ಅರ್ಜಿಯಲ್ಲಿ ಏನಿದೆ?:
‘ಬೆಂಗಳೂರು ನಗರ ಜಿಲ್ಲೆಯ, ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದ ಸರ್ವೇ ನಂಬರ್ 160, 164/1, 164/2, 150, 137, 135 ಮತ್ತು 46ರ ಸ್ಥಿರ ಸ್ವತ್ತನ್ನು ಪ್ರತಿವಾದಿ ‘ಆರ್ಟ್ ಆಫ್ ಲಿವಿಂಗ್’ನ ಶ್ರೀ ಶ್ರೀ ರವಿಶಂಕರ್ ಗುರೂಜಿ ಒತ್ತುವರಿ ಮಾಡಿದ್ದಾರೆ. ಸರ್ಕಾರಿ ಜಾಗ, ಕೆರೆ, ರಾಜಕಾಲುವೆ, ನೀರು ಹರಿಯುವ ಹಳ್ಳ ಹಾಗೂ ಇತರೆ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ವಸತಿ ಸಮುಚ್ಚಯ ಹಾಗೂ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆ. ಇವುಗಳ ತೆರವಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸರಿಗೆ ನೀಡಿದ ದೂರುಗಳ ಕುರಿತಂತೆ ಯಾವುದೇ ಕ್ರಮ ಜರುಗಿಸಿಲ್ಲ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.