<p><strong>ಬೆಂಗಳೂರು</strong>: ‘ಶಾಲೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ಪೂರಕ ಆದೇಶ ಹೊರಡಿಸಿ, ಕಾನೂನು ರೀತಿಯಲ್ಲಿ ರಾಜ್ಯ ಸರ್ಕಾರವೇ ವಿವಾದ ಹುಟ್ಟು ಹಾಕಿದೆ. ಇದು ನಾಗರಿಕ ಸರ್ಕಾರಕ್ಕೆ ಶೋಭೆ ತರುವುದಿಲ್ಲ’ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.</p>.<p>‘ಶಾಲೆಗಳಲ್ಲಿ ಧರ್ಮದ ಆಧಾರದಲ್ಲಿ ತಾರತಮ್ಯ ಮನೋಭಾವ ಸೃಷ್ಟಿಗೆ ಕಾಂಗ್ರೆಸ್ ಸರ್ಕಾರವೇ ಅವಕಾಶ ನೀಡಿದ್ದು, ಇದರಿಂದ ಉದ್ಭವಿಸುವ ಸಮಸ್ಯೆಗಳಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ ಹೊರಬೇಕು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಮುಸ್ಲಿಮರ ತುಷ್ಟೀಕರಣ ಕ್ಕೆಂದೇ ಸರ್ಕಾರ ಈ ಆದೇಶ ಮಾಡಿದೆ. 1980ರ ಶಾಲಾ ಸಮವಸ್ತ್ರ ಕಾನೂನು ಅಡಿಯಲ್ಲಿ ನಮ್ಮ ಸರ್ಕಾರ ಆದೇಶ ಮಾಡಿತ್ತು. ಅದನ್ನು ಹೈಕೋರ್ಟ್ ಕೂಡ ಎತ್ತಿಹಿಡಿದಿತ್ತು. ಸುಪ್ರೀಂ ಕೋರ್ಟ್ನಲ್ಲೂ ಅದಕ್ಕೆ ವಿಭಜಿತ ತೀರ್ಪು ಬಂದಿತ್ತು. ಈ ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್ನಲ್ಲಿ ಇರುವಾಗಲೇ ಮಕ್ಕಳಲ್ಲಿ ಭೇದ–ಭಾವದ ಆತಂಕ ಮೂಡಿಸುವ ಕೆಲಸ ಸರ್ಕಾರ ಮಾಡುತ್ತಿದೆ’ ಎಂದು ಬೊಮ್ಮಾಯಿ ಟೀಕಿಸಿದ್ದಾರೆ.</p>.<p>‘ರಾಜ್ಯ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹದಗೆಡಿಸಿದೆ. ಯಾವುದೇ ಸ್ಪಷ್ಟವಾದ ನೀತಿ ಇಲ್ಲ. ಗುಣಮಟ್ಟದ ವಿದ್ಯಾರ್ಜನೆ ಆಗುತ್ತಿಲ್ಲ. ಶಿಕ್ಷಕರ ಕೊರತೆ ಇದೆ. ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಇಂತಹ ಆದೇಶ ಮಾಡಿದ್ದಾರೆ. ಈ ಆದೇಶಕ್ಕೆ ತುಷ್ಟೀಕರಣದ ರಾಜಕಾರಣ ಬಿಟ್ಟರೆ ಬೇರೇ ಯಾವುದೇ ಕಾರಣವಿಲ್ಲ’ ಎಂದು ಅವರು ತಿಳಿಸಿದ್ದಾರೆ.</p>.<p>‘ಜಗತ್ತಿನ ಹಲವು ಮುಸ್ಲಿಂ ರಾಷ್ಟ್ರಗಳಲ್ಲಿ ಹೆಣ್ಣುಮಕ್ಕಳು ಹಿಜಾಬ್ ತೊರೆದು ನಿತ್ಯ ಜೀವನ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಹಿಜಾಬ್ ಧರಿಸಲು ಆದೇಶ ಮಾಡಿರುವುದು ಸೂಕ್ತವಲ್ಲ. ಕೂಡಲೇ ಆದೇಶ ಹಿಂದಕ್ಕೆ ಪಡೆಯಬೇಕು’ ಎಂದು ಬೊಮ್ಮಾಯಿ ಒತ್ತಾಯಿಸಿದ್ದಾರೆ.