ರಾಜ್ಯದಲ್ಲಿ ಬೋಧಕರ ಕೊರತೆ ಇದೆ. ಹಲವು ದಶಕಗಳಿಂದ ನೇಮಕಾತಿ ನಡೆದಿಲ್ಲ. ಕಲಾ ವಿದ್ಯಾರ್ಥಿಯೊಬ್ಬ ವಿಜ್ಞಾನದ ಒಂದು ವಿಷಯ ತೆಗೆದುಕೊಂಡರೆ ಆ ಕಾಲೇಜಿನಲ್ಲಿ ಅಗತ್ಯ ಪ್ರಯೋಗಾಲಯ ಬೇಕಿರುತ್ತದೆ. ಅದಕ್ಕೆ ತಕ್ಕಂತಹ ಸೌಕರ್ಯ ಒದಗಿಸದೇ ಹೊಸ ನೀತಿ ಅನುಷ್ಠಾನಗೊಳಿಸಿದರೆ ಆ ವಿದ್ಯಾರ್ಥಿಗೆ ಅನ್ಯಾಯ ಮಾಡಿದಂತೆ ಆಗುತ್ತದೆ. ಇಂತಹ ಎಲ್ಲ ನ್ಯೂನತೆಗಳನ್ನು ಸರಿಪಡಿಸಿಕೊಂಡು, ಇತರೆ ರಾಜ್ಯಗಳು, ಹಿಂದಿನ ಶಿಕ್ಷಣ ನೀತಿಯನ್ನು ಪರಿಶೀಲಿಸಿ, ಎನ್ಇಪಿಗೆ ವಿರುದ್ಧವಲ್ಲದ ಸಮಗ್ರ ಶಿಕ್ಷಣ ನೀತಿ ಜಾರಿಗೆ ತರಲಾಗುವುದು ಎಂದರು.