<p><strong>ಬೆಂಗಳೂರು</strong>: ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಅತಿಕ್ರಮ ಪ್ರವೇಶ ಮಾಡಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಿರುತೆರೆ ನಿರ್ದೇಶಕ ಟಿ.ಎನ್.ಸೀತಾರಾಮ್ ಮತ್ತು ಇತರರ ವಿರುದ್ಧ ದಾಖಲಿಸಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p><p>ಪ್ರಕರಣ ರದ್ದುಕೋರಿ ಟಿ.ಎನ್.ಸೀತಾರಾಮ್ ಮತ್ತು ಅವರ ಸಹೋದರಿ ಕೆ.ಎಸ್.ವಿಜಯಲಕ್ಷ್ಮಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p><p>ವಿಚಾರಣೆ ವೇಳೆ ಸೀತಾರಾಮ್ ಪರ ಪದಾಂಕಿತ ಹಿರಿಯ ವಕೀಲ ಕೆ.ದಿವಾಕರ ಅವರು, ‘ಅರ್ಜಿದಾರರು ವಕೀಲರು ಮತ್ತು ಖ್ಯಾತ ಕಿರುತೆರೆ ನಿರ್ದೇಶಕರು. ಅವರಿಗೆ ಸಂಬಂಧಿಸಿದ ಆಸ್ತಿ ವಿಚಾರದಲ್ಲಿ ಈ ಸುಳ್ಳು ದೂರು ದಾಖಲಾಗಿದ್ದು ಇದಕ್ಕೆ ತಡೆ ನೀಡಬೇಕು’ ಎಂದು ಕೋರಿದರು.</p><p>ಇದಕ್ಕೆ ದೂರುದಾರ ಎಂ.ಎ.ಅರವಿಂದ ಕುಮಾರ್ ಪರ ಹಾಜರಾಗಿದ್ದ ಹೈಕೋರ್ಟ್ ವಕೀಲ ಜೆ.ಆರ್.ಜಗದೀಶ್ ಆಕ್ಷೇಪ ವ್ಯಕ್ತಪಡಿಸಿದರಾದರೂ, ನ್ಯಾಯಪೀಠ ಸೀತಾರಾಮ್ ಮತ್ತು ಇತರರ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ತಡೆ ನೀಡಿ ಆದೇಶಿಸಿತು.</p><p><strong>ಪ್ರಕರಣವೇನು?</strong></p><p>ದೊಡ್ಡಬಳ್ಳಾಪುರ ತಾಲ್ಲೂಕಿನ ಹಸನಘಟ್ಟ ಗ್ರಾಮದ ವಿವಿಧ ಸರ್ವೇ ನಂಬರ್ಗಳಲ್ಲಿನ ಒಟ್ಟು 5 ಎಕರೆಗೂ ಹೆಚ್ಚು ವಿಸ್ತೀರ್ಣದ ಜಮೀನಿನಲ್ಲಿ ಒಂದಷ್ಟು ಭಾಗ ತಮ್ಮ ಹೆಸರಿಗೆ ಇದೆ’ ಎಂಬ ಟಿ.ಎನ್.ಸೀತಾರಾಮ್ ಅವರ ದಾವೆಗೆ ಸಂಬಂಧಿಸಿದಂತೆ ಎಂ.ಎ.ಅರವಿಂದ ಕುಮಾರ್ ಮತ್ತು ಸೀತಾರಾಮ್ ನಡುವೆ ತಕರಾರು ನಡೆದಿದೆ.</p><p>ಈ ಸಂಬಂಧ ಎಂ.ಎ.ಅರವಿಂದ ಕುಮಾರ್ ಅವರು, ಟಿ.ಎನ್.ಸೀತಾರಾಮ್, ಕೆ.ಎಸ್.ವಿಜಯಲಕ್ಷ್ಮಿ, ರಾಕೇಶ್ ಮತ್ತು ಶಶಾಂಕ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.</p><p>ದೂರಿನ ಅನ್ವಯ ನಾಲ್ವರೂ ಆರೋಪಿಗಳ ವಿರುದ್ಧ ವಿವಿಧ ಕಲಂಗಳ ಅಡಿ ಎಫ್ಐಆರ್ ದಾಖಲಿಸಲಾಗಿದೆ. ‘ಈ ಕುರಿತಾದ ತನಿಖೆಯನ್ನು ರದ್ದುಪಡಿಸಬೇಕು’ ಎಂದು ಕೋರಿ ಸೀತಾರಾಮ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಅತಿಕ್ರಮ ಪ್ರವೇಶ ಮಾಡಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಿರುತೆರೆ ನಿರ್ದೇಶಕ ಟಿ.