</p>.<p><strong>ಧರ್ಮ ಆಚರಣೆಗೆ, ಶಿಕ್ಷಣ ಬದುಕಿಗೆ: ಮಹದೇವಪ್ಪ</strong></p><p>‘ಶಾಲಾ ಕಾಲೇಜುಗಳಲ್ಲಿ ಜನಿವಾರ, ಶಿವದಾರ ಮತ್ತು ಹಿಜಾಬ್ ಹಾಕುವುದು ಅಪರಾಧವಲ್ಲ. ಎಲ್ಲ ಧರ್ಮಗಳಿಗೂ ಸಂವಿಧಾನ ಅವಕಾಶ ಕಲ್ಪಿಸಿದ್ದು, ಅದರ ಆಶಯಕ್ಕೆ ಪೂರಕವಾಗಿಯೇ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು’ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. </p><p>‘ಶಾಲಾ ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳು ಧರ್ಮಾತೀತ ಮತ್ತು ಜಾತ್ಯತೀತ ಸ್ಥಳಗಳಾಗಿವೆ. ಶಿಕ್ಷಣ ಪಡೆಯುವ ಜಾಗದಲ್ಲಿ ಬಾಬಾ ಸಾಹೇಬರು ಹೇಳುವ ಹಾಗೆ ಜ್ಞಾನಾರ್ಜನೆಯೇ ಮೊದಲ ಆದ್ಯತೆ ಆಗಲಿ. ಧರ್ಮ ಆಚರಣೆಗೆ-ಶಿಕ್ಷಣ ಬದುಕಿಗೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಎಂಬ ಸರಳ ಸತ್ಯ ಎಲ್ಲರಿಗೂ ಅರ್ಥವಾಗಲಿ’ ಎಂದು ಅವರು ಪ್ರತಿಪಾದಿಸಿದ್ದಾರೆ.</p><p>ಶಿಕ್ಷಣ ಪಡೆದುಕೊಳ್ಳಬೇಕಾದ ಜಾಗದಲ್ಲಿ ಧಾರ್ಮಿಕ ಉಡುಪುಗಳನ್ನು ಹಾಕಬೇಕೇ ಅಥವಾ ಬೇಡವೇ ಎಂಬ ವಿಷಯಕ್ಕಿಂತ ಶಿಕ್ಷಣ ಪಡೆಯುವುದು ಮತ್ತು ಮಕ್ಕಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಜ್ಞಾನ ಸಂಪಾದನೆ ಮಾಡುವುದು ಆದ್ಯತೆ ಆಗಬೇಕು ಎಂದು ಮಹದೇವಪ್ಪ ಹೇಳಿದ್ದಾರೆ.</p>.<div><blockquote>ಕಾಂಗ್ರೆಸ್ ತನ್ನ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳಲು ದೇಶದ ಸಂವಿಧಾನವನ್ನು ಒತ್ತೆ<br>ಇಡುವುದಕ್ಕೂ ಹೇಸುವುದಿಲ್ಲ. ಈಗ ಮತ್ತೆ ಹಿಜಾಬ್ ಧ್ಯಾನ ಆರಂಭಿಸಿದೆ. ಇಂಥ ಓಲೈಕೆ ರಾಜಕಾರಣದಿಂದ ದೇಶಾದ್ಯಂತ ಕಾಂಗ್ರೆಸ್ ‘ಕಸ’ವಾಗಿದೆ </blockquote><span class="attribution">ವಿ. ಸುನಿಲ್ ಕುಮಾರ್, ಬಿಜೆಪಿ ಶಾಸಕ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br>260516-51-1754717229</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಶಾಲೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ಪೂರಕ ಆದೇಶ ಹೊರಡಿಸಿ, ಕಾನೂನು ರೀತಿಯಲ್ಲಿ ರಾಜ್ಯ ಸರ್ಕಾರವೇ ವಿವಾದ ಹುಟ್ಟು ಹಾಕಿದೆ. ಇದು ನಾಗರಿಕ ಸರ್ಕಾರಕ್ಕೆ ಶೋಭೆ ತರುವುದಿಲ್ಲ’ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.</p>.<p>‘ಶಾಲೆಗಳಲ್ಲಿ ಧರ್ಮದ ಆಧಾರದಲ್ಲಿ ತಾರತಮ್ಯ ಮನೋಭಾವ ಸೃಷ್ಟಿಗೆ ಕಾಂಗ್ರೆಸ್ ಸರ್ಕಾರವೇ ಅವಕಾಶ ನೀಡಿದ್ದು, ಇದರಿಂದ ಉದ್ಭವಿಸುವ ಸಮಸ್ಯೆಗಳಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ ಹೊರಬೇಕು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಮುಸ್ಲಿಮರ ತುಷ್ಟೀಕರಣ ಕ್ಕೆಂದೇ ಸರ್ಕಾರ ಈ ಆದೇಶ ಮಾಡಿದೆ. 1980ರ ಶಾಲಾ ಸಮವಸ್ತ್ರ ಕಾನೂನು ಅಡಿಯಲ್ಲಿ ನಮ್ಮ ಸರ್ಕಾರ ಆದೇಶ ಮಾಡಿತ್ತು. ಅದನ್ನು ಹೈಕೋರ್ಟ್ ಕೂಡ ಎತ್ತಿಹಿಡಿದಿತ್ತು. ಸುಪ್ರೀಂ ಕೋರ್ಟ್ನಲ್ಲೂ ಅದಕ್ಕೆ ವಿಭಜಿತ ತೀರ್ಪು ಬಂದಿತ್ತು. ಈ ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್ನಲ್ಲಿ ಇರುವಾಗಲೇ ಮಕ್ಕಳಲ್ಲಿ ಭೇದ–ಭಾವದ ಆತಂಕ ಮೂಡಿಸುವ ಕೆಲಸ ಸರ್ಕಾರ ಮಾಡುತ್ತಿದೆ’ ಎಂದು ಬೊಮ್ಮಾಯಿ ಟೀಕಿಸಿದ್ದಾರೆ.</p>.<p>‘ರಾಜ್ಯ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹದಗೆಡಿಸಿದೆ. ಯಾವುದೇ ಸ್ಪಷ್ಟವಾದ ನೀತಿ ಇಲ್ಲ. ಗುಣಮಟ್ಟದ ವಿದ್ಯಾರ್ಜನೆ ಆಗುತ್ತಿಲ್ಲ. ಶಿಕ್ಷಕರ ಕೊರತೆ ಇದೆ. ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಇಂತಹ ಆದೇಶ ಮಾಡಿದ್ದಾರೆ. ಈ ಆದೇಶಕ್ಕೆ ತುಷ್ಟೀಕರಣದ ರಾಜಕಾರಣ ಬಿಟ್ಟರೆ ಬೇರೇ ಯಾವುದೇ ಕಾರಣವಿಲ್ಲ’ ಎಂದು ಅವರು ತಿಳಿಸಿದ್ದಾರೆ.</p>.<p>‘ಜಗತ್ತಿನ ಹಲವು ಮುಸ್ಲಿಂ ರಾಷ್ಟ್ರಗಳಲ್ಲಿ ಹೆಣ್ಣುಮಕ್ಕಳು ಹಿಜಾಬ್ ತೊರೆದು ನಿತ್ಯ ಜೀವನ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಹಿಜಾಬ್ ಧರಿಸಲು ಆದೇಶ ಮಾಡಿರುವುದು ಸೂಕ್ತವಲ್ಲ. ಕೂಡಲೇ ಆದೇಶ ಹಿಂದಕ್ಕೆ ಪಡೆಯಬೇಕು’ ಎಂದು ಬೊಮ್ಮಾಯಿ ಒತ್ತಾಯಿಸಿದ್ದಾರೆ.