ಪ್ರಕರಣವೇನು?: ಚಿಂತಾಮಣಿಯ ಗಜಾನನ ಸರ್ಕಲ್ ಬಳಿ 2023ರ ಅಕ್ಟೋಬರ್ 13ರಂದು ಸಂಜೆ 6.15ರ ವೇಳೆಯಲ್ಲಿ ಅಪರಿಚಿತರ ಗುಂಪೊಂದು ಅಗ್ರಹಾರ ಮುರಳಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿ ಪರಾರಿಯಾಗಿತ್ತು. ಸ್ಥಳೀಯರು ಮುರಳಿ ಅವರನ್ನು ಚಿಕಿತ್ಸೆಗೆ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.