<p><strong>ಬೆಂಗಳೂರು</strong>: ‘ಸೈಬರ್ ಭದ್ರತೆಯ ಕಾರಣದಿಂದ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಹೈಕೋರ್ಟ್ ಪೀಠಗಳ ವಿಡಿಯೊ ಕಾನ್ಫರೆನ್ಸ್ ಸೇವೆಯನ್ನು ಸದ್ಯಕ್ಕೆ ಅಮಾನತು ಮಾಡಲಾಗಿದೆ‘ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್ ತಿಳಿಸಿದ್ದಾರೆ.</p>.<p>ಹೈಕೋರ್ಟ್ ಪ್ರಧಾನ ಪೀಠದಲ್ಲಿನ ಕೆಲವು ನ್ಯಾಯಪೀಠಗಳ ಕಲಾಪದಲ್ಲಿ ಸೋಮವಾರ ವಿಡಿಯೊ ಸ್ಟ್ರೀಮಿಂಗ್ ಖಾತೆಗೆ ಧಕ್ಕೆ ಉಂಟಾದ ಹಿನ್ನೆಲೆಯಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿನ ಲೈವ್ ಸ್ಟ್ರೀಮಿಂಗ್ ಮತ್ತು ವಿಡಿಯೊ ಕಾನ್ಫರೆನ್ಸ್ ಅನ್ನು ನಿರ್ಬಂಧಿಸಲಾಗಿದೆ.</p>.<p>ಈ ಸಂಬಂಧ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರು ಮಂಗಳವಾರ ಬೆಳಗ್ಗೆ ಮುಕ್ತ ನ್ಯಾಯಾಲಯದ ಕಲಾಪದಲ್ಲಿ ಈ ವಿಷಯವನ್ನು ಮೌಖಿಕವಾಗಿ ಪ್ರಸ್ತಾಪಿಸಿ, ‘ಇದೊಂದು ಅನಿರ್ಬಂಧಿತ ಪರಿಸ್ಥಿತಿಯಾಗಿದ್ದು ಸಹಕರಿಸಬೇಕು. ವ್ಯವಸ್ಥೆಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ‘ ಎಂದರು.</p>.<p><strong>ಎಫ್ಐಆರ್ ದಾಖಲು:</strong> ಬೆಂಗಳೂರಿನ ಪ್ರಧಾನ ಪೀಠದ ಹೈಕೋರ್ಟ್ ಹಾಲ್ ಸಂಖ್ಯೆ 6,12,18,23,24,26 ಮತ್ತು ಇತರೆ ಹಾಲ್ಗಳಲ್ಲಿ ಸೋಮವಾರ (ಡಿ.4) ವಿಡಿಯೊ ಕಾನ್ಫರೆನ್ಸ್ ಕಲಾಪ ನಡೆಯುತ್ತಿದ್ದಾಗ ಬೆಳಗಿನ 10 ಗಂಟೆಯಿಂದ 2 ಗಂಟೆಯ ಮಧ್ಯದಲ್ಲಿ ಲಿಂಕ್ ಮೂಲಕ ಭಾಗವಹಿಸಿದ್ದ ಅಪರಿಚಿತರು ಅಶ್ಲೀಲ ಚಿತ್ರಗಳನ್ನು ಪ್ರದರ್ಶಿಸಿ ವಿಚಾರಣೆಗೆ ಅಡ್ಡಿಪಡಿಸಿರುತ್ತಾರೆ‘ ಎಂದು ಆರೋಪಿಸಿ ಹೈಕೋರ್ಟ್ ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಎನ್.ಸುರೇಶ್ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಈ ಸಂಬಂಧ ಸಿಇಎನ್ ಠಾಣೆಯ ಬೆಂಗಳೂರು ಕೇಂದ್ರ ವಿಭಾಗದ ಠಾಣಾಧಿಕಾರಿ ಮಾಹಿತಿ ತಂತ್ರಜ್ಞಾನ ಕಾಯ್ದೆ–2008ರ ಕಲಂ 67 ಮತ್ತು 67 ಎ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸೈಬರ್ ಭದ್ರತೆಯ ಕಾರಣದಿಂದ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಹೈಕೋರ್ಟ್ ಪೀಠಗಳ ವಿಡಿಯೊ ಕಾನ್ಫರೆನ್ಸ್ ಸೇವೆಯನ್ನು ಸದ್ಯಕ್ಕೆ ಅಮಾನತು ಮಾಡಲಾಗಿದೆ‘ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್ ತಿಳಿಸಿದ್ದಾರೆ.</p>.<p>ಹೈಕೋರ್ಟ್ ಪ್ರಧಾನ ಪೀಠದಲ್ಲಿನ ಕೆಲವು ನ್ಯಾಯಪೀಠಗಳ ಕಲಾಪದಲ್ಲಿ ಸೋಮವಾರ ವಿಡಿಯೊ ಸ್ಟ್ರೀಮಿಂಗ್ ಖಾತೆಗೆ ಧಕ್ಕೆ ಉಂಟಾದ ಹಿನ್ನೆಲೆಯಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿನ ಲೈವ್ ಸ್ಟ್ರೀಮಿಂಗ್ ಮತ್ತು ವಿಡಿಯೊ ಕಾನ್ಫರೆನ್ಸ್ ಅನ್ನು ನಿರ್ಬಂಧಿಸಲಾಗಿದೆ.</p>.<p>ಈ ಸಂಬಂಧ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರು ಮಂಗಳವಾರ ಬೆಳಗ್ಗೆ ಮುಕ್ತ ನ್ಯಾಯಾಲಯದ ಕಲಾಪದಲ್ಲಿ ಈ ವಿಷಯವನ್ನು ಮೌಖಿಕವಾಗಿ ಪ್ರಸ್ತಾಪಿಸಿ, ‘ಇದೊಂದು ಅನಿರ್ಬಂಧಿತ ಪರಿಸ್ಥಿತಿಯಾಗಿದ್ದು ಸಹಕರಿಸಬೇಕು. ವ್ಯವಸ್ಥೆಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ‘ ಎಂದರು.</p>.<p><strong>ಎಫ್ಐಆರ್ ದಾಖಲು:</strong> ಬೆಂಗಳೂರಿನ ಪ್ರಧಾನ ಪೀಠದ ಹೈಕೋರ್ಟ್ ಹಾಲ್ ಸಂಖ್ಯೆ 6,12,18,23,24,26 ಮತ್ತು ಇತರೆ ಹಾಲ್ಗಳಲ್ಲಿ ಸೋಮವಾರ (ಡಿ.4) ವಿಡಿಯೊ ಕಾನ್ಫರೆನ್ಸ್ ಕಲಾಪ ನಡೆಯುತ್ತಿದ್ದಾಗ ಬೆಳಗಿನ 10 ಗಂಟೆಯಿಂದ 2 ಗಂಟೆಯ ಮಧ್ಯದಲ್ಲಿ ಲಿಂಕ್ ಮೂಲಕ ಭಾಗವಹಿಸಿದ್ದ ಅಪರಿಚಿತರು ಅಶ್ಲೀಲ ಚಿತ್ರಗಳನ್ನು ಪ್ರದರ್ಶಿಸಿ ವಿಚಾರಣೆಗೆ ಅಡ್ಡಿಪಡಿಸಿರುತ್ತಾರೆ‘ ಎಂದು ಆರೋಪಿಸಿ ಹೈಕೋರ್ಟ್ ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಎನ್.ಸುರೇಶ್ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಈ ಸಂಬಂಧ ಸಿಇಎನ್ ಠಾಣೆಯ ಬೆಂಗಳೂರು ಕೇಂದ್ರ ವಿಭಾಗದ ಠಾಣಾಧಿಕಾರಿ ಮಾಹಿತಿ ತಂತ್ರಜ್ಞಾನ ಕಾಯ್ದೆ–2008ರ ಕಲಂ 67 ಮತ್ತು 67 ಎ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>