<p><strong>ಬೆಂಗಳೂರು:</strong> ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಎಸ್ಸಿ-ಎಸ್ಟಿ) ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ಆರೋಪಗಳಡಿ ಸುಳ್ಳು ದೂರು ದಾಖಲಿಸಿದ್ದ ಶಿಕ್ಷಕರೊಬ್ಬರಿಂದ ₹ 1.5 ಲಕ್ಷ ವಸೂಲಿ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.</p>.<p>ಈ ಸಂಬಂಧ ಬಾಗಲಕೋಟೆ ಜಿಲ್ಲೆಯ ಮರಡಿ ಮಲ್ಲೇಶ್ವರ ಹೈಸ್ಕೂಲ್ ಮುಖ್ಯ ಶಿಕ್ಷಕ ಶಿವಲಿಂಗಪ್ಪ ಬಿ. ಕೆರಕಲ ಮಟ್ಟಿ ವಿರುದ್ಧದ ಪ್ರಕರಣಗಳನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ರದ್ದುಗೊಳಿಸಿದೆ.</p>.<p>"ಅರ್ಜಿದಾರ ಶಿವಲಿಂಗಪ್ಪ ಬಿ.ಕೆರಕಲಮಟ್ಟಿ ವಿರುದ್ಧ ಶಿಕ್ಷಕ ಚಂದ್ರು ರಾಥೋಡ್ ಕ್ರಿಮಿನಲ್ ದೂರು ದಾಖಲಿಸಿರುವುದು, ನಂತರ ಸಮಾಜ ಕಲ್ಯಾಣ ಇಲಾಖೆಯಿಂದ ಆರ್ಥಿಕ ನೆರವು ಪಡೆದಿರುವುದು ಸಾಬೀತಾಗಿದೆ. ಆದರೆ, ಅವರ ಈ ದೂರುಗಳು ನಕಲಿಯಾಗಿದ್ದು, ಸುಳ್ಳಿನಿಂದ ಮತ್ತು ದುರುದ್ದೇಶದಿಂದ ಕೂಡಿವೆ ಎಂಬುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ತೆರಿಗೆ ಹಣದಿಂದ ಪಡೆದಿರುವ ₹ 1.5 ಲಕ್ಷ ವಾಪಸು ಪಡೆಯಬೇಕು" ಎಂದು ನ್ಯಾಯಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ.</p>.<p>ಪ್ರಕರಣವೇನು?: ಚಂದ್ರು ರಾಥೋಡ್ 1988ರ ಡಿಸೆಂಬರ್ 12ರಂದು ಶಿಕ್ಷಕರಾಗಿ ಸೇವೆಗೆ ಸೇರಿದ್ದರು. ದುರ್ನಡತೆ ಹಿನ್ನೆಲೆಯಲ್ಲಿ 2012ರಲ್ಲಿ ಅವರನ್ನು ಸೇವೆಯಿಂದ ವಜಾ ಮಾಡಲಾಗಿತ್ತು. ಈ ಕುರಿತಂತೆ ರಾಥೋಡ್ ನ್ಯಾಯಾಂಗ ಹೋರಾಟ ನಡೆಸಿ ಯಶಸ್ವಿಯಾಗಿದ್ದರು. ಇದರನ್ವಯ, "ರಾಥೋಡ್ ಅವರನ್ನು ಪುನಃ ಸೇವೆಗೆ ಸೇರಿಸಿಕೊಳ್ಳಬೇಕು. ಹಿಂಬಾಕಿ ನೀಡಬೇಕು" ಎಂದು ಹೈಕೋರ್ಟ್ 2020ರಲ್ಲಿ ಸರ್ಕಾರಕ್ಕೆ ಆದೇಶಿಸಿತ್ತು.</p>.<p>ಏತನ್ಮಧ್ಯೆ ಚಂದ್ರು ರಾಥೋಡ್, "ಮುಖ್ಯ ಶಿಕ್ಷಕರು ನನ್ನನ್ನು ಪುನಃ ಸೇವೆಗೆ ಸೇರಿಸಿಕೊಳ್ಳಲು ₹ 10.50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ. ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ನನ್ನ ಮೆಲೆ ದೌರ್ಜನ್ಯ ಎಸಗಿದ್ದಾರೆ" ಎಂದು ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಒಟ್ಟು ಮೂರು ದೂರು ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ ಶಿವಲಿಂಗಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಎಸ್ಸಿ-ಎಸ್ಟಿ) ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ಆರೋಪಗಳಡಿ ಸುಳ್ಳು ದೂರು ದಾಖಲಿಸಿದ್ದ ಶಿಕ್ಷಕರೊಬ್ಬರಿಂದ ₹ 1.5 ಲಕ್ಷ ವಸೂಲಿ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.