯ ಎರಡನೆಯ ಮಹಡಿಯಿಂದ ಕೆಳಗೆ ಜಿಗಿದಿದ್ದರು. ಪರಿಣಾಮ ಬೆನ್ನುಮೂಳೆ ಮತ್ತು ಕೈ ಮುರಿದಿತ್ತು. ನಂತರ ಸಂಪೂರ್ಣ ಚೇತರಿಸಿಕೊಂಡಿದ್ದರು.</p><p>ಈ ಹಿನ್ನೆಲೆಯಲ್ಲಿ ಪತ್ನಿಯು ಪತಿಯ ವಿರುದ್ಧ ದೂರು ನೀಡಿದ್ದರು. ಪೊಲೀಸರು, ಭಾರತೀಯ ನ್ಯಾಯ ಸಂಹಿತೆ-2023ರ (ಬಿಎನ್ಎಸ್) ಕಲಂ 108, 62, 85 ಮತ್ತು 352ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ನಂತರ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>