ವಕೀಲರಾದ ಗೀತಾ ಮಿಶ್ರ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ‘ಚಿತ್ರೋದ್ಯಮ ಮತ್ತು ರಾಜಕಾರಣಿಗಳ ಸಂಬಂಧಿಕರು ಚಾಲನೆ ಮಾಡುವ ಸಾಕಷ್ಟು ವಾಹನಗಳು ಅಪಘಾತಕ್ಕೆ ಈಡಾಗುತ್ತಿವೆ. ಡ್ರಗ್ಸ್ ಜಾಲದ ಬಗ್ಗೆ ಸಿಸಿಬಿ ಪೊಲೀಸರು ಉತ್ತಮವಾಗಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಕಿಂಗ್ಪಿನ್ಗಳನ್ನು ಬಂಧಿಸುತ್ತಿಲ್ಲ. ಹೀಗಾಗಿ ಎಸ್ಐಟಿ ರಚನೆ ಮಾಡಬೇಕು ಮತ್ತು ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡಕ್ಕೆ (ಎನ್ಐಎ) ವಹಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.