ಬೆಂಗಳೂರು: ‘ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ’ ಎಂಬ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ, ‘ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ರಾಜ್ಯ ದಲ್ಲಿ ಕನ್ನಡವೇ ಅಧಿಕೃತ ಭಾಷೆ’ ಎಂದು ಬಿಜೆಪಿಯವರೇ ಆದ ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿರುವುದು ವಿಭಿನ್ನ ಚರ್ಚೆ ಹುಟ್ಟು ಹಾಕಿದೆ.