</p>.<p>ಈ ಸಂಬಂಧ ಬಾಗಲಕೋಟೆ ಜಿಲ್ಲೆಯ ಮರಡಿ ಮಲ್ಲೇಶ್ವರ ಹೈಸ್ಕೂಲ್ ಮುಖ್ಯ ಶಿಕ್ಷಕ ಶಿವಲಿಂಗಪ್ಪ ಬಿ. ಕೆರಕಲ ಮಟ್ಟಿ ವಿರುದ್ಧದ ಪ್ರಕರಣಗಳನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ರದ್ದುಗೊಳಿಸಿದೆ.</p>.<p>"ಅರ್ಜಿದಾರ ಶಿವಲಿಂಗಪ್ಪ ಬಿ.ಕೆರಕಲಮಟ್ಟಿ ವಿರುದ್ಧ ಶಿಕ್ಷಕ ಚಂದ್ರು ರಾಥೋಡ್ ಕ್ರಿಮಿನಲ್ ದೂರು ದಾಖಲಿಸಿರುವುದು, ನಂತರ ಸಮಾಜ ಕಲ್ಯಾಣ ಇಲಾಖೆಯಿಂದ ಆರ್ಥಿಕ ನೆರವು ಪಡೆದಿರುವುದು ಸಾಬೀತಾಗಿದೆ. ಆದರೆ, ಅವರ ಈ ದೂರುಗಳು ನಕಲಿಯಾಗಿದ್ದು, ಸುಳ್ಳಿನಿಂದ ಮತ್ತು ದುರುದ್ದೇಶದಿಂದ ಕೂಡಿವೆ ಎಂಬುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ತೆರಿಗೆ ಹಣದಿಂದ ಪಡೆದಿರುವ ₹ 1.5 ಲಕ್ಷ ವಾಪಸು ಪಡೆಯಬೇಕು" ಎಂದು ನ್ಯಾಯಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ.</p>.<p>ಪ್ರಕರಣವೇನು?: ಚಂದ್ರು ರಾಥೋಡ್ 1988ರ ಡಿಸೆಂಬರ್ 12ರಂದು ಶಿಕ್ಷಕರಾಗಿ ಸೇವೆಗೆ ಸೇರಿದ್ದರು. ದುರ್ನಡತೆ ಹಿನ್ನೆಲೆಯಲ್ಲಿ 2012ರಲ್ಲಿ ಅವರನ್ನು ಸೇವೆಯಿಂದ ವಜಾ ಮಾಡಲಾಗಿತ್ತು. ಈ ಕುರಿತಂತೆ ರಾಥೋಡ್ ನ್ಯಾಯಾಂಗ ಹೋರಾಟ ನಡೆಸಿ ಯಶಸ್ವಿಯಾಗಿದ್ದರು. ಇದರನ್ವಯ, "ರಾಥೋಡ್ ಅವರನ್ನು ಪುನಃ ಸೇವೆಗೆ ಸೇರಿಸಿಕೊಳ್ಳಬೇಕು. ಹಿಂಬಾಕಿ ನೀಡಬೇಕು" ಎಂದು ಹೈಕೋರ್ಟ್ 2020ರಲ್ಲಿ ಸರ್ಕಾರಕ್ಕೆ ಆದೇಶಿಸಿತ್ತು.</p>.<p>ಏತನ್ಮಧ್ಯೆ ಚಂದ್ರು ರಾಥೋಡ್, "ಮುಖ್ಯ ಶಿಕ್ಷಕರು ನನ್ನನ್ನು ಪುನಃ ಸೇವೆಗೆ ಸೇರಿಸಿಕೊಳ್ಳಲು ₹ 10.50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ. ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ನನ್ನ ಮೆಲೆ ದೌರ್ಜನ್ಯ ಎಸಗಿದ್ದಾರೆ" ಎಂದು ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಒಟ್ಟು ಮೂರು ದೂರು ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ ಶಿವಲಿಂಗಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>