ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ ಅವರು, ’ಅರ್ಜಿದಾರರು ನೀಡಿದ ಹೇಳಿಕೆಯಿಂದ ಯಾವುದೇ ಹಿಂಸಾಚಾರ, ಶಾಂತಿಭಂಗ ಅಥವಾ ಕೋಮು ಸೌಹಾರ್ದತೆಗೆ ಧಕ್ಕೆಯಾದ ಪ್ರಕರಣ ನಡೆದಿಲ್ಲ. ಇದು ರಾಜಕೀಯ ಪ್ರೇರಿತ, ದುರುದ್ದೇಶ ಮತ್ತು ದ್ವೇಷಭಾವನೆಯಿಂದ ದಾಖಲಿಸಿರುವ ದೂರು. ಪೊಲೀಸರು ಆಡಳಿತ ಪಕ್ಷದ ನಾಯಕರ ಒತ್ತಡಕ್ಕೆ ಮಣಿದು ಎಫ್ಐಆರ್ ದಾಖಲಿಸಿದ್ದಾರೆ. ಇದು ಕಾನೂನು ಬಾಹಿರ ಮತ್ತು ಸಂವಿಧಾನದ 14 ಮತ್ತು 21ನೇ ವಿಧಿಯ ಅಡಿಯಲ್ಲಿ ಕೊಡಲಾದ ಮೂಲ ಹಕ್ಕುಗಳ ಉಲ್ಲಂಘನೆ. ಆದ್ದರಿಂದ ತನಿಖೆಗೆ ತಡೆ ನೀಡಬೇಕು‘ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ತನಿಖೆಗೆ ತಡೆ ನೀಡಿ ವಿಚಾರಣೆ ಮುಂದೂಡಿದೆ.