<p><strong>ಬೆಂಗಳೂರು:</strong> ಸೇವಾ ಹಿರಿತನಕ್ಕೆ ಸಂಬಂಧಿಸಿದ ಜಟಾಪಟಿಯ ಹಿನ್ನೆಲೆಯಲ್ಲಿ; ಪಾಸ್ಪೋರ್ಟ್ ದಾಖಲೆಗಳಲ್ಲಿ ಸಹಿ ನಕಲು ಮತ್ತು ಕಚೇರಿಯ ಅಧಿಕೃತ ಮೊಹರು ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ ಪ್ರಾಸಿಕ್ಯೂಷನ್ ಇಲಾಖೆಯ ನಿರ್ದೇಶಕಿ ಅಂಜಲಿ ದೇವಿ ವಿರುದ್ಧ ದಾಖಲಿಸಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p><p>‘ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ನನ್ನ ವಿರುದ್ಧ ದಾಖಲಾಗಿರುವ ದೂರಿಗೆ ಸಂಬಂಧಿಸಿದಂತೆ 6ನೇ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿರುವ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ಅಂಜಲಿ ದೇವಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.</p><p>ಅರ್ಜಿದಾರರ ಪರ ಹೈಕೋರ್ಟ್ ವಕೀಲ ಪಿ.ಪ್ರಸನ್ನ ಕುಮಾರ್ ಅವರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಪ್ರಾಸಿಕ್ಯೂಷನ್ ಮತ್ತು ದೂರುದಾರ ಅಂಜನಾ ಚೌಹಾಣ್ ಅವರಿಗೆ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸೇವಾ ಹಿರಿತನಕ್ಕೆ ಸಂಬಂಧಿಸಿದ ಜಟಾಪಟಿಯ ಹಿನ್ನೆಲೆಯಲ್ಲಿ; ಪಾಸ್ಪೋರ್ಟ್ ದಾಖಲೆಗಳಲ್ಲಿ ಸಹಿ ನಕಲು ಮತ್ತು ಕಚೇರಿಯ ಅಧಿಕೃತ ಮೊಹರು ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ ಪ್ರಾಸಿಕ್ಯೂಷನ್ ಇಲಾಖೆಯ ನಿರ್ದೇಶಕಿ ಅಂಜಲಿ ದೇವಿ ವಿರುದ್ಧ ದಾಖಲಿಸಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p><p>‘ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ನನ್ನ ವಿರುದ್ಧ ದಾಖಲಾಗಿರುವ ದೂರಿಗೆ ಸಂಬಂಧಿಸಿದಂತೆ 6ನೇ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿರುವ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ಅಂಜಲಿ ದೇವಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.</p><p>ಅರ್ಜಿದಾರರ ಪರ ಹೈಕೋರ್ಟ್ ವಕೀಲ ಪಿ.ಪ್ರಸನ್ನ ಕುಮಾರ್ ಅವರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಪ್ರಾಸಿಕ್ಯೂಷನ್ ಮತ್ತು ದೂರುದಾರ ಅಂಜನಾ ಚೌಹಾಣ್ ಅವರಿಗೆ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>