<p><strong>ಬೆಂಗಳೂರು: </strong>ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಕಾರಾಗೃಹಗಳಿಗೆ ನೀಡಿರುವ ಮಾರ್ಗದರ್ಶಿ ಸೂತ್ರಗಳನ್ನು (ಎಸ್ಒಪಿ) ಮಾರ್ಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಮೈಸೂರು ಜೈಲಿನಲ್ಲಿರುವಅಮೋಲ್ ಕಾಳೆ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.</p>.<p>‘ರೋಗ ಲಕ್ಷಣ ಹೊಂದಿರುವ ಕೈದಿಗಳಿಗೆ ಕಾರಾಗೃಹಗಳಲ್ಲಿ ಪ್ರತ್ಯೇಕ ಕೊಠಡಿಗಳಿಲ್ಲ. ಎಲ್ಲರನ್ನು ಒಂದೇ ಕೊಠಡಿಯಲ್ಲಿ ಇರಿಸಲಾಗುತ್ತಿದೆ’ ಎಂದು ಅರ್ಜಿದಾರರು ದೂರಿದ್ದಾರೆ.</p>.<p>‘ನ್ಯಾಯಾಲಯಕ್ಕೆ ಹೋಗಿ ವಾಪಸ್ ಜೈಲಿಗೆ ಕಳುಹಿಸುವಾಗ ಕೋವಿಡ್ ಪರೀಕ್ಷೆ ನಡೆಸಬೇಕು ಎಂಬುದನ್ನು ಸೇರಿಸಿ ಎಸ್ಒಪಿ ಮಾರ್ಪಡಿಸಬೇಕು’ ಎಂದು ಪೀಠ ತಿಳಿಸಿತು. ಅರ್ಜಿದಾರರ ಆರೋಗ್ಯ ತಪಾಸಣೆ ನಡೆಸಿ ಪ್ರಮಾಣ ಪತ್ರ ಸಲ್ಲಿಸುವಂತೆ ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಕಾರಾಗೃಹಗಳಿಗೆ ನೀಡಿರುವ ಮಾರ್ಗದರ್ಶಿ ಸೂತ್ರಗಳನ್ನು (ಎಸ್ಒಪಿ) ಮಾರ್ಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಮೈಸೂರು ಜೈಲಿನಲ್ಲಿರುವಅಮೋಲ್ ಕಾಳೆ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.</p>.<p>‘ರೋಗ ಲಕ್ಷಣ ಹೊಂದಿರುವ ಕೈದಿಗಳಿಗೆ ಕಾರಾಗೃಹಗಳಲ್ಲಿ ಪ್ರತ್ಯೇಕ ಕೊಠಡಿಗಳಿಲ್ಲ. ಎಲ್ಲರನ್ನು ಒಂದೇ ಕೊಠಡಿಯಲ್ಲಿ ಇರಿಸಲಾಗುತ್ತಿದೆ’ ಎಂದು ಅರ್ಜಿದಾರರು ದೂರಿದ್ದಾರೆ.</p>.<p>‘ನ್ಯಾಯಾಲಯಕ್ಕೆ ಹೋಗಿ ವಾಪಸ್ ಜೈಲಿಗೆ ಕಳುಹಿಸುವಾಗ ಕೋವಿಡ್ ಪರೀಕ್ಷೆ ನಡೆಸಬೇಕು ಎಂಬುದನ್ನು ಸೇರಿಸಿ ಎಸ್ಒಪಿ ಮಾರ್ಪಡಿಸಬೇಕು’ ಎಂದು ಪೀಠ ತಿಳಿಸಿತು. ಅರ್ಜಿದಾರರ ಆರೋಗ್ಯ ತಪಾಸಣೆ ನಡೆಸಿ ಪ್ರಮಾಣ ಪತ್ರ ಸಲ್ಲಿಸುವಂತೆ ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>