‘ಹೊಸಪೇಟೆಗೆ ಕಾಯ್ದೆಯ ಕಲಂ 3 ಅನ್ನು ಅನ್ವಯಿಸಬೇಕಾದರೆ ಕಲಂ 1 ಅನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ. ಕಲಂ 1ರ ಪ್ರಕಾರ ನಿರ್ದಿಷ್ಟ ಸ್ಥಳ ಅಥವಾ ಸ್ಥಳೀಯ ಪ್ರದೇಶವನ್ನು ಕಾಯ್ದೆಯ ವ್ಯಾಪ್ತಿಗೆ ಒಳಪಡಿಸಬೇಕು. ಈ ಸಂಬಂಧ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸುವುದು ಕಡ್ಡಾಯ‘ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಸರ್ಕಾರದ ವಕೀಲ ವಿ. ಎಸ್. ಕಳಸೂರಮಠ ವಾದ ಮಂಡಿಸಿದ್ದರು.