<p><strong>ಬೆಂಗಳೂರು:</strong> ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತರನ್ನಾಗಿ ಎಸ್.ಎಂ.ಸೋಮಶೇಖರ ಮತ್ತು ಕೆ.ಪಿ.ಮಂಜುನಾಥ ಅವರನ್ನು ನೇಮಕ ಮಾಡಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p>.<p>ಸರ್ಕಾರದ ಆದೇಶವನ್ನು ಪ್ರಶ್ನಿಸಿ ನಿವೃತ್ತ ಐಪಿಎಸ್ ಅಧಿಕಾರಿ ಮೊಹಮದ್ ವಜೀರ್ ಅಹ್ಮದ್ ಸಲ್ಲಿಸಿರುವ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ಪ್ರತಿವಾದಿ ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.</p>.<p><strong>ಪ್ರಕರಣವೇನು?:</strong> ‘ಆಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮೊದಲ ಅಧಿಸೂಚನೆಯಲ್ಲಿ ನನ್ನ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಆದರೆ, ಈ ಬಗ್ಗೆ ನ್ಯಾಯಯುತವಾಗಿ ನಡೆದುಕೊಳ್ಳದ ಸರ್ಕಾರ ಮತ್ತೊಂದು ಅಧಿಸೂಚನೆ ಹೊರಡಿಸಿ ನನ್ನ ಬದಲಿಗೆ ಸೋಮಶೇಖರ ಮತ್ತು ಮಂಜುನಾಥ ಹೆಸರನ್ನು ಶಿಫಾರಸು ಮಾಡಿತು’ ಎಂಬುದು ಅರ್ಜಿದಾರರ ಆಕ್ಷೇಪ.</p>.<p>ಅರ್ಜಿದಾರರು ಎರಡನೇ ಅಧಿಸೂಚನೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆಗ ವಿಚಾರಣೆ ವೇಳೆ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮುಚ್ಚಳಿಕೆ ನೀಡಿ, ‘ಅರ್ಜಿದಾರರಿಗೆ ಒಂದು ಸ್ಥಾನ ಮೀಸಲು ಇರಿಸಲಾಗುವುದು’ ಎಂದು ಹೇಳಿತ್ತು. ಆದರೆ, ಈ ಮುಚ್ಚಳಿಕೆ ಅನುಸಾರ ಸರ್ಕಾರ ನಡೆದುಕೊಂಡಿಲ್ಲ’ ಎಂದು ಮೇಲ್ಮನವಿಯಲ್ಲಿ ದೂರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತರನ್ನಾಗಿ ಎಸ್.ಎಂ.ಸೋಮಶೇಖರ ಮತ್ತು ಕೆ.ಪಿ.ಮಂಜುನಾಥ ಅವರನ್ನು ನೇಮಕ ಮಾಡಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p>.<p>ಸರ್ಕಾರದ ಆದೇಶವನ್ನು ಪ್ರಶ್ನಿಸಿ ನಿವೃತ್ತ ಐಪಿಎಸ್ ಅಧಿಕಾರಿ ಮೊಹಮದ್ ವಜೀರ್ ಅಹ್ಮದ್ ಸಲ್ಲಿಸಿರುವ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ಪ್ರತಿವಾದಿ ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.</p>.<p><strong>ಪ್ರಕರಣವೇನು?:</strong> ‘ಆಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮೊದಲ ಅಧಿಸೂಚನೆಯಲ್ಲಿ ನನ್ನ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಆದರೆ, ಈ ಬಗ್ಗೆ ನ್ಯಾಯಯುತವಾಗಿ ನಡೆದುಕೊಳ್ಳದ ಸರ್ಕಾರ ಮತ್ತೊಂದು ಅಧಿಸೂಚನೆ ಹೊರಡಿಸಿ ನನ್ನ ಬದಲಿಗೆ ಸೋಮಶೇಖರ ಮತ್ತು ಮಂಜುನಾಥ ಹೆಸರನ್ನು ಶಿಫಾರಸು ಮಾಡಿತು’ ಎಂಬುದು ಅರ್ಜಿದಾರರ ಆಕ್ಷೇಪ.</p>.<p>ಅರ್ಜಿದಾರರು ಎರಡನೇ ಅಧಿಸೂಚನೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆಗ ವಿಚಾರಣೆ ವೇಳೆ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮುಚ್ಚಳಿಕೆ ನೀಡಿ, ‘ಅರ್ಜಿದಾರರಿಗೆ ಒಂದು ಸ್ಥಾನ ಮೀಸಲು ಇರಿಸಲಾಗುವುದು’ ಎಂದು ಹೇಳಿತ್ತು. ಆದರೆ, ಈ ಮುಚ್ಚಳಿಕೆ ಅನುಸಾರ ಸರ್ಕಾರ ನಡೆದುಕೊಂಡಿಲ್ಲ’ ಎಂದು ಮೇಲ್ಮನವಿಯಲ್ಲಿ ದೂರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>