ಎನ್.ಸೀತಾರಾಮ್ ಮತ್ತು ಇತರರ ವಿರುದ್ಧ ದಾಖಲಿಸಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p><p>ಪ್ರಕರಣ ರದ್ದುಕೋರಿ ಟಿ.ಎನ್.ಸೀತಾರಾಮ್ ಮತ್ತು ಅವರ ಸಹೋದರಿ ಕೆ.ಎಸ್.ವಿಜಯಲಕ್ಷ್ಮಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p><p>ವಿಚಾರಣೆ ವೇಳೆ ಸೀತಾರಾಮ್ ಪರ ಪದಾಂಕಿತ ಹಿರಿಯ ವಕೀಲ ಕೆ.ದಿವಾಕರ ಅವರು, ‘ಅರ್ಜಿದಾರರು ವಕೀಲರು ಮತ್ತು ಖ್ಯಾತ ಕಿರುತೆರೆ ನಿರ್ದೇಶಕರು. ಅವರಿಗೆ ಸಂಬಂಧಿಸಿದ ಆಸ್ತಿ ವಿಚಾರದಲ್ಲಿ ಈ ಸುಳ್ಳು ದೂರು ದಾಖಲಾಗಿದ್ದು ಇದಕ್ಕೆ ತಡೆ ನೀಡಬೇಕು’ ಎಂದು ಕೋರಿದರು.</p><p>ಇದಕ್ಕೆ ದೂರುದಾರ ಎಂ.ಎ.ಅರವಿಂದ ಕುಮಾರ್ ಪರ ಹಾಜರಾಗಿದ್ದ ಹೈಕೋರ್ಟ್ ವಕೀಲ ಜೆ.ಆರ್.ಜಗದೀಶ್ ಆಕ್ಷೇಪ ವ್ಯಕ್ತಪಡಿಸಿದರಾದರೂ, ನ್ಯಾಯಪೀಠ ಸೀತಾರಾಮ್ ಮತ್ತು ಇತರರ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ತಡೆ ನೀಡಿ ಆದೇಶಿಸಿತು.</p><p><strong>ಪ್ರಕರಣವೇನು?</strong></p><p>ದೊಡ್ಡಬಳ್ಳಾಪುರ ತಾಲ್ಲೂಕಿನ ಹಸನಘಟ್ಟ ಗ್ರಾಮದ ವಿವಿಧ ಸರ್ವೇ ನಂಬರ್ಗಳಲ್ಲಿನ ಒಟ್ಟು 5 ಎಕರೆಗೂ ಹೆಚ್ಚು ವಿಸ್ತೀರ್ಣದ ಜಮೀನಿನಲ್ಲಿ ಒಂದಷ್ಟು ಭಾಗ ತಮ್ಮ ಹೆಸರಿಗೆ ಇದೆ’ ಎಂಬ ಟಿ.ಎನ್.ಸೀತಾರಾಮ್ ಅವರ ದಾವೆಗೆ ಸಂಬಂಧಿಸಿದಂತೆ ಎಂ.ಎ.ಅರವಿಂದ ಕುಮಾರ್ ಮತ್ತು ಸೀತಾರಾಮ್ ನಡುವೆ ತಕರಾರು ನಡೆದಿದೆ.</p><p>ಈ ಸಂಬಂಧ ಎಂ.ಎ.ಅರವಿಂದ ಕುಮಾರ್ ಅವರು, ಟಿ.ಎನ್.ಸೀತಾರಾಮ್, ಕೆ.ಎಸ್.ವಿಜಯಲಕ್ಷ್ಮಿ, ರಾಕೇಶ್ ಮತ್ತು ಶಶಾಂಕ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.</p><p>ದೂರಿನ ಅನ್ವಯ ನಾಲ್ವರೂ ಆರೋಪಿಗಳ ವಿರುದ್ಧ ವಿವಿಧ ಕಲಂಗಳ ಅಡಿ ಎಫ್ಐಆರ್ ದಾಖಲಿಸಲಾಗಿದೆ. ‘ಈ ಕುರಿತಾದ ತನಿಖೆಯನ್ನು ರದ್ದುಪಡಿಸಬೇಕು’ ಎಂದು ಕೋರಿ ಸೀತಾರಾಮ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>