<p><strong>ಬೆಂಗಳೂರು:</strong> ಪ್ರಾಥಮಿಕ ಶಾಲೆಗಳಲ್ಲಿ 6ರಿಂದ 8ನೇ ತರಗತಿಗೆ ಬೋಧಿಸುವ ಪದವೀಧರ ಶಿಕ್ಷಕರನ್ನು ಹೊರತುಪಡಿಸಿ ಉಳಿದ ಶಿಕ್ಷಕರನ್ನು 1ರಿಂದ 5ನೇ ತರಗತಿವರೆಗಿನ ಪ್ರಾಥಮಿಕ ಶಾಲಾ ಶಿಕ್ಷಕರೆಂದು ಪರಿಗಣಿಸಲು ಸರ್ಕಾರ ನಿರ್ಧರಿಸಿರುವುದರ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲು ಶಿಕ್ಷಕರು ನಿರ್ಧರಿಸಿದ್ದಾರೆ.</p>.<p>ಜೂನ್ 29ರಂದು ತರಗತಿ ಮುಗಿದ ನಂತರ ರಾಜ್ಯದ ಎಲ್ಲಜಿಲ್ಲಾಧಿಕಾರಿ ಕಚೇರಿಗಳ ಬಳಿ ಮೌನ ಪ್ರತಿಭಟನೆ ನಡೆಸಲಾಗುವುದು. ಸರ್ಕಾರದ ನಿರ್ಧಾರ ಬದಲಾಗದಿದ್ದಲ್ಲಿ ಜುಲೈ 1ರಿಂದ 6ರಿಂದ 8ನೇ ತರಗತಿಗೆ ಪಾಠ ಮಾಡುವುದಿಲ್ಲ ಎಂದು ಶಿಕ್ಷಕರು ಎಚ್ಚರಿಸಿದ್ದಾರೆ.</p>.<p>‘ನಮ್ಮಲ್ಲಿ 90 ಸಾವಿರದಷ್ಟು ಮಂದಿ ಪದವೀಧರ ಶಿಕ್ಷಕರೇ ಇದ್ದಾರೆ.ಹೆಚ್ಚಿನವರು ಸಂಬಳವನ್ನೂ ಬಿಟ್ಟುಕೊಟ್ಟು ಪದವಿ/ ಸ್ನಾತಕೋತ್ತರ ಪದವಿ, ಪಿಎಚ್ಡಿ ಗಳಿಸಿದ್ದಾರೆ.ಪದವೀಧರ ಶಿಕ್ಷಕರನ್ನಾಗಿ ನೇಮಕ ಮಾಡುವುದಿದ್ದರೆ ಮೊದಲಿಗೆ ನಮಗೆ ಅವಕಾಶ ಕೊಡಿ, ಹೆಚ್ಚುವರಿ ಹುದ್ದೆ ಉಳಿದರಷ್ಟೇ ಇತರರಿಗೆ ಅವಕಾಶ ಕಲ್ಪಿಸಿ ಎಂದು ಸರ್ಕಾರವನ್ನು ಪದೇ ಪದೇ ಕೇಳುತ್ತಲೇ ಇದ್ದೇವೆ. ಸರ್ಕಾರ ಈ ಮನವಿಗೆ ಸೊಪ್ಪು ಹಾಕದಿದ್ದರೆ ನಮ್ಮ ಹೋರಾಟ ತೀವ್ರಗೊಳಿಸುವುದು ನಿಶ್ಚಿತ’ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಪದಾಧಿಕಾರಿ ಹೇಮಂತ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಾಥಮಿಕ ಶಾಲೆಗಳಲ್ಲಿ 6ರಿಂದ 8ನೇ ತರಗತಿಗೆ ಬೋಧಿಸುವ ಪದವೀಧರ ಶಿಕ್ಷಕರನ್ನು ಹೊರತುಪಡಿಸಿ ಉಳಿದ ಶಿಕ್ಷಕರನ್ನು 1ರಿಂದ 5ನೇ ತರಗತಿವರೆಗಿನ ಪ್ರಾಥಮಿಕ ಶಾಲಾ ಶಿಕ್ಷಕರೆಂದು ಪರಿಗಣಿಸಲು ಸರ್ಕಾರ ನಿರ್ಧರಿಸಿರುವುದರ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲು ಶಿಕ್ಷಕರು ನಿರ್ಧರಿಸಿದ್ದಾರೆ.</p>.<p>ಜೂನ್ 29ರಂದು ತರಗತಿ ಮುಗಿದ ನಂತರ ರಾಜ್ಯದ ಎಲ್ಲಜಿಲ್ಲಾಧಿಕಾರಿ ಕಚೇರಿಗಳ ಬಳಿ ಮೌನ ಪ್ರತಿಭಟನೆ ನಡೆಸಲಾಗುವುದು. ಸರ್ಕಾರದ ನಿರ್ಧಾರ ಬದಲಾಗದಿದ್ದಲ್ಲಿ ಜುಲೈ 1ರಿಂದ 6ರಿಂದ 8ನೇ ತರಗತಿಗೆ ಪಾಠ ಮಾಡುವುದಿಲ್ಲ ಎಂದು ಶಿಕ್ಷಕರು ಎಚ್ಚರಿಸಿದ್ದಾರೆ.</p>.<p>‘ನಮ್ಮಲ್ಲಿ 90 ಸಾವಿರದಷ್ಟು ಮಂದಿ ಪದವೀಧರ ಶಿಕ್ಷಕರೇ ಇದ್ದಾರೆ.ಹೆಚ್ಚಿನವರು ಸಂಬಳವನ್ನೂ ಬಿಟ್ಟುಕೊಟ್ಟು ಪದವಿ/ ಸ್ನಾತಕೋತ್ತರ ಪದವಿ, ಪಿಎಚ್ಡಿ ಗಳಿಸಿದ್ದಾರೆ.ಪದವೀಧರ ಶಿಕ್ಷಕರನ್ನಾಗಿ ನೇಮಕ ಮಾಡುವುದಿದ್ದರೆ ಮೊದಲಿಗೆ ನಮಗೆ ಅವಕಾಶ ಕೊಡಿ, ಹೆಚ್ಚುವರಿ ಹುದ್ದೆ ಉಳಿದರಷ್ಟೇ ಇತರರಿಗೆ ಅವಕಾಶ ಕಲ್ಪಿಸಿ ಎಂದು ಸರ್ಕಾರವನ್ನು ಪದೇ ಪದೇ ಕೇಳುತ್ತಲೇ ಇದ್ದೇವೆ. ಸರ್ಕಾರ ಈ ಮನವಿಗೆ ಸೊಪ್ಪು ಹಾಕದಿದ್ದರೆ ನಮ್ಮ ಹೋರಾಟ ತೀವ್ರಗೊಳಿಸುವುದು ನಿಶ್ಚಿತ’ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಪದಾಧಿಕಾರಿ ಹೇಮಂತ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>