<p><strong>ಬೆಂಗಳೂರು</strong>: ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ದಾಬಸ್ಪೇಟೆಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದ ರಸ್ತೆ ರಂಪಾಟ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ಹೆಗಡೆ ವಿರುದ್ಧದ ಅಧೀನ ಕೋರ್ಟ್ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.</p><p>‘ನಮ್ಮ ವಿರುದ್ಧ ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಅನಂತ ಕುಮಾರ್ ಹೆಗಡೆ, ಶಶಿಧರ ಬಿದ್ದಾಡಪ್ಪ ತೆಗ್ಗಿನವರ ಮತ್ತು ಮಹೇಶ್ ರಾಜು ಶೆಟ್ಟಿ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯಲ್ಲಿನ ಅಶುತೋಷ್ ಅವರ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p><p>ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎಚ್.ಪವನಚಂದ್ರ ಶೆಟ್ಟಿ, ‘ಎಫ್ಐಆರ್ ಮತ್ತು ದೋಷಾರೋಪ ಪಟ್ಟಿಯಲ್ಲಿ ಅಶುತೋಷ್ ಹೆಸರಿಲ್ಲ. ಆದ್ದರಿಂದ, ಅವರನ್ನು ಪ್ರಕರಣದಿಂದ ಕೈಬಿಡಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.</p><p>ಇದಕ್ಕೆ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, ‘ಅರ್ಜಿಯಲ್ಲಿ ಮೊದಲಿಗೆ ಅಶುತೋಷ್ ಪಕ್ಷಗಾರ ಆಗಿರಲಿಲ್ಲ. ಹೀಗಾಗಿ, ತಿದ್ದುಪಡಿ ಅಥವಾ ಪ್ರತ್ಯೇಕ ಅರ್ಜಿ ಸಲ್ಲಿಸಿದರೆ ನ್ಯಾಯಪೀಠ ಅದನ್ನು ಪರಿಗಣಿಸಬಹುದು’ ಎಂದರು.</p><p>ಇದನ್ನು ಪರಿಗಣಿಸಿದ ನ್ಯಾಯಪೀಠ, ‘ನಾಲ್ಕನೇ ಆರೋಪಿ ಅಶುತೋಷ್ ವಿರುದ್ಧ ಮೇಲ್ನೋಟಕ್ಕೆ ಅಪರಾಧ ಪ್ರವೃತ್ತಿಯ ಯಾವುದೇ ಆರೋಪಗಳಿಲ್ಲ’ ಎಂದು ವಿಚಾರಣಾ ಪ್ರಕ್ರಿಯೆಗೆ ತಡೆ ನೀಡಿತು. ಅಂತೆಯೇ, ‘ಮುಂದಿನ ವಿಚಾರಣೆಗೆ ಒಳಪಟ್ಟಂತೆ ನಾಲ್ಕನೇ ಆರೋಪಿಗೆ ಮಾತ್ರವೇ ಈ ಮಧ್ಯಂತರ ಆದೇಶವನ್ನು ಸೀಮೀತಗೊಳಿಸಲಾಗಿದೆ’ ಎಂದೂ ಸ್ಪಷ್ಟಪಡಿಸಿತು.</p>.ಮಗ ವಿದೇಶದಲ್ಲಿ ಓದುತ್ತಿದ್ದಾನೆ,ಪ್ರಕರಣ ಕೈಬಿಡಿ: ಹೈಕೋರ್ಟ್ಗೆ ಅನಂತಕುಮಾರ್ ಮನವಿ.ಮಗನ ವಿರುದ್ಧ ಪ್ರಕರಣ: ರದ್ದತಿಗೆ ಅನಂತಕುಮಾರ್ ಕೋರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ದಾಬಸ್ಪೇಟೆಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದ ರಸ್ತೆ ರಂಪಾಟ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ಹೆಗಡೆ ವಿರುದ್ಧದ ಅಧೀನ ಕೋರ್ಟ್ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.</p><p>‘ನಮ್ಮ ವಿರುದ್ಧ ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಅನಂತ ಕುಮಾರ್ ಹೆಗಡೆ, ಶಶಿಧರ ಬಿದ್ದಾಡಪ್ಪ ತೆಗ್ಗಿನವರ ಮತ್ತು ಮಹೇಶ್ ರಾಜು ಶೆಟ್ಟಿ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯಲ್ಲಿನ ಅಶುತೋಷ್ ಅವರ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p><p>ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎಚ್.ಪವನಚಂದ್ರ ಶೆಟ್ಟಿ, ‘ಎಫ್ಐಆರ್ ಮತ್ತು ದೋಷಾರೋಪ ಪಟ್ಟಿಯಲ್ಲಿ ಅಶುತೋಷ್ ಹೆಸರಿಲ್ಲ. ಆದ್ದರಿಂದ, ಅವರನ್ನು ಪ್ರಕರಣದಿಂದ ಕೈಬಿಡಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.</p><p>ಇದಕ್ಕೆ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, ‘ಅರ್ಜಿಯಲ್ಲಿ ಮೊದಲಿಗೆ ಅಶುತೋಷ್ ಪಕ್ಷಗಾರ ಆಗಿರಲಿಲ್ಲ. ಹೀಗಾಗಿ, ತಿದ್ದುಪಡಿ ಅಥವಾ ಪ್ರತ್ಯೇಕ ಅರ್ಜಿ ಸಲ್ಲಿಸಿದರೆ ನ್ಯಾಯಪೀಠ ಅದನ್ನು ಪರಿಗಣಿಸಬಹುದು’ ಎಂದರು.</p><p>ಇದನ್ನು ಪರಿಗಣಿಸಿದ ನ್ಯಾಯಪೀಠ, ‘ನಾಲ್ಕನೇ ಆರೋಪಿ ಅಶುತೋಷ್ ವಿರುದ್ಧ ಮೇಲ್ನೋಟಕ್ಕೆ ಅಪರಾಧ ಪ್ರವೃತ್ತಿಯ ಯಾವುದೇ ಆರೋಪಗಳಿಲ್ಲ’ ಎಂದು ವಿಚಾರಣಾ ಪ್ರಕ್ರಿಯೆಗೆ ತಡೆ ನೀಡಿತು. ಅಂತೆಯೇ, ‘ಮುಂದಿನ ವಿಚಾರಣೆಗೆ ಒಳಪಟ್ಟಂತೆ ನಾಲ್ಕನೇ ಆರೋಪಿಗೆ ಮಾತ್ರವೇ ಈ ಮಧ್ಯಂತರ ಆದೇಶವನ್ನು ಸೀಮೀತಗೊಳಿಸಲಾಗಿದೆ’ ಎಂದೂ ಸ್ಪಷ್ಟಪಡಿಸಿತು.</p>.ಮಗ ವಿದೇಶದಲ್ಲಿ ಓದುತ್ತಿದ್ದಾನೆ,ಪ್ರಕರಣ ಕೈಬಿಡಿ: ಹೈಕೋರ್ಟ್ಗೆ ಅನಂತಕುಮಾರ್ ಮನವಿ.ಮಗನ ವಿರುದ್ಧ ಪ್ರಕರಣ: ರದ್ದತಿಗೆ ಅನಂತಕುಮಾರ್ ಕೋರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>