</p>.<p><strong>ಧರ್ಮ ಆಚರಣೆಗೆ, ಶಿಕ್ಷಣ ಬದುಕಿಗೆ: ಮಹದೇವಪ್ಪ</strong></p><p>‘ಶಾಲಾ ಕಾಲೇಜುಗಳಲ್ಲಿ ಜನಿವಾರ, ಶಿವದಾರ ಮತ್ತು ಹಿಜಾಬ್ ಹಾಕುವುದು ಅಪರಾಧವಲ್ಲ. ಎಲ್ಲ ಧರ್ಮಗಳಿಗೂ ಸಂವಿಧಾನ ಅವಕಾಶ ಕಲ್ಪಿಸಿದ್ದು, ಅದರ ಆಶಯಕ್ಕೆ ಪೂರಕವಾಗಿಯೇ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು’ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. </p><p>‘ಶಾಲಾ ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳು ಧರ್ಮಾತೀತ ಮತ್ತು ಜಾತ್ಯತೀತ ಸ್ಥಳಗಳಾಗಿವೆ. ಶಿಕ್ಷಣ ಪಡೆಯುವ ಜಾಗದಲ್ಲಿ ಬಾಬಾ ಸಾಹೇಬರು ಹೇಳುವ ಹಾಗೆ ಜ್ಞಾನಾರ್ಜನೆಯೇ ಮೊದಲ ಆದ್ಯತೆ ಆಗಲಿ. ಧರ್ಮ ಆಚರಣೆಗೆ-ಶಿಕ್ಷಣ ಬದುಕಿಗೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಎಂಬ ಸರಳ ಸತ್ಯ ಎಲ್ಲರಿಗೂ ಅರ್ಥವಾಗಲಿ’ ಎಂದು ಅವರು ಪ್ರತಿಪಾದಿಸಿದ್ದಾರೆ.</p><p>ಶಿಕ್ಷಣ ಪಡೆದುಕೊಳ್ಳಬೇಕಾದ ಜಾಗದಲ್ಲಿ ಧಾರ್ಮಿಕ ಉಡುಪುಗಳನ್ನು ಹಾಕಬೇಕೇ ಅಥವಾ ಬೇಡವೇ ಎಂಬ ವಿಷಯಕ್ಕಿಂತ ಶಿಕ್ಷಣ ಪಡೆಯುವುದು ಮತ್ತು ಮಕ್ಕಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಜ್ಞಾನ ಸಂಪಾದನೆ ಮಾಡುವುದು ಆದ್ಯತೆ ಆಗಬೇಕು ಎಂದು ಮಹದೇವಪ್ಪ ಹೇಳಿದ್ದಾರೆ.</p>.<div><blockquote>ಕಾಂಗ್ರೆಸ್ ತನ್ನ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳಲು ದೇಶದ ಸಂವಿಧಾನವನ್ನು ಒತ್ತೆ<br>ಇಡುವುದಕ್ಕೂ ಹೇಸುವುದಿಲ್ಲ. ಈಗ ಮತ್ತೆ ಹಿಜಾಬ್ ಧ್ಯಾನ ಆರಂಭಿಸಿದೆ. ಇಂಥ ಓಲೈಕೆ ರಾಜಕಾರಣದಿಂದ ದೇಶಾದ್ಯಂತ ಕಾಂಗ್ರೆಸ್ ‘ಕಸ’ವಾಗಿದೆ </blockquote><span class="attribution">ವಿ. ಸುನಿಲ್ ಕುಮಾರ್, ಬಿಜೆಪಿ ಶಾಸಕ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br>260516-51-1754717